AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HIV ತವರಾಗುತ್ತಿದೆಯಾ ಬೆಂಗಳೂರು?: ಯುವ ಜನತೆಯಲ್ಲೇ ಸೋಂಕು ಪತ್ತೆಯಿಂದ ಹೆಚ್ಚಿದ ಆತಂಕ

ಬೆಂಗಳೂರಿನ ಯುವ ಜನತೆಯಲ್ಲಿ ಹೆಚ್‌ಐವಿ ಸೋಂಕು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜುಗಳು ಮತ್ತು ಐಟಿ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಲು ಹಾಗೂ ಹೈ-ರಿಸ್ಕ್ ವಲಯಗಳಲ್ಲಿ ಅರಿವು ಮೂಡಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಕಳೆದ 5 ತಿಂಗಳ ಅವಧಿಯಲ್ಲಿ 4,795 HIV ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಪೈಕಿ ಸೋಂಕಿಗೆ ತುತ್ತಾದವರು ಬಹುತೇಕ ಸಲಿಂಗಿಗಳು ಎನ್ನಲಾಗಿದೆ.

HIV ತವರಾಗುತ್ತಿದೆಯಾ ಬೆಂಗಳೂರು?: ಯುವ ಜನತೆಯಲ್ಲೇ ಸೋಂಕು ಪತ್ತೆಯಿಂದ ಹೆಚ್ಚಿದ ಆತಂಕ
ಸಾಂದರ್ಭಿಕ ಚಿತ್ರImage Credit source: Getty Images
Vinay Kashappanavar
| Edited By: |

Updated on: Jul 30, 2026 | 3:21 PM

Share

ಬೆಂಗಳೂರು, ಜುಲೈ 30:  ಸಲಿಂಗ ಕಾಮದ ಪರಿಣಾಮವಾಗಿ ಬೆಂಗಳೂರಿನಲ್ಲಿ ಹೆಚ್​​ಐವಿ ಸೋಂಕಿತ ಪುರುಷರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಡೇಟಿಂಗ್​​ ಆ್ಯಪ್​​ಗಳ ಹೆಚ್ಚಳವೂ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಆತಂಕಕಾರಿ ವಿಚಾರವೆಂದರೆ ಕಾಲೇಜು ಮತ್ತು ವಿಶ್ವ ವಿದ್ಯಾಲಯಗಳ ಹಾಸ್ಟೆಲ್​​ ವಿದ್ಯಾರ್ಥಿಗಳು ಮತ್ತು ಪಿಜಿಗಳಲ್ಲಿ ನೆಲೆಸಿರುವವರೇ ಹೆಚ್ಚಿನ ಪೈಕಿ ಸೋಂಕಿಗೆ ತುತ್ತಾಗಿದ್ದಾರೆ. ಹೀಗಾಗಿ ಶಾಲಾ ಕಾಲೇಜುಗಳಲ್ಲಿ ಈ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

ಐದೇ ತಿಂಗಳಲ್ಲಿ 4,795 HIV ಪಾಸಿಟಿವ್ ಕೇಸ್ ಪತ್ತೆ

ಕಳೆದ 5 ತಿಂಗಳ ಅವಧಿಯಲ್ಲಿ 4,795 HIV ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಪೈಕಿ ಸೋಂಕಿಗೆ ತುತ್ತಾದವರು ಬಹುತೇಕ ಸಲಿಂಗಿಗಳು. ದೇಶದಲ್ಲಿ ಅತಿ ಹೆಚ್ಚು ಏಡ್ಸ್ ಕೇಸ್​​ ದಾಖಲಾಗುವ ರಾಜ್ಯವಾಗಿ ಕರ್ನಾಟಕ ಮಾರ್ಪಟ್ಟಿದ್ದು, ಅದರಲ್ಲೂ ಬೆಂಗಳೂರಿನಲ್ಲಿಯೇ ಅಧಿಕ ಪ್ರಕರಣಗಳು ದಾಖಲಾಗುತ್ತಿರೋದು ಆರೋಗ್ಯ ಇಲಾಖೆಯ ಟೆನ್ಷನ್​​ಗೆ ಕಾರಣವಾಗಿದೆ. ಗಮನಿಸಲೇ ಬೇಕಾದ ವಿಷಯ ಎಂದರೆ ಅವಿವಾಹಿತರಲ್ಲಿಯೇ HIV ಸೋಂಕು ಹೆಚ್ಚಿದ್ದು, ಇದರ ಪ್ರಮಾಣ ಶೇ. 20-25ರಷ್ಟಿದೆ ಎನ್ನಲಾಗಿದೆ.

ಇದನ್ನೂ ಓದಿ: ಮಕ್ಕಳನ್ನೂ ಕಾಡುತ್ತಿದೆ ಹೃದಯಾಘಾತದ ಸಮಸ್ಯೆ! ಆತಂಕ ಬೇಡ, ಜಾಗೃತಿ ಇರಲಿ ಎಂದ ಬೆಂಗಳೂರಿನ ವೈದ್ಯರು

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಯ ಯೋಜನಾ ನಿರ್ದೇಶಕಿ ಪದ್ಮಾ ಬಸವಂತಪ್ಪ, ಸೋಂಕಿತರಿಂದ ಇತರರಿಗೂ ಅಪಾಯ ಇರುವ ಕಾರಣ ಕಾಲೇಜು, ಐಟಿ ಕಂಪನಿಗಳು, ಕಾರ್ಮಿಕರು, ಚಾಲಕರು, ಟ್ರಕ್ ಚಾಲಕರಿಗೆ ಜಾಗೃತಿ ಮೂಡಿಸಬೇಕು. ಸಲಿಂಗ ಕಾಮ, ಲೈಂಗಿಕ ಕಾರ್ಯಕರ್ತರು ಹೈ ರಿಸ್ಕ್ ಕ್ಯಾಟಗರಿಗೆ ಬರ್ತಾರೆ. ಹೀಗಾಗಿ ಇವರಿಗೆ ಅರಿವು ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಮಾಡಲಾಗ್ತಿದೆ. ಇತ್ತೀಚಿನ ದಿನಗಳಲ್ಲಿ ಡೇಟಿಂಗ್ ಆಪ್​​ಗಳ ಮೂಲಕ ಲೈಂಗಿಕ ಚಟುವಟಿಕೆಗಳು ಹೆಚ್ಚಾಗ್ತಿವೆ ಎಂದು ತಿಳಿಸಿದ್ದಾರೆ. ಆರೋಗ್ಯ ಇಲಾಖೆಯ ನಿಯಮದ ಪ್ರಕಾರ ಹೆಚ್​​ಐವಿ ಪರೀಕ್ಷೆ ಕಡ್ಡಾಯ ಮಾಡಲು ಸಾಧ್ಯವಿಲ್ಲ, ಗಮನಕ್ಕೆ ತರದೇ ಟೆಸ್ಟ್ ಮಾಡಲು ಆಗಲ್ಲ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್