Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಬೀದಿನಾಯಿಗಳ ಹಾವಳಿ ತಡೆಗೆ ಶ್ವಾನಗಳ ಕೊರಳಿಗೆ ಕ್ಯೂಆರ್​ಕೋಡ್​ ಟ್ಯಾಗ್​

ಬೆಂಗಳೂರಲ್ಲಿನ ಬೀದಿನಾಯಿಗಳ ಹಾವಳಿ ತಡೆಗಟ್ಟಲು ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನ ಪಶುವೈದ್ಯರು ಒಂದು ಉಪಾಯವನ್ನು ಕಂಡುಕೊಂಡಿದ್ದಾರೆ. ಅದೇನು ? ಇಲ್ಲಿದೆ ಮಾಹಿತಿ

ಬೆಂಗಳೂರಲ್ಲಿ ಬೀದಿನಾಯಿಗಳ ಹಾವಳಿ ತಡೆಗೆ ಶ್ವಾನಗಳ ಕೊರಳಿಗೆ ಕ್ಯೂಆರ್​ಕೋಡ್​ ಟ್ಯಾಗ್​
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 24, 2023 | 3:11 PM

ಬೆಂಗಳೂರು ಸೆ.23: ಇತ್ತೀಚಿಗೆ ನಗರದಲ್ಲಿ ಬೀದಿನಾಯಿಗಳ (Stray Dog) ಹಾವಳಿ ಹೆಚ್ಚಾಗಿದೆ. ಇದನ್ನು ತಡೆಗಟ್ಟಲು ಪಶುವೈದ್ಯರು ಮಾರ್ಗ ಕಂಡು ಹಿಡಿದಿದ್ದಾರೆ. ಅದು ನಗರದಲ್ಲಿನ ಬೀದಿನಾಯಿಗಳ ಮೊದಲ ಬಾರಿಗೆ ಕ್ಯೂಆರ್ ಕೋಡ್ (Qr Code Tag)​​ ಹೊಂದಿರುವ ಜಿಯೋಟ್ಯಾಗ್​​​ಗಳನ್ನು ಹಾಕಲಾಗಿದೆ. ಬೀದಿನಾಯಿಗಳ ಸಂಖ್ಯೆ ಮೇಲೆ ನಿಗಾ ಇಡಲು ಸಾರ್ವಜನಿಕರಿಗೆ, ಪಶುವೈದ್ಯರು ಮತ್ತು ನೋಂದಾಯಿತ ಸ್ವಯಂಸೇವಕರಿಗೆ ಇದರಿಂದ ಅನುಕೂಲವಾಗಲಿದೆ. ಈ ಕ್ಯೂಆರ್​ ಕೋಡ್​​ ಅನ್ನು ಸ್ಯ್ಕಾನ್​​​​​​ ಮಾಡುವ ಮೂಲಕ ಯಾವ ತಳಿ ನಾಯಿ, ಅದಕ್ಕೆ ವ್ಯಾಕ್ಸಿನೇಷನ್ ಆಗಿದೆಯಾ? ಅದರ ಆರೋಗ್ಯ ಸ್ಥಿತಿ ಮತ್ತು ಆ ಶ್ವಾನವನ್ನು ಆರೈಕೆ ಮಾಡುತ್ತಿದ್ದವರ ಸಂಪರ್ಕಸಂಖ್ಯೆಯೂ ತಿಳಿದುಕೊಳ್ಳಬಹುದಾಗಿದೆ.

ಹೆಬ್ಬಾಳದ ಪಶುವೈದ್ಯಕೀಯ ಕಾಲೇಜು ಅಧಿಕಾರಿಗಳು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ರಾಜ್ಯ ಪಶುಸಂಗೋಪನೆ ಇಲಾಖೆ ಸಹಯೋಗದೊಂದಿಗೆ ಈ ಕಾರ್ಯವನ್ನು ಆರಂಭವಾಗಿದೆ. ಪಶುವೈದ್ಯಕೀಯ ಕಾಲೇಜಿನ ಪಶುವೈದ್ಯರು ಪ್ರಾಯೋಗಿಕವಾಗಿ ಶನಿವಾರ ಜಾಕಿ ಮತ್ತು ಪಿಂಕಿ ಎಂಬ ಹೆಸರಿನ ಎರಡು ಬೀದಿನಾಯಿಗಳಿಗೆ QR ಕೋಡ್ ಸ್ಕ್ಯಾನರ್​ಗಳನ್ನು ಅಳವಡಿಸಿದ್ದಾರೆ. ಜಿಯೋಟ್ಯಾಗ್ QR ಕೋಡ್ ಸ್ಕ್ಯಾನರ್​ಅನ್ನು ದೂರದಿಂದ ಮೊಬೈಲ್ ಅಥವಾ ವಿಶೇಷ ಸ್ಕ್ಯಾನಿಂಗ್ ಕ್ಯಾಮೆರಾಗಳ ಮೂಲಕ ಸ್ಕ್ಯಾನ್ ಮಾಡಬಹುದಾಗಿದೆ.

ಇದನ್ನೂ ಓದಿ: BBMP survey for castration: ಬೀದಿನಾಯಿಗಳ ಉಪಟಳಕ್ಕೆ ಬೆಂಗಳೂರಿಗರು ಗಢಗಢ ನಡುಗುತ್ತಿದ್ದಾರೆ, ಬಿಬಿಎಂಪಿ ನಾಯಿಗಳ ಲೆಕ್ಕ ಹಾಕುತ್ತಿದೆ!

ಮುಂಬೈನಲ್ಲಿ 1,500 ಕ್ಕೂ ಹೆಚ್ಚು ಬೀದಿಬದಿಗಳಿಗೆ ಜಿಯೋಟ್ಯಾಗ್ ಹಾಕಲಾಗಿದೆ. ಇದು ಯಶಸ್ವಿಯಾದ ಹಿನ್ನೆಲೆಯಲ್ಲಿ ಇದೇ ಮಾದರಿಯನ್ನು ಬೆಂಗಳೂರಿನ ಬೀದಿ ನಾಯಿಗಳ ಮೇಲೆ ಪ್ರಯೋಗ ಮಾಡಲಾಗಿದೆ. ಮನುಷ್ಯರಂತೆ ಬೀದಿನಾಯಿಗಳು ಸಹ ತಮ್ಮ ವಿಶಿಷ್ಟ ಗುರುತಿನ ಚೀಟಿಗಳನ್ನು ಹೊಂದಿದ್ದು, ನಾಯಿಯ ಆರೋಗ್ಯ ಮತ್ತು ಯೋಗಕ್ಷೇಮದ ಬಗ್ಗೆ 24×7 ಪಡೆದುಕೊಳ್ಳಬಹುದಾಗಿದೆ. ಎರಡು ತಿಂಗಳ ಹಿಂದೆ ‘pawfriend.in’ ಎಂಬ ಕಾರ್ಯಕ್ರಮದ ಮೂಲಕ ಮುಂಬೈ ಮಹಾನಗರ ಪಾಲಿಕೆ (BMC)ಗೆ ಟೆಕ್ಕಿ ಅಕ್ಷಯ್ ರಿಡ್ಲಾನ್ ಅವರು ಟ್ಯಾಗ್‌ ತಯಾರು ಮಾಡಿಕೊಟ್ಟಿದ್ದಾರೆ ಎಂದು ಹೆಬ್ಬಾಳದ ಪಶುಸಂಗೋಪನಾ ಇಲಾಖೆಯ ಮೊಬೈಲ್ ಮತ್ತು ವಿಸ್ತರಣಾ ವಿಭಾಗದ ಮುಖ್ಯ ಪಶುವೈದ್ಯಾಧಿಕಾರಿ ಡಾ.ಪ್ರಯಾಗ್ ಎಚ್‌ಎಸ್ ಹೇಳಿದರು.

ಕ್ಯೂಆರ್​ ಕೂಡ್​ ಮೂಲಕ ಬೀದಿನಾಯಿಗಳ ದಾಳಿಯಿಂದ ಒಳಗಾದವರನ್ನು ಪತ್ತೆಹಚ್ಚಲು ರಕ್ಷಣಾ ತಂಡಗಳಿಗೆ ಸಾಧ್ಯವಾಗುತ್ತದೆ. ಅಲ್ಲದೆ ಪ್ರಾಣಿಗಳ ವ್ಯಾಕ್ಸಿನೇಷನ್ ಸ್ಥಿತಿ ಮತ್ತು ಫೀಡರ್ ವಿವರಗಳ ಬಗ್ಗೆ ನಮಗೆ ಪ್ರಮುಖ ಮಾಹಿತಿಯನ್ನು ನೀಡುತ್ತದೆ. ಇವೆಲ್ಲವನ್ನೂ ಸುರಕ್ಷಿತವಾದ ಡೇಟಾಬೇಸ್‌ನಲ್ಲಿ ಸಂರಕ್ಷಿಸಲಾಗುವುದು. ಪ್ರಸ್ತುತ, ಪಶುವೈದ್ಯರು ಯೋಜನೆಗೆ ಪ್ರಾಣಿ ಪ್ರಿಯರಿಂದ ಹಣ ಸಂಗ್ರಹಿಸಿದ್ದಾರೆ. ಇದರ ಫಲಿತಾಂಶದ ಆಧಾರದ ಮೇಲೆ ನಗರದಾದ್ಯಂತ ಅಭಿಯಾನ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:10 pm, Sun, 24 September 23

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ