AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟಲ್ಮೆಂಟ್ ಅಡ್ಡೆಯಾಗಿತ್ತಾ ರೇಣುಕಾ ಸ್ವಾಮಿ ಮೇಲೆ ಹಂತಕರು ಹಲ್ಲೆ ನಡೆಸಿ ಕೊಂದ ಸ್ಪಾಟ್​?

ದರ್ಶನ್(Darshan Thoogudeepa) ಹಾಗೂ ಆತನ ಸಹಚರರು ಸೇರಿಕೊಂಡು ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಚಿತ್ರದುರ್ಗದ ರೇಣುಕಾ ಸ್ವಾಮಿ ಮೇಲೆ ಹಂತಕರು ಹಲ್ಲೆ ನಡೆಸಿ ಕೊಂದ ಜಾಗ ಆರ್​ಆರ್​ ನಗರ(RR Nagar) ಸೇರಿದಂತೆ ಸುತ್ತಮುತ್ತಲಿನ ಏರಿಯಾಗಳಲ್ಲಿ ಇದೊಂದು ಸೆಟಲ್ಮೆಂಟ್ ಅಡ್ಡೆಯಾಗಿತ್ತು ಎನ್ನಲಾಗುತ್ತಿದೆ.

ಸೆಟಲ್ಮೆಂಟ್ ಅಡ್ಡೆಯಾಗಿತ್ತಾ ರೇಣುಕಾ ಸ್ವಾಮಿ ಮೇಲೆ ಹಂತಕರು ಹಲ್ಲೆ ನಡೆಸಿ ಕೊಂದ ಸ್ಪಾಟ್​?
ಸೆಟಲ್ಮೆಂಟ್ ಅಡ್ಡೆಯಾಗಿತ್ತಾ ರೇಣುಕಾ ಸ್ವಾಮಿ ಕೊಲೆ ಮಾಡಿದ ಸ್ಪಾಟ್​?
Shivaprasad B
| Updated By: ಕಿರಣ್ ಹನುಮಂತ್​ ಮಾದಾರ್|

Updated on:Jun 12, 2024 | 2:57 PM

Share

ಬೆಂಗಳೂರು, ಜೂ.12: ನಟ ದರ್ಶನ್(Darshan Thoogudeepa) ಅವರ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎನ್ನುವ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿ(Renuka Swamy) ಎಂಬುವವರನ್ನು ದರ್ಶನ್ ಹಾಗೂ ಆತನ ಸಹಚರರು ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೃತ ರೇಣುಕಾ ಸ್ವಾಮಿ ಮೇಲೆ ಹಂತಕರು ಹಲ್ಲೆ ನಡೆಸಿ ಕೊಂದ ಜಾಗ ಆರ್​ಆರ್​ ನಗರ(RR Nagar) ಸೇರಿದಂತೆ ಸುತ್ತಮುತ್ತಲಿನ ಏರಿಯಾಗಳಲ್ಲಿ ಇದೊಂದು ಸೆಟಲ್ಮೆಂಟ್ ಅಡ್ಡೆಯಾಗಿತ್ತು ಎನ್ನಲಾಗುತ್ತಿದೆ.

ಹೌದು, ಪ್ರೈವೇಟ್ ಫೈನಾನ್ಸ್​ಗಳಿಗೆ ಇಎಂಐ ಪೇ ಮಾಡದ ವಾಹನಗಳನ್ನು ಸೀಜ್ ಮಾಡಿ ತಂದು ನಿಲ್ಲಿಸುವ ವೆಹಿಕಲ್ ಶೆಡ್ ಇದಾಗಿದ್ದು, ಬೆದರಿಕೆ ಒಡ್ಡಲು, ವ್ಯಕ್ತಿಗಳನ್ನು ಕರೆತಂದು ಹಲ್ಲೆ ನಡೆಸಲು ಇದೇ ಶೆಡ್​ನಲ್ಲಿ ಕೂಡಿ ಹಾಕುತ್ತಿದ್ದರು ಎನ್ನಲಾಗುತ್ತಿದೆ. ಫೈನಾನ್ಸ್ ವ್ಯವಹಾರದಲ್ಲಿ ಹಣ ಪಡೆದು ಕೊಡದೆ ಇದ್ದವರನ್ನು ಇಲ್ಲಿಗೆ ಕರೆತಂದು ಬೆದರಿಸುವ ಜಾಗವಾಗಿತ್ತು. ಹಲ್ಲೆ ನಡೆಸಲು ಅವಶ್ಯಕವಾದ ಬ್ಯಾಟ್, ಸ್ಟಿಕ್, ರಾಡ್, ದೊಣ್ಣೆ ಇನ್ನಿತರ ಮಾರಕಾಸ್ತ್ರಗಳನ್ನು ಖಾಯಂ ಆಗಿಯೇ ಇಲ್ಲಿಯೇ ಇಟ್ಟಿರುತ್ತಾರೆ.

ಇದನ್ನೂ ಓದಿ:ರೇಣುಕಾ ಸ್ವಾಮಿ ಕೊಲೆಯಾದ ಶೆಡ್ ಮಾಲೀಕ ಹೇಳಿದ್ದು ಹೀಗೆ

ಸಂಜೆಯಾಗುತ್ತಿದ್ದಂತೆ ನಿಶ್ಯಬ್ದವಾಗಿ ವಿರಳ ಜನಸಂಖ್ಯೆಯಿಂದ ಕೂಡಿರುವ ಈ ಪ್ರದೇಶದಲ್ಲಿ ವ್ಯಕ್ತಿಗಳನ್ನು ಕರೆದುಕೊಂಡು ಬಂದು ಬೆದರಿಕೆ ಹಾಕಿ, ಹಲ್ಲೆ ನಡೆಸುವ ಕ್ರಿಮಿನಲ್ ಚಟುವಟಿಕೆಗಳು ಈ ಶೆಡ್​ನಲ್ಲಿ ನಡೆಯುತ್ತಿರುವ ಕುರಿತು ಕೇಳಿಬಂದಿದೆ. ಇನ್ನು ಚಿತ್ರದುರ್ಗದ ನಿವಾಸಿ ಆಗಿದ್ದ ರೇಣುಕಾ ಸ್ವಾಮಿಯನ್ನು ಅಪಹರಣ ಮಾಡಿ, ಬೆಂಗಳೂರಿನ ಹೊರವಲಯದ ಶೆಡ್​ಗೆ ತಂದು ಅಲ್ಲಿ ಆತನ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಜೊತೆಗೆ ಘಟನೆ ಕುರಿತು ಆ ಶೆಡ್​ನ ಮಾಲೀಕ ಉದ್ಯಮಿ ಪಟ್ಟಣಗೆರೆ ಜಯಣ್ಣ ಅವರ ಸಂಬಂಧಿ ಜೊತೆಗೆ ದರ್ಶನ್ ಆಪ್ತ ವಿನಯ್​ನನ್ನು ಸಹ ಬಂಧನ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:53 pm, Wed, 12 June 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ