AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ 10 ಜಂಕ್ಷನ್‌ಗಳಲ್ಲಿ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ಕಂಡುಹಿಡಿದ ISEC

ಬೆಂಗಳೂರಿನಾದ್ಯಂತ 10 ಪ್ರಮುಖ ಜಂಕ್ಷನ್‌ಗಳಲ್ಲಿ ಅತಿ ಹೆಚ್ಚು ವಾಹನ ದಟ್ಟಣೆ ಇದ್ದು ಅದನ್ನು ಕಡಿಮೆ ಮಾಡಲು ಅಲ್ಪಾವಧಿ ಮತ್ತು ದೀರ್ಘಾವಧಿ ತಾಂತ್ರಿಕ ಪ್ರಸ್ತಾವಗಳ ಕರಡು ವರದಿಯನ್ನು ಸಲ್ಲಿಸಲಾಗಿದೆ.

ಬೆಂಗಳೂರಿನ 10 ಜಂಕ್ಷನ್‌ಗಳಲ್ಲಿ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ಕಂಡುಹಿಡಿದ ISEC
ಬೆಂಗಳೂರು ಟ್ರಾಫಿಕ್
TV9 Web
| Updated By: ಆಯೇಷಾ ಬಾನು|

Updated on: Aug 06, 2023 | 12:31 PM

Share

ಬೆಂಗಳೂರು, ಆ.06: ಬೆಂಗಳೂರಿನಲ್ಲಿರುವ ಪ್ರಮುಖ ಸಂಶೋಧನಾ ಸಂಸ್ಥೆಯಾದ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆ (ISEC) ನಗರದಲ್ಲಿ ಅಧ್ಯಯನ ನಡೆಸಿ 10 ಜಂಕ್ಷನ್​ಗಳಲ್ಲಿ ಅತಿ ಹೆಚ್ಚು ಟ್ರಾಫಿಕ್ ದಟ್ಟಣೆ ಇದ್ದು ಅದನ್ನು ನಿವಾರಿಸಲು ಶಿಫಾರಸುಗಳೊಂದಿಗೆ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ.

ಬೆಂಗಳೂರಿನಾದ್ಯಂತ 10 ಪ್ರಮುಖ ಜಂಕ್ಷನ್‌ಗಳಲ್ಲಿ ಅತಿ ಹೆಚ್ಚು ವಾಹನ ದಟ್ಟಣೆ ಇದ್ದು ಅದನ್ನು ಕಡಿಮೆ ಮಾಡಲು ಅಲ್ಪಾವಧಿ ಮತ್ತು ದೀರ್ಘಾವಧಿ ತಾಂತ್ರಿಕ ಪ್ರಸ್ತಾವಗಳ ಕರಡು ವರದಿಯನ್ನು ಸಲ್ಲಿಸಲಾಗಿದೆ. ಸಾರಕ್ಕಿ ಜಂಕ್ಷನ್, ಸಿಲ್ಕ್ ಬೋರ್ಡ್, ಕಾಡುಬೀಸನಹಳ್ಳಿ, ಟಿನ್ ಫ್ಯಾಕ್ಟರಿ, ಹೆಬ್ಬಾಳ, ಡೈರಿ ಸರ್ಕಲ್, ಗೊರಗುಂಟೆಪಾಳ್ಯ, ಬನಶಂಕರಿ, ಇಬ್ಬಲೂರು, ಮತ್ತು ಕುಮಾರಸ್ವಾಮಿ ಲೇಔಟ್ ಈ 10 ಜಂಕ್ಷನ್‌ಗಳಲ್ಲಿ ಪ್ರತ್ಯೇಕವಾಗಿ ಕೈಗೊಳ್ಳಬೇಕಿರುವ ತಾಂತ್ರಿಕ ಕ್ರಮ, ಸಿಗ್ನಲ್‌ ನಿರ್ವಹಣೆ, ಎಲಿವೇಟೆಡ್‌ ವಾಕ್‌ವೇ, ಎಲಿವೇಟೆಡ್‌ ರಸ್ತೆ, ಅಂಡರ್‌ಪಾಸ್‌ಗಳನ್ನು ನಿರ್ಮಿಸಲು ಶಿಫಾರಸು ಮಾಡಿದೆ.

ಆನ್-ಗ್ರೌಂಡ್ ಸಮೀಕ್ಷೆ ಮತ್ತು ಕಾರ್ಯಸಾಧ್ಯತೆಯ ಅಧ್ಯಯನವನ್ನು ನಡೆಸಿದ ಐಎಸ್‌ಇಸಿ, ಅಲ್ಪಾವಧಿಯಲ್ಲಿ ಸಿವಿಲ್‌ ಕಾಮಗಾರಿಗಾಗಿ ₹ 25 ಕೋಟಿ ಮೀಸಲಿಡುವಂತೆ ಸರ್ಕಾರವನ್ನು ಕೇಳಿದೆ. ಹೆಚ್ಚುವರಿಯಾಗಿ, ಎಂಟು ಜಂಕ್ಷನ್‌ಗಳು ಮತ್ತು ಕ್ಲಸ್ಟರ್‌ಗಳಲ್ಲಿ ಫುಟ್‌ಪಾತ್‌ಗಳ ನಿರ್ಮಾಣಕ್ಕೆ ನಿರ್ದಿಷ್ಟವಾಗಿ ₹8.9 ಕೋಟಿ ಹಂಚಿಕೆಗೆ ವರದಿಯು ಒತ್ತು ನೀಡಿದೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ವಿವಿಧ ಪಾಲುದಾರರೊಂದಿಗೆ ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಮಾರ್ಗಗಳನ್ನು ಅನ್ವೇಷಿಸಲು ಮತ್ತು ಅದಕ್ಕಾಗಿ ಶಿಫಾರಸುಗಳನ್ನು ಕೋರಿದ್ದಾರೆ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಮರದಿಂದ ಬಿದ್ದು ಮಾಜಿ ಬಿಜೆಪಿ ಶಾಸಕ ಗನ್​ಮ್ಯಾನ್ ಸಾವು, ಕರಡಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ರೈತ ಬಲಿ

ವಾಲ್ಯೂಮ್-ಟು-ಕ್ಯಾಪಾಸಿಟಿ (ವಿ/ಸಿ) ಅನುಪಾತ ಹೆಚ್ಚಿರುವ ಜಂಕ್ಷನ್‌ಗಳಲ್ಲಿ ಪರಿಹಾರವಾಗಿ ಈ ಶಿಫಾರಸನ್ನು ಮುಂದಿಡಲಾಗಿದೆ. ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಇತರ ವಿಧಾನವೆಂದರೆ ವಾಹನಗಳಿಗೆ ಡೈವರ್ಷನ್ ನೀಡುವುದು. ಆದರೆ ಅದು ಸಾಧ್ಯವಾಗದಿದ್ದರೆ, ಇದು ತಾಂತ್ರಿಕವಾಗಿ ಕಾರ್ಯಸಾಧ್ಯವಾದ ಪರಿಹಾರವಾಗಿದೆ ಎಂದು ಅಧ್ಯಯನ ನಡೆಸಿದ ಸಂಶೋಧಕರಲ್ಲಿ ಒಬ್ಬರಾದ ಪ್ರೊ.ಕೃಷ್ಣ ರಾಜ್ ತಿಳಿಸಿದರು.

ಸಾರಕ್ಕಿ, ಡೇರಿ ವೃತ್ತ, ಸಿಲ್ಕ್‌ ಬೋರ್ಡ್‌, ಕುಮಾರಸ್ವಾಮಿ ಲೇಔಟ್‌, ಇಬ್ಬಲೂರುಗಳಲ್ಲಿ ₹3.5 ಕೋಟಿ ವೆಚ್ಚದಲ್ಲಿ ಸ್ಕೈವಾಕ್‌ ಮತ್ತು ₹7 ಕೋಟಿ ವೆಚ್ಚದಲ್ಲಿ ಸಿಎಂಟಿಎ ಜಂಕ್ಷನ್‌ನಲ್ಲಿ ಸುರಂಗ ಮಾರ್ಗ ನಿರ್ಮಿಸಲು ಖಾಸಗಿ ಬಸ್‌ಗಳಿಗೆ ಎಚ್‌ಎಸ್‌ಆರ್‌ ರಸ್ತೆ ಸಮೀಪ ಹಾಗೂ ಬಿಎಂಟಿಸಿ ಬಸ್‌ಗಳಿಗೆ ಸಿಲ್ಕ್‌ ಬೋರ್ಡ್‌ ಸಮೀಪ ವಾಹನ ನಿಲ್ದಾಣಗಳ ಪ್ರತ್ಯೇಕ ನಿರ್ಮಾಣ. ನಾಲ್ಕು ಕಡೆ ಮೆಟ್ರೊ ಜೊತೆಗೆ 8.25 ಕಿ.ಮೀ (ಪ್ರತಿ ಕಿ.ಮೀಗೆ ₹72 ಲಕ್ಷ) ಪಾದಚಾರಿ ಸುಧಾರಣೆ ಸೇರಿದಂತೆ ತಾಂತ್ರಿಕ ಪ್ರಸ್ತಾವಗಳನ್ನು ಸಲ್ಲಿಸಲಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಭರ್ಜರಿ ಮೆಚ್ಚುಗೆ ಪಡೆದ ಕಾಂತಾರ ಟ್ರೇಲರ್​: ರಿಷಬ್ ಶೆಟ್ಟಿ ಸುದ್ದಿಗೋಷ್ಠಿ
ಭರ್ಜರಿ ಮೆಚ್ಚುಗೆ ಪಡೆದ ಕಾಂತಾರ ಟ್ರೇಲರ್​: ರಿಷಬ್ ಶೆಟ್ಟಿ ಸುದ್ದಿಗೋಷ್ಠಿ
ಹುಬ್ಬಳ್ಳಿಯಲ್ಲಿ ಬೈಕ್‌ ಖರೀದಿಗೆ ಮುಗಿಬಿದ್ದ ಗ್ರಾಹಕರು
ಹುಬ್ಬಳ್ಳಿಯಲ್ಲಿ ಬೈಕ್‌ ಖರೀದಿಗೆ ಮುಗಿಬಿದ್ದ ಗ್ರಾಹಕರು
ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ್ರಾ? ಅಂತೆ ಕಂತೆಗಳಿಗೆ ಡಿಕೆ ಶಿವಕುಮಾರ್ ಗರಂ
ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ್ರಾ? ಅಂತೆ ಕಂತೆಗಳಿಗೆ ಡಿಕೆ ಶಿವಕುಮಾರ್ ಗರಂ