AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿಣದ ಅದಿರು ರಫ್ತು ವಿಚಾರದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ; ಸಚಿವ ಜೆ.ಸಿ.ಮಾಧುಸ್ವಾಮಿ

ಸರ್ಕಾರ ಸುಪ್ರೀಂಕೋರ್ಟ್​ಗೆ ಈಗಾಗಲೇ ಅಫಿಡವಿಟ್ ಸಲ್ಲಿಸಿದೆ. 2021ರಲ್ಲಿ ಸರ್ಕಾರ ಕೈಗೊಂಡ ಗಣಿ ನೀತಿ ಮುಂದುವರಿಕೆ ಬಗ್ಗೆ ತನ್ನ ನಿಲುವು ಸ್ಪಷ್ಟಪಡಿಸಿದೆ.

ಕಬ್ಬಿಣದ ಅದಿರು ರಫ್ತು ವಿಚಾರದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ; ಸಚಿವ ಜೆ.ಸಿ.ಮಾಧುಸ್ವಾಮಿ
ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ
TV9 Web
| Edited By: |

Updated on: Apr 18, 2022 | 10:05 PM

Share

ಬೆಂಗಳೂರು: ಕಬ್ಬಿಣದ ಅದಿರು ರಫ್ತು (Iron Ore Export) ವಿಚಾರದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ರಫ್ತು ರದ್ದು ನೀತಿ ಮುಂದುವರಿಸಲು ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ಸಂಪುಟ ಸಭೆ ನಂತರ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆ ನೀಡಿದ್ದಾರೆ. ಅದಿರು ರಫ್ತು ಕುರಿತು ಸುಪ್ರೀಂಕೋರ್ಟ್​​ನಲ್ಲಿ ನಾಳೆ ವಿಚಾರಣೆಯಿದೆ. ಅದಿರು ರಫ್ತು ಮಾಡುವ ಬಗ್ಗೆ ಸುಪ್ರೀಂಕೋರ್ಟ್ ಕರ್ನಾಟಕ ರಾಜ್ಯ ಸರ್ಕಾರದ ನಿಲುವು ಕೇಳಿದೆ. ಸರ್ಕಾರ ಸುಪ್ರೀಂಕೋರ್ಟ್​ಗೆ ಈಗಾಗಲೇ ಅಫಿಡವಿಟ್ ಸಲ್ಲಿಸಿದೆ. 2021ರಲ್ಲಿ ಸರ್ಕಾರ ಕೈಗೊಂಡ ಗಣಿ ನೀತಿ ಮುಂದುವರಿಕೆ ಬಗ್ಗೆ ತನ್ನ ನಿಲುವು ಸ್ಪಷ್ಟಪಡಿಸಿದೆ. ಕಬ್ಬಿಣದ ಅದಿರು ರಫ್ತು ಮಾಡಬಹುದು ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ. ಆದರೆ, ಕರ್ನಾಟಕ ರಾಜ್ಯದಲ್ಲಿ ಈ ಹಿಂದಿನ ಘಟನಾವಳಿಗಳು, ಇತಿಹಾಸ ಗಮನದಲ್ಲಿಟ್ಟುಕೊಂಡು ನಿರ್ಧಾರ ಮಾಡಿದ್ದೇವೆ. ಅದಿರು ರಫ್ತು ರದ್ದು ನೀತಿ ಮುಂದುವರಿಸಲು ನಿರ್ಧರಿಸಿದ್ದೇವೆ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ಗೇಣಿದಾರರ ಮೇಲಿನ ಕೇಸ್​ಗಳ ಕಾಯ್ದೆ ತಿದ್ದುಪಡಿಗೆ ಅನುಮೋದನೆ ಬಗ್ಗೆ ಸಂಪುಟ ಸಭೆ ಬಳಿಕ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಪಶುವೈದ್ಯಕೀಯ ಕಾಲೇಜಿಗೆ 136 ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ರಾಜ್ಯದಲ್ಲಿ 2 ಲಕ್ಷ ಮನೆಗಳ ನಿರ್ಮಾಣಕ್ಕೆ ಇದ್ದ ಅಡೆತಡೆ ತೆರವುಗೊಳಿಸಲಾಗಿದೆ. ಹೊಸ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುವುದು ಎಂದು ಮಾಧುಸ್ವಾಮಿ ಹೇಳಿದರು. ಹರಿಹರ ರೈಲ್ವೆ ಮೇಲ್ಸೇತುವೆಗೆ 36.30 ಕೋಟಿ ರೂ. ದತ್ತಾಂಶ ಕೇಂದ್ರ ನಿರ್ಮಾಣಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಕೆರೆ ತುಂಬಲು 105 ಕೋಟಿ ರೂ. ಮಂಜೂರು ಮಾಡಲಾಗಿದ್ದು, ಸೋನಿ ವರ್ಲ್ಡ್ ಬಳಿ ಎಲಿವೇಟೆಡ್ ಕಾರಿಡಾರ್​ಗೆ ಮರು ಟೆಂಡರ್ ನೀಡಲಾಗಿದೆ. ಇಂದಿರಾ ಕ್ಯಾಂಟೀನ್​ಗಳ ಸ್ಥಳಾಂತರಕ್ಕೆ ಸರ್ವೆ ವರದಿ ಕೇಳಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ;

ಗುಜರಾತ್​​ ತಲುಪಿದ ಪ್ರಧಾನಿ ಮೋದಿ; ರಾಜ್​ಕೋಟ್​ನಲ್ಲಿ ಮಾರಿಷಸ್ ಪ್ರಧಾನಮಂತ್ರಿಗೆ ಭರ್ಜರಿ ಸ್ವಾಗತ, ರೋಡ್ ಶೋ​

Gold-Silver Rate: ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ 18ರ ಸೋಮವಾರದ ಚಿನ್ನ, ಬೆಳ್ಳಿ ದರ ಇಲ್ಲಿದೆ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ