AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟಲ್ಮೆಂಟ್ ಅಡ್ಡೆಯಾಗಿತ್ತಾ ರೇಣುಕಾ ಸ್ವಾಮಿ ಮೇಲೆ ಹಂತಕರು ಹಲ್ಲೆ ನಡೆಸಿ ಕೊಂದ ಸ್ಪಾಟ್​?

ದರ್ಶನ್(Darshan Thoogudeepa) ಹಾಗೂ ಆತನ ಸಹಚರರು ಸೇರಿಕೊಂಡು ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಚಿತ್ರದುರ್ಗದ ರೇಣುಕಾ ಸ್ವಾಮಿ ಮೇಲೆ ಹಂತಕರು ಹಲ್ಲೆ ನಡೆಸಿ ಕೊಂದ ಜಾಗ ಆರ್​ಆರ್​ ನಗರ(RR Nagar) ಸೇರಿದಂತೆ ಸುತ್ತಮುತ್ತಲಿನ ಏರಿಯಾಗಳಲ್ಲಿ ಇದೊಂದು ಸೆಟಲ್ಮೆಂಟ್ ಅಡ್ಡೆಯಾಗಿತ್ತು ಎನ್ನಲಾಗುತ್ತಿದೆ.

ಸೆಟಲ್ಮೆಂಟ್ ಅಡ್ಡೆಯಾಗಿತ್ತಾ ರೇಣುಕಾ ಸ್ವಾಮಿ ಮೇಲೆ ಹಂತಕರು ಹಲ್ಲೆ ನಡೆಸಿ ಕೊಂದ ಸ್ಪಾಟ್​?
ಸೆಟಲ್ಮೆಂಟ್ ಅಡ್ಡೆಯಾಗಿತ್ತಾ ರೇಣುಕಾ ಸ್ವಾಮಿ ಕೊಲೆ ಮಾಡಿದ ಸ್ಪಾಟ್​?
Shivaprasad B
| Edited By: |

Updated on:Jun 12, 2024 | 2:57 PM

Share

ಬೆಂಗಳೂರು, ಜೂ.12: ನಟ ದರ್ಶನ್(Darshan Thoogudeepa) ಅವರ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎನ್ನುವ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿ(Renuka Swamy) ಎಂಬುವವರನ್ನು ದರ್ಶನ್ ಹಾಗೂ ಆತನ ಸಹಚರರು ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೃತ ರೇಣುಕಾ ಸ್ವಾಮಿ ಮೇಲೆ ಹಂತಕರು ಹಲ್ಲೆ ನಡೆಸಿ ಕೊಂದ ಜಾಗ ಆರ್​ಆರ್​ ನಗರ(RR Nagar) ಸೇರಿದಂತೆ ಸುತ್ತಮುತ್ತಲಿನ ಏರಿಯಾಗಳಲ್ಲಿ ಇದೊಂದು ಸೆಟಲ್ಮೆಂಟ್ ಅಡ್ಡೆಯಾಗಿತ್ತು ಎನ್ನಲಾಗುತ್ತಿದೆ.

ಹೌದು, ಪ್ರೈವೇಟ್ ಫೈನಾನ್ಸ್​ಗಳಿಗೆ ಇಎಂಐ ಪೇ ಮಾಡದ ವಾಹನಗಳನ್ನು ಸೀಜ್ ಮಾಡಿ ತಂದು ನಿಲ್ಲಿಸುವ ವೆಹಿಕಲ್ ಶೆಡ್ ಇದಾಗಿದ್ದು, ಬೆದರಿಕೆ ಒಡ್ಡಲು, ವ್ಯಕ್ತಿಗಳನ್ನು ಕರೆತಂದು ಹಲ್ಲೆ ನಡೆಸಲು ಇದೇ ಶೆಡ್​ನಲ್ಲಿ ಕೂಡಿ ಹಾಕುತ್ತಿದ್ದರು ಎನ್ನಲಾಗುತ್ತಿದೆ. ಫೈನಾನ್ಸ್ ವ್ಯವಹಾರದಲ್ಲಿ ಹಣ ಪಡೆದು ಕೊಡದೆ ಇದ್ದವರನ್ನು ಇಲ್ಲಿಗೆ ಕರೆತಂದು ಬೆದರಿಸುವ ಜಾಗವಾಗಿತ್ತು. ಹಲ್ಲೆ ನಡೆಸಲು ಅವಶ್ಯಕವಾದ ಬ್ಯಾಟ್, ಸ್ಟಿಕ್, ರಾಡ್, ದೊಣ್ಣೆ ಇನ್ನಿತರ ಮಾರಕಾಸ್ತ್ರಗಳನ್ನು ಖಾಯಂ ಆಗಿಯೇ ಇಲ್ಲಿಯೇ ಇಟ್ಟಿರುತ್ತಾರೆ.

ಇದನ್ನೂ ಓದಿ:ರೇಣುಕಾ ಸ್ವಾಮಿ ಕೊಲೆಯಾದ ಶೆಡ್ ಮಾಲೀಕ ಹೇಳಿದ್ದು ಹೀಗೆ

ಸಂಜೆಯಾಗುತ್ತಿದ್ದಂತೆ ನಿಶ್ಯಬ್ದವಾಗಿ ವಿರಳ ಜನಸಂಖ್ಯೆಯಿಂದ ಕೂಡಿರುವ ಈ ಪ್ರದೇಶದಲ್ಲಿ ವ್ಯಕ್ತಿಗಳನ್ನು ಕರೆದುಕೊಂಡು ಬಂದು ಬೆದರಿಕೆ ಹಾಕಿ, ಹಲ್ಲೆ ನಡೆಸುವ ಕ್ರಿಮಿನಲ್ ಚಟುವಟಿಕೆಗಳು ಈ ಶೆಡ್​ನಲ್ಲಿ ನಡೆಯುತ್ತಿರುವ ಕುರಿತು ಕೇಳಿಬಂದಿದೆ. ಇನ್ನು ಚಿತ್ರದುರ್ಗದ ನಿವಾಸಿ ಆಗಿದ್ದ ರೇಣುಕಾ ಸ್ವಾಮಿಯನ್ನು ಅಪಹರಣ ಮಾಡಿ, ಬೆಂಗಳೂರಿನ ಹೊರವಲಯದ ಶೆಡ್​ಗೆ ತಂದು ಅಲ್ಲಿ ಆತನ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಜೊತೆಗೆ ಘಟನೆ ಕುರಿತು ಆ ಶೆಡ್​ನ ಮಾಲೀಕ ಉದ್ಯಮಿ ಪಟ್ಟಣಗೆರೆ ಜಯಣ್ಣ ಅವರ ಸಂಬಂಧಿ ಜೊತೆಗೆ ದರ್ಶನ್ ಆಪ್ತ ವಿನಯ್​ನನ್ನು ಸಹ ಬಂಧನ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:53 pm, Wed, 12 June 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?