AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗುತ್ತಿಗೆದಾರ ಅಂಬಿಕಾಪತಿ ಸೋದರನ ಮನೆ ಮೇಲೆ ಐಟಿ ದಾಳಿ: ಆರೋಪಿ ಪ್ರದೀಪ್​ನನ್ನು ವಶಕ್ಕೆ ಪಡೆದ ಅಧಿಕಾರಿಗಳು

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗುತ್ತಿಗೆದಾರ ಅಂಬಿಕಾಪತಿ ಸೋದರ ಪ್ರದೀಪ್​ನನ್ನು ಐಟಿ ಅಧಿಕಾರಿಗಳ ತಂಡ ವಶಕ್ಕೆ ಪಡೆದು ಸನ್ನಿಧಿ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲ್ಯಾಟ್‌ನಿಂದ ಬೆಂಗಳೂರಿನ ಐಟಿ ಕಚೇರಿಗೆ ಕರೆದೊಯ್ದಿದ್ದಾರೆ.

ಬೆಂಗಳೂರು: ಗುತ್ತಿಗೆದಾರ ಅಂಬಿಕಾಪತಿ ಸೋದರನ ಮನೆ ಮೇಲೆ ಐಟಿ ದಾಳಿ: ಆರೋಪಿ ಪ್ರದೀಪ್​ನನ್ನು ವಶಕ್ಕೆ ಪಡೆದ ಅಧಿಕಾರಿಗಳು
ಅಂಬಿಕಾಪತಿ ಸೋದರ ಪ್ರದೀಪ್​
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 13, 2023 | 7:00 PM

Share

ಬೆಂಗಳೂರು, ಅ.13: ಆದಾಯ ತೆರಿಗೆ (Income Tax) ಇಲಾಖೆ ಅಧಿಕಾರಿಗಳು ಬೆಂಗಳೂರಿನ ಆರ್​ಟಿ ನಗರದ ಎರಡು ಸ್ಥಳಗಳ ಮೇಲೆ ಐಟಿ ದಾಳಿ ಮಾಡಿದ್ದರು. ಈ ವೇಳೆ ಆತ್ಮಾನಂದ ಕಾಲೋನಿಯ ಫ್ಲಾಟ್ ಒಂದರ ಕೊಠಡಿಯ ಮಂಚದಡಿ ಬಚ್ಚಿಟ್ಟಿದ್ದ  ಕೋಟ್ಯಂತರ ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆಯಾಗಿತ್ತು. ಹೌದು, ಅಧಿಕಾರಿಗಳು ಮಧ್ಯರಾತ್ರಿ ಬೆಂಗಳೂರಿನ ಆರ್​​. ಟಿ.ನಗರದ ಮಾಜಿ ಕಾರ್ಪೊರೇಟರ್ (Former Corporator)​​​​ ​​​ಅಶ್ವತ್ಥಮ್ಮ, ಪತಿ ಗುತ್ತಿಗೆದಾರ ಆರ್​.ಅಂಬಿಕಾಪತಿ ಮತ್ತು ​ಅಂಬಿಕಾಪತಿ ಸೋದರ ಪ್ರದೀಪ್​​ ಫ್ಯ್ಲಾಟ್​​​​​​ ಮೇಲೆ ದಾಳಿ ಮಾಡಿದ್ದರು. ಪರಿಶೀಲನೆ ವೇಳೆ ಬೆಡ್​​ ರೂಮ್​ನ ಮಂಚದ ಕೆಳಗೆ 23 ಬಾಕ್ಸ್​​ನಲ್ಲಿ 500 ರೂ. ಮುಖಬೆಲೆಯ 40 ಕೋಟಿ ರೂ.ಗೂ ಅಧಿಕ ಹಣ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಪ್ರದೀಪ್​ನನ್ನು ವಶಕ್ಕೆ ಪಡೆಯಲಾಗಿದೆ.

ಪ್ರದೀಪ್​ನನ್ನು ವಶಕ್ಕೆ ಪಡೆದ ಐಟಿ ಅಧಿಕಾರಿಗಳು

ಹೌದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗುತ್ತಿಗೆದಾರ ಅಂಬಿಕಾಪತಿ ಸೋದರ ಪ್ರದೀಪ್​ನನ್ನು ಐಟಿ ಅಧಿಕಾರಿಗಳ ತಂಡ ವಶಕ್ಕೆ ಪಡೆದು ಸನ್ನಿಧಿ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲ್ಯಾಟ್‌ನಿಂದ ಬೆಂಗಳೂರಿನ ಐಟಿ ಕಚೇರಿಗೆ ಕರೆದೊಯ್ದಿದ್ದಾರೆ.

ಈ ಹಣ ಯಾರಿಗೆ ಸೇರಿದ್ದು, ಯಾಕೆ ಸಂಗ್ರಹಿಸಲಾಗಿತ್ತು, ಎಲ್ಲಿಗೆ ಕಳುಹಿಸಲು ಪ್ಲಾನ್​?

ಇನ್ನು ಈ ಹಣವನ್ನು ಬೆಂಗಳೂರಿನಲ್ಲಿ ಬಿಲ್ಡರ್ಸ್​​​, ಚಿನ್ನದ ವ್ಯಾಪಾರಿಗಳು ಹಾಗೂ ಗುತ್ತಿಗೆದಾರರಿಂದ ಈ ಹಣ ಸಂಗ್ರಹಿಸಲಾಗಿದ್ದು, ಈ  ಹಣವನ್ನು ಬೆಂಗಳೂರಿನಿಂದ-ಚೆನ್ನೈಗೆ, ಚೆನ್ನೈಯಿಂದ-ಹೈದ್ರಬಾದ್​ಗೆ ವಾರ್ಗವಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ತೆಲೆಂಗಾಣ ರಾಜ್ಯ ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಇಲ್ಲಿ ಹಣ ಸಂಗ್ರಹಿಸಿ ಅಲ್ಲಿಗೆ ಕಳುಹಿಸಲು ಮುಂದಾಗಿದ್ದರು ಎಂಬ ಮಾಹಿತಿ ದೊರೆತಿದೆ. ಚುನಾವಣೆ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಅಲರ್ಟ್​​​ ಆಗಿದ್ದು, ಕಳೆದ ಮೂರು ದಿನಗಳಿಂದ ರೇಡ್​​​ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರ: ಬಾಕ್ಸ್​ಗಳಲ್ಲಿ ಕಂತೆ-ಕಂತೆ ಹಣ ಪತ್ತೆ: ಬಿಲ್ಡರ್​, ಚಿನ್ನದ ವ್ಯಾಪಾರಿ, ಗುತ್ತಿಗೆದಾರರಿಂದ ಇಷ್ಟೊಂದು ಹಣ ಸಂಗ್ರಹಿಸಿದ್ಯಾಕೆ? ಇಲ್ಲಿದೆ ಇನ್ ಸೈಡ್​ ಮಾಹಿತಿ

ಅಂಬಿಕಾಪತಿ ಮನೆ ಮೇಲೂ ಐಟಿ ದಾಳಿ

ಈ ಘಟನೆಗೆ ಸಂಬಂಧಪಟ್ಟಂತೆ ಗುತ್ತಿಗೆದಾರ ಅಂಬಿಕಾಪತಿ ಮನೆ, ಆರ್​​ಟಿ ನಗರದ ವೈಟ್​ ಗೌಸ್​ನಲ್ಲಿರುವ ಅಂಬಿಕಾಪತಿ ಮಗಳ ಮನೆ ಮೇಲೂ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಒಂದು ಮನೆ ಮತ್ತು ಆರ್​ಟಿ ನಗರದ ಸುಲ್ತಾನ್ ಪಾಳ್ಯದಲ್ಲಿ ಎರಡು ಕಡೆ ದಾಳಿ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ