AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗುತ್ತಿಗೆದಾರ ಅಂಬಿಕಾಪತಿ ಸೋದರನ ಮನೆ ಮೇಲೆ ಐಟಿ ದಾಳಿ: ಆರೋಪಿ ಪ್ರದೀಪ್​ನನ್ನು ವಶಕ್ಕೆ ಪಡೆದ ಅಧಿಕಾರಿಗಳು

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗುತ್ತಿಗೆದಾರ ಅಂಬಿಕಾಪತಿ ಸೋದರ ಪ್ರದೀಪ್​ನನ್ನು ಐಟಿ ಅಧಿಕಾರಿಗಳ ತಂಡ ವಶಕ್ಕೆ ಪಡೆದು ಸನ್ನಿಧಿ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲ್ಯಾಟ್‌ನಿಂದ ಬೆಂಗಳೂರಿನ ಐಟಿ ಕಚೇರಿಗೆ ಕರೆದೊಯ್ದಿದ್ದಾರೆ.

ಬೆಂಗಳೂರು: ಗುತ್ತಿಗೆದಾರ ಅಂಬಿಕಾಪತಿ ಸೋದರನ ಮನೆ ಮೇಲೆ ಐಟಿ ದಾಳಿ: ಆರೋಪಿ ಪ್ರದೀಪ್​ನನ್ನು ವಶಕ್ಕೆ ಪಡೆದ ಅಧಿಕಾರಿಗಳು
ಅಂಬಿಕಾಪತಿ ಸೋದರ ಪ್ರದೀಪ್​
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 13, 2023 | 7:00 PM

Share

ಬೆಂಗಳೂರು, ಅ.13: ಆದಾಯ ತೆರಿಗೆ (Income Tax) ಇಲಾಖೆ ಅಧಿಕಾರಿಗಳು ಬೆಂಗಳೂರಿನ ಆರ್​ಟಿ ನಗರದ ಎರಡು ಸ್ಥಳಗಳ ಮೇಲೆ ಐಟಿ ದಾಳಿ ಮಾಡಿದ್ದರು. ಈ ವೇಳೆ ಆತ್ಮಾನಂದ ಕಾಲೋನಿಯ ಫ್ಲಾಟ್ ಒಂದರ ಕೊಠಡಿಯ ಮಂಚದಡಿ ಬಚ್ಚಿಟ್ಟಿದ್ದ  ಕೋಟ್ಯಂತರ ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆಯಾಗಿತ್ತು. ಹೌದು, ಅಧಿಕಾರಿಗಳು ಮಧ್ಯರಾತ್ರಿ ಬೆಂಗಳೂರಿನ ಆರ್​​. ಟಿ.ನಗರದ ಮಾಜಿ ಕಾರ್ಪೊರೇಟರ್ (Former Corporator)​​​​ ​​​ಅಶ್ವತ್ಥಮ್ಮ, ಪತಿ ಗುತ್ತಿಗೆದಾರ ಆರ್​.ಅಂಬಿಕಾಪತಿ ಮತ್ತು ​ಅಂಬಿಕಾಪತಿ ಸೋದರ ಪ್ರದೀಪ್​​ ಫ್ಯ್ಲಾಟ್​​​​​​ ಮೇಲೆ ದಾಳಿ ಮಾಡಿದ್ದರು. ಪರಿಶೀಲನೆ ವೇಳೆ ಬೆಡ್​​ ರೂಮ್​ನ ಮಂಚದ ಕೆಳಗೆ 23 ಬಾಕ್ಸ್​​ನಲ್ಲಿ 500 ರೂ. ಮುಖಬೆಲೆಯ 40 ಕೋಟಿ ರೂ.ಗೂ ಅಧಿಕ ಹಣ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಪ್ರದೀಪ್​ನನ್ನು ವಶಕ್ಕೆ ಪಡೆಯಲಾಗಿದೆ.

ಪ್ರದೀಪ್​ನನ್ನು ವಶಕ್ಕೆ ಪಡೆದ ಐಟಿ ಅಧಿಕಾರಿಗಳು

ಹೌದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗುತ್ತಿಗೆದಾರ ಅಂಬಿಕಾಪತಿ ಸೋದರ ಪ್ರದೀಪ್​ನನ್ನು ಐಟಿ ಅಧಿಕಾರಿಗಳ ತಂಡ ವಶಕ್ಕೆ ಪಡೆದು ಸನ್ನಿಧಿ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲ್ಯಾಟ್‌ನಿಂದ ಬೆಂಗಳೂರಿನ ಐಟಿ ಕಚೇರಿಗೆ ಕರೆದೊಯ್ದಿದ್ದಾರೆ.

ಈ ಹಣ ಯಾರಿಗೆ ಸೇರಿದ್ದು, ಯಾಕೆ ಸಂಗ್ರಹಿಸಲಾಗಿತ್ತು, ಎಲ್ಲಿಗೆ ಕಳುಹಿಸಲು ಪ್ಲಾನ್​?

ಇನ್ನು ಈ ಹಣವನ್ನು ಬೆಂಗಳೂರಿನಲ್ಲಿ ಬಿಲ್ಡರ್ಸ್​​​, ಚಿನ್ನದ ವ್ಯಾಪಾರಿಗಳು ಹಾಗೂ ಗುತ್ತಿಗೆದಾರರಿಂದ ಈ ಹಣ ಸಂಗ್ರಹಿಸಲಾಗಿದ್ದು, ಈ  ಹಣವನ್ನು ಬೆಂಗಳೂರಿನಿಂದ-ಚೆನ್ನೈಗೆ, ಚೆನ್ನೈಯಿಂದ-ಹೈದ್ರಬಾದ್​ಗೆ ವಾರ್ಗವಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ತೆಲೆಂಗಾಣ ರಾಜ್ಯ ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಇಲ್ಲಿ ಹಣ ಸಂಗ್ರಹಿಸಿ ಅಲ್ಲಿಗೆ ಕಳುಹಿಸಲು ಮುಂದಾಗಿದ್ದರು ಎಂಬ ಮಾಹಿತಿ ದೊರೆತಿದೆ. ಚುನಾವಣೆ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಅಲರ್ಟ್​​​ ಆಗಿದ್ದು, ಕಳೆದ ಮೂರು ದಿನಗಳಿಂದ ರೇಡ್​​​ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರ: ಬಾಕ್ಸ್​ಗಳಲ್ಲಿ ಕಂತೆ-ಕಂತೆ ಹಣ ಪತ್ತೆ: ಬಿಲ್ಡರ್​, ಚಿನ್ನದ ವ್ಯಾಪಾರಿ, ಗುತ್ತಿಗೆದಾರರಿಂದ ಇಷ್ಟೊಂದು ಹಣ ಸಂಗ್ರಹಿಸಿದ್ಯಾಕೆ? ಇಲ್ಲಿದೆ ಇನ್ ಸೈಡ್​ ಮಾಹಿತಿ

ಅಂಬಿಕಾಪತಿ ಮನೆ ಮೇಲೂ ಐಟಿ ದಾಳಿ

ಈ ಘಟನೆಗೆ ಸಂಬಂಧಪಟ್ಟಂತೆ ಗುತ್ತಿಗೆದಾರ ಅಂಬಿಕಾಪತಿ ಮನೆ, ಆರ್​​ಟಿ ನಗರದ ವೈಟ್​ ಗೌಸ್​ನಲ್ಲಿರುವ ಅಂಬಿಕಾಪತಿ ಮಗಳ ಮನೆ ಮೇಲೂ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಒಂದು ಮನೆ ಮತ್ತು ಆರ್​ಟಿ ನಗರದ ಸುಲ್ತಾನ್ ಪಾಳ್ಯದಲ್ಲಿ ಎರಡು ಕಡೆ ದಾಳಿ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!