AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಗೆ BBMP ಬೇಡ, ಪ್ರತ್ಯೇಕ ಮುನ್ಸಿಪಲ್​ ವಲಯ ನೀಡಿ: ರಾಜ್ಯ ಸರ್ಕಾರಕ್ಕೆ ಐಟಿ-ಬಿಟಿ ಕಂಪನಿಗಳಿಂದ ಪತ್ರ

ಹೊರವರ್ತುಲ ರಸ್ತೆ, ಸುತ್ತಮುತ್ತ ಪ್ರದೇಶ ಪ್ರತ್ಯೇಕ ಮುನ್ಸಿಪಲ್ ವಲಯವೆಂದು ಘೋಷಿಸಲು ಹೊರವರ್ತುಲ ರಸ್ತೆಯ ಕಂಪನಿಗಳ ಸಂಘ ಮನವಿ ಮಾಡಿದೆ.

ನಮಗೆ BBMP ಬೇಡ, ಪ್ರತ್ಯೇಕ ಮುನ್ಸಿಪಲ್​ ವಲಯ ನೀಡಿ: ರಾಜ್ಯ ಸರ್ಕಾರಕ್ಕೆ ಐಟಿ-ಬಿಟಿ ಕಂಪನಿಗಳಿಂದ ಪತ್ರ
ಬೆಳ್ಳಂದೂರು ಮಳೆ
TV9 Web
| Edited By: |

Updated on:Sep 14, 2022 | 8:23 AM

Share

ಬೆಂಗಳೂರು: ನಮಗೆ BBMP ಬೇಡ, ಪ್ರತ್ಯೇಕ ಮುನ್ಸಿಪಲ್​ ವಲಯ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಐಟಿ-ಬಿಟಿ ಕಂಪನಿಗಳು ಪತ್ರ ಬರೆದಿವೆ. ಬಿಬಿಎಂಪಿ ಐಟಿ ಕಂಪನಿಗಳಿರುವ ಪ್ರದೇಶ ಅಸಮರ್ಪಕವಾಗಿ ನಿರ್ವಹಣೆ ಮಾಡುತ್ತಿದೆ. ಹೊರವರ್ತುಲ ರಸ್ತೆ, ಸುತ್ತಮುತ್ತ ಪ್ರದೇಶ ಪ್ರತ್ಯೇಕ ಮುನ್ಸಿಪಲ್ ವಲಯವೆಂದು ಘೋಷಿಸಲು ಹೊರವರ್ತುಲ ರಸ್ತೆಯ ಕಂಪನಿಗಳ ಸಂಘ ಮನವಿ ಮಾಡಿದೆ.

ಇತ್ತೀಚೆಗೆ ಸುರಿದ ಮಳೆಯಿಂದ ಐಟಿ ಬಿಟಿ ಕಂಪನಿಗಳಿಗೆ ಹಾನಿಯಾಗಿತ್ತು. ಐಟಿ ಬಿಟಿ ನೌಕರರ ಲೇಔಟ್ ಗಳಿಗೆ ಮಳೆ ನೀರು ನುಗ್ಗಿತ್ತು. ಇದರಿಂದ ಬೇಸತ್ತು ಸರ್ಕಾರಕ್ಕೆ ಪ್ರತ್ಯೇಕ ಮುನ್ಸಿಪಲ್ ವಲಯ ಕೋರಿ ಮನವಿ ಸಲ್ಲಿಸಲಾಗಿದೆ. ಹೊರ ವರ್ತುಲ ರಸ್ತೆ ಕಂಪನಿಗಳ ಸಂಘ (ಒಆರ್‌ಆರ್‌ಸಿಎ) ಐಟಿ ಸಚಿವ ಸಿಎನ್ ಅಶ್ವಥ್ ನಾರಾಯಣ ಅವರನ್ನು ಭೇಟಿ ಮಾಡಿ 17 ಕಿಮೀ ವ್ಯಾಪ್ತಿಯನ್ನು ಪ್ರತ್ಯೇಕ ಪುರಸಭೆಯ ವಲಯವಾಗಿ ಘೋಷಿಸುವಂತೆ ಒತ್ತಾಯಿಸಿದ್ದಾರೆ. ಇನ್ನು ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ತಮಗೆ ಆದ ನಷ್ಟದ ಬಗ್ಗೆ ಹೊರ ವರ್ತುಲ ರಸ್ತೆ ಕಂಪನಿಗಳ ಸಂಘ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಿ ತನ್ನ ಅಳಲು ತೋಡಿಕೊಂಡಿದೆ. ಇದನ್ನೂ ಓದಿ: ಸುಮಾರು 40 ಐಟಿ-ಬಿಟಿ ಕಂಪನಿಗಳಿಂದ ರಾಜಕಾಲುವೆ ಒತ್ತುವರಿಯಾಗಿದೆ: ಸಚಿವ ಆರ್.ಅಶೋಕ್

2027ಕ್ಕೆ ಕ್ರಿಯಾ ಯೋಜನೆಯನ್ನು ಅಭಿವೃದ್ಧಿಪಡಿಸಬೇಕು ಮತ್ತು ಪ್ರತ್ಯೇಕ ಪುರಸಭೆಯ ವಲಯ ರಚನೆಯ ಮೇಲ್ವಿಚಾರಣೆಗೆ ತಜ್ಞರ ಸಮಿತಿಯನ್ನು ಕರೆಯಬೇಕು ಎಂದು ಪ್ರಸ್ತಾವನೆಯಲ್ಲಿ ಹೇಳಲಾಗಿದೆ. ಹೊಸ ವಲಯವು ವಿಶ್ವ ದರ್ಜೆಯ ತಂತ್ರಜ್ಞಾನ ಕಾರಿಡಾರ್ ಆಗಿ ಪರಿವರ್ತಿಸಲು ಸ್ಪಷ್ಟವಾದ ಐದು ವರ್ಷಗಳ ಯೋಜನೆಯನ್ನು ಹೊಂದಿರಬೇಕು ಎಂದು ಹೇಳಿದೆ. ಹೊಸ ಮುನ್ಸಿಪಲ್ ವಲಯದ ಆಡಳಿತದ ನಿರ್ವಹಣೆಯು ಸಾರ್ವಜನಿಕ ಖಾಸಗಿ ಸಹಭಾಗಿತ್ವವನ್ನು ಒಳಗೊಂಡಿರಬೇಕು. ಅದರ ಜವಾಬ್ದಾರಿ ನಿರ್ವಹಣೆ ಮತ್ತು ಐಟಿ-ಬಿಟಿ ಸಚಿವಾಲಯದ ಮೇಲ್ವಿಚಾರಣೆಯನ್ನು ಹೊಂದಿರಬೇಕು ಎಂದು ಸಲಹೆ ನೀಡಿದೆ. ಇದು ಟೆಕ್ ಕಾರಿಡಾರ್ ಅನ್ನು ಅಭಿವೃದ್ಧಿಪಡಿಸಲು ವಿಶೇಷ ಅನುದಾನವನ್ನು ಸಹ ಕೋರಿದೆ.

ಒಆರ್‌ಆರ್‌ಸಿಎ ಸದಸ್ಯರು ಈ ಹಿಂದೆಯೇ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಆಗಸ್ಟ್ 30 ರಂದು ನಮಗೆ ಮೂಲಸೌಕರ್ಯಗಳ ಕೊರೆತೆ ಇದೆ. ಇಲ್ಲಿ ಕಳಪೆ ಮೂಲಸೌಕರ್ಯಗಳಿಂದ ನಮಗೆ ತೊಂದರೆ ಆಗುತ್ತಿದೆ. ನಿರಂತರವಾಗಿ ಸುರಿದ ಮಳೆಯಿಂದ ತಮಗೆ 225 ಕೋಟಿ ರೂಪಾಯಿಗಳ ನಷ್ಟ ಆಗಿದೆ ಎಂದು ಪತ್ರ ಬರೆದಿದ್ದರು. ಇದನ್ನೂ ಓದಿ: Bangalore Rain: ಬೆಂಗಳೂರಿನಲ್ಲಿ ರಾತ್ರಿ ಸುರಿದ ಭಾರಿ ಮಳೆ: ಭಾಗಶಃ ಐಟಿ-ಬಿಟಿ ಕಂಪನಿಗಳಿಗೆ ರಜೆ ಘೋಷಣೆ

Published On - 8:23 am, Wed, 14 September 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ