AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸ್ ಜೊತೆ ಸೇರಿ ಭಯೋತ್ಪಾದಕ ಕೃತ್ಯಕ್ಕೆ‌‌ ಸಂಚು: ಬೆಂಗಳೂರಿನ ಸೂತ್ರಧಾರಿಗೆ 7 ವರ್ಷ ಜೈಲು ಶಿಕ್ಷೆ

ISIS Terror Plot: ಐಸಿಸ್ ಉಗ್ರ ಸಂಘಟನೆ ಜೊತೆ ಸೇರಿ ಭಯೋತ್ಪಾದಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಕರಣದ ಸೂತ್ರಧಾರಿಗೆ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಹಾಗೂ 48 ಸಾವಿರ ರೂ. ದಂಡ ವಿಧಿಸಿದೆ ಆದೇಶ ಹೊರಡಿಸಿದೆ.

ಐಸಿಸ್ ಜೊತೆ ಸೇರಿ ಭಯೋತ್ಪಾದಕ ಕೃತ್ಯಕ್ಕೆ‌‌ ಸಂಚು: ಬೆಂಗಳೂರಿನ ಸೂತ್ರಧಾರಿಗೆ 7 ವರ್ಷ ಜೈಲು ಶಿಕ್ಷೆ
ಪ್ರಾತಿನಿಧಿಕ ಚಿತ್ರImage Credit source: Getty images
ಶಿವಪ್ರಸಾದ್​ ಬಿ.
| Edited By: |

Updated on: Aug 30, 2026 | 3:10 PM

Share

ಬೆಂಗಳೂರು, ಆಗಸ್ಟ್​​ 30: ಉಗ್ರ ಸಂಘಟನೆ ಐಸಿಸ್ (ISIS) ಜೊತೆ ಸೇರಿ ಭಯೋತ್ಪಾದಕ ಕೃತ್ಯಕ್ಕೆ‌‌ ಸಂಚು ರೂಪಿಸಿದ್ದ ಪ್ರಕರಣದ ಸೂತ್ರಧಾರಿ ಸೈಯದ್ ಫಸಿಯುರ್ ರೆಹಮಾನ್​​ಗೆ ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ಹಾಗೂ 48 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

20 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌

2020ರ ಜನವರಿ 10ರಂದು ಬೆಂಗಳೂರು ಪೊಲೀಸರು ರೆಹಮಾನ್ ವಿರುದ್ಧ ಮೊದಲು ಪ್ರಕರಣ ದಾಖಲಿಸಿದ್ದರು. ಬಳಿಕ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಎನ್‌ಐಎ ತನಿಖೆಯನ್ನು ಕೈಗೆತ್ತಿಕೊಂಡಿತ್ತು. ‘ಅಲ್-ಹಿಂದ್ ಐಸಿಸ್’ ಸಂಚಿಗೆ ಸಂಬಂಧಿಸಿದಂತೆ ಎನ್‌ಐಎ ತೀವ್ರ ವಿಚಾರಣೆ ನಡೆಸಿ, ಇದುವರೆಗೆ ಒಟ್ಟು 20 ಆರೋಪಿಗಳ ವಿರುದ್ಧ 3 ಚಾರ್ಜ್‌ಶೀಟ್‌ಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಈ ಪ್ರಕರಣದ ಮತ್ತೊಬ್ಬ ಆರೋಪಿ ಹನೀಫ್ ಖಾನ್ ಈಗಾಗಲೇ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.

ಗುರುಪ್ಪನಪಾಳ್ಯದಲ್ಲಿ ಸಭೆ: ‘ಟಾರ್ಗೆಟ್ ಕಿಲ್ಲಿಂಗ್ಸ್’ ಸಂಚು

ಈ ಭಯೋತ್ಪಾದಕ ಜಾಲದ ಮುಖ್ಯ ಸೂತ್ರಧಾರಿಯಾಗಿದ್ದ ಮೆಹಬೂಬ್ ಪಾಷಾಗೂ ಶಿಕ್ಷೆಯಾಗಿದೆ. ಬೆಂಗಳೂರಿನ ಗುರುಪ್ಪನಪಾಳ್ಯದಲ್ಲಿದ್ದ ತನ್ನ ನಿವಾಸದಲ್ಲಿಯೇ ಮೆಹಬೂಬ್ ಪಾಷಾ ಹಲವು ಸಭೆಗಳನ್ನು ಮಾಡಿದ್ದ. ದೇಶವಿರೋಧಿ ಚಟುವಟಿಕೆಗಳನ್ನು ಹೆಚ್ಚಿಸುವುದು, ಕೋಮು ಗಲಭೆಗಳನ್ನು ಪ್ರಚೋದಿಸುವುದು ಹಾಗೂ ನಿರ್ದಿಷ್ಟ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ‘ಟಾರ್ಗೆಟ್ ಕಿಲ್ಲಿಂಗ್ಸ್’ ನಡೆಸಲು ಯೋಜನೆ ರೂಪಿಸಲಾಗಿತ್ತು.

ಕಾಡಿನಲ್ಲಿ ತರಬೇತಿ: ಸಲಕರಣೆಗಳ ಖರೀದಿ

ಇನ್ನು ಮೆಹಬೂಬ್ ಪಾಷಾ ನಡೆಸುತ್ತಿದ್ದ ಈ ಸಂಚಿನ ಸಭೆಗಳಲ್ಲಿ ಸೈಯದ್ ಫಸಿಯುರ್ ರೆಹಮಾನ್ ಸಕ್ರಿಯವಾಗಿ ಭಾಗವಹಿಸುತ್ತಿದ್ದ. ಅಷ್ಟೇ ಅಲ್ಲದೆ, ಅಲ್-ಹಿಂದ್ ಗುಂಪಿನ ಸದಸ್ಯರಿಗೆ ಕಾಡಿನಲ್ಲಿ ತರಬೇತಿ ನೀಡಲು ಆತ ನೆರವಾಗಿದ್ದ. ಇದಕ್ಕಾಗಿ ಸ್ಪೋರ್ಟ್ಸ್ ಶೋರೂಮ್‌ಗೆ ತೆರಳಿ ಟೆಂಟ್‌ಗಳು ಹಾಗೂ ಚಾಕುಗಳನ್ನು ಖರೀದಿಸಿ ತಂದುಕೊಟ್ಟಿದ್ದ ಎಂಬುದು ತನಿಖೆಯಲ್ಲಿ ದೃಢಪಟ್ಟಿದೆ.

ಇದನ್ನೂ ಓದಿ: ಪಾಕಿಸ್ತಾನದ ಗ್ಯಾಂಗ್‌ಸ್ಟರ್‌ಗಳ ಜೊತೆ ಸಂಪರ್ಕ: ದೊಡ್ಡಬಳ್ಳಾಪುರದಲ್ಲಿ ಎಸಿ ಮೆಕ್ಯಾನಿಕ್ ಬಂಧನ!

ಭಾರತದಲ್ಲಿ ಐಸಿಸ್ ಪ್ರಾಂತ್ಯವನ್ನು ಸ್ಥಾಪಿಸುವುದೇ ಈ ಗುಂಪಿನ ಪ್ರಮುಖ ಉದ್ದೇಶವಾಗಿತ್ತು. ಸದ್ಯ ಸ್ಥಳೀಯ ಮಟ್ಟದಲ್ಲಿ ಕೃತ್ಯಕ್ಕೆ ಸಂಚು ರೂಪಿಸಿದ್ದವರಿಗೆ ಶಿಕ್ಷೆಯಾಗಿದ್ದು, ಇವರ ಹಿಂದಿದ್ದು ನಿರ್ದೇಶನ ನೀಡುತ್ತಿದ್ದ ಪ್ರಮುಖ ಆನ್‌ಲೈನ್ ಹ್ಯಾಂಡ್ಲರ್‌ನ ಪತ್ತೆಗಾಗಿ ತನಿಖಾ ಸಂಸ್ಥೆ ತನ್ನ ಶೋಧ ಕಾರ್ಯವನ್ನು ಮುಂದುವರಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ