AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಮಳೆಗಾಲದಲ್ಲಿ​ ಎಷ್ಟೇ ಮಳೆ ಬಂದರೂ ಬೆಂಗಳೂರಲ್ಲಿ ಪ್ರವಾಹ ಆಗಲ್ಲ : ಸಚಿವ ಅಶ್ವಥ್ ನಾರಾಯಣ್ ಭರವಸೆ

ಐಟಿ-ಬಿಟಿ ಕಂಪನಿ ಜೊತೆ ಬೆಂಗಳೂರು ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಗಿದೆ ಎಂದು ಐಟಿ-ಬಿಟಿ ಇಲಾಖೆ ಸಚಿವ ಡಾ. ಸಿ. ಎನ್​ ಅಶ್ವತ್​ ನಾರಾಯಣ ಹೇಳಿದ್ದಾರೆ.

ಮುಂದಿನ ಮಳೆಗಾಲದಲ್ಲಿ​ ಎಷ್ಟೇ ಮಳೆ ಬಂದರೂ ಬೆಂಗಳೂರಲ್ಲಿ ಪ್ರವಾಹ ಆಗಲ್ಲ : ಸಚಿವ ಅಶ್ವಥ್ ನಾರಾಯಣ್ ಭರವಸೆ
ಐಟಿ-ಬಿಟಿ ಕಂಪನಿಗಳೊಂದಿಗೆ ಸಚಿವ ಅಶ್ವಥ್​ ನಾರಾಯಣ ಸಭೆ
TV9 Web
| Edited By: |

Updated on:Sep 07, 2022 | 10:35 PM

Share

ಬೆಂಗಳೂರು: ಐಟಿ-ಬಿಟಿ (IT-BT) ಕಂಪನಿ ಜೊತೆ ಬೆಂಗಳೂರು (Bengaluru) ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಗಿದೆ ಎಂದು ಐಟಿ-ಬಿಟಿ ಇಲಾಖೆ ಸಚಿವ ಡಾ. ಸಿ. ಎನ್​ ಅಶ್ವತ್​ ನಾರಾಯಣ (Ashwath Narayan) ಹೇಳಿದ್ದಾರೆ. ಮಳೆಯಿಂದ ರಾಜಧಾನಿಯಲ್ಲಿ ಸೃಷ್ಟಿಯಾಗಿರುವ ಸಮಸ್ಯೆಗಳನ್ನು ಕುರಿತು ಚರ್ಚಿ ಐಟಿ-ಬಿಟಿ ಕಂಪನಿ ಜೊತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದ ಅವರು ಮಳೆಯಿಂದ ಆಗಿರುವ ಸಮಸ್ಯೆ ಬಗ್ಗೆ ಸಭೆಯಲ್ಲಿ ಚರ್ಚೆ ಆಗಿದೆ. ಮಹದೇವಪುರ ಕ್ಷೇತ್ರ ಸುತ್ತಮುತ್ತಿನ ಹಾನಿ ಬಗ್ಗೆ ಚರ್ಚೆ ಆಗಿದೆ ಎಂದರು.

ಯಾವುದೇ ಸಮಸ್ಯೆ ಆಗದಂತೆ ಅಭಿವೃದ್ಧಿ ಮಾಡಲು ನಾವು ಸಿದ್ಧರಿದ್ದೇವೆ. ಮುಂದಿನ ಬಾರಿ ಸಮಸ್ಯೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಬಿಬಿಎಂಪಿ ವಲಯ ಅಧಿಕಾರಿಗಳ ಗಮನಕ್ಕೂ ತಂದಿದ್ದೇವೆ. ಬೆಂಗಳೂರು ನಗರದ ಹಲವೆಡೆ ಕಾಮಗಾರಿ ನಡೆಯುತ್ತಿದೆ ಎಂದು ಹೇಳಿದರು.

ನಮ್ಮ ಬೆಂಗಳೂರನ್ನು ಕಾಪಾಡಿಕೊಳ್ಳಲು ನಾವು ಸಿದ್ಧರಿದ್ದೇವೆ. ಬೆಂಗಳೂರಿಗೆ ಅಪಕೀರ್ತಿ ತರಲು ಯಾರೂ ಮಾತನಾಡಿಲ್ಲ. ಏನೇ ಸಮಸ್ಯೆ ಇದ್ದರೂ ಬಗೆಹರಿಸಿಕೊಳ್ಳೋಣ ಎಂದಿದ್ದೇವೆ. ಐಟಿ-ಬಿಟಿ ಕಂಪನಿಗಳಿಂದ ಸಲಹೆ, ಮಾರ್ಗದರ್ಶನ ಪಡೆದಿದ್ದೇವೆ ಎಂದು ತಿಳಿಸಿದರು.

ಸಮಸ್ಯೆ ಇಲ್ಲದೇ ನಿರ್ವಹಣೆ ಮಾಡಲು ಸಂಪೂರ್ಣ ಸಹಕಾರ ಇದೆ‌. ಸ್ಪಷ್ಟವಾಗಿ ಸರ್ಕಾರವೂ ಉತ್ತರ ಕೂಡ ನೀಡಿದೆ. ಸಿಎಂ ಬಸವರಾಜ ಬೊಮ್ಮಾಯಿ ಕೂಡ ಈ ಯೋಜನೆಯನ್ನು ತಿಳಿಸಿದ್ದಾರೆ. ಮಹದೇವಪುರ ಕ್ಷೇತ್ರ ಮತ್ತು ಸುತ್ತಮುತ್ತಲಿನ ಭಾಗದಲ್ಲಿ ಮಳೆಯಿಂದ ಆಗಿರೋ ಸಮಸ್ಯೆ ಬಗ್ಗೆ ಚರ್ಚೆಯಾಗಿದೆ. ಅಲ್ಲಿನ ಸರ್ವಾಂಗೀಣ ಅಭಿವೃದ್ಧಿ ಬಗ್ಗೆ ಚರ್ಚೆಯಾಗಿದೆ ಎಂದು ತಿಳಿಸಿದ್ದಾರೆ.

ಅಭಿವೃದ್ಧಿ ಮಾಡಿದರೆ, ಯಾವುದೇ ಮಳೆ, ಪ್ರವಾಹ ಬಂದರೂ ಸಮಸ್ಯೆ ಆಗದಂತೆ ಅಭಿವೃದ್ಧಿ ಮಾಡಲು ನಾವು ಬದ್ದರಾಗಿದ್ದೇವೆ. ಮಹದೇವಪುರದಲ್ಲಿ ಫ್ಲಡ್ ಆಗದಂತೆ ನೋಡಿಕೊಳ್ಳುವುದಾಗಿ ಅವರಿಗೆ ತಿಳಿಸಿದ್ದೇವೆ. ಅವರ ಕಡೆಯಿಂದಲೂ ಸಮಾಧಾನಕರವಾಗಿದ್ದಾರೆ. ತಿಂಗಳಿಗೊಮ್ಮೆ ವರ್ಚುವಲ್ ಮೀಟಿಂಗ್ ಮಾಡಲು ನಿರ್ಧಾರ ಮಾಡಿದ್ದೇವೆ. ತಿಂಗಳಲ್ಲಿ ಕನಿಷ್ಠ ಒಂದು ಸಭೆ ಮಾಡುತ್ತೇವೆ ಎಂದು ಮಾತನಾಡಿದರು.

ಮುಂದಿನ ಮಾನ್ಸೂನ್​ನಲ್ಲಿ​ ಎಷ್ಟೇ ಮಳೆ ಬಂದರೂ ಪ್ರವಾಹ ಆಗಲ್ಲ. ಹೇಗೆ ಮಾಡುತ್ತೇವೆ ಅಂತ ಮಾಡಿ ತೋರಿಸುತ್ತೇವೆ. ಯಾವುದೇ ಬೇಡಿಕೆ ಇದ್ದರು ಟೈಮ್ ಲೈನ್ ಬೇಕು. ಅದನ್ನ ಹಂತ ಹಂತವಾಗಿ ಮಾಡುತ್ತೇವೆ. ಡಿಸಾಸ್ಟರ್ ಮ್ಯಾನೇಜ್ಮೆಂಟ್ ವಿಂಗ್ ಇರಬೇಕು ಅಂತ ಹೇಳಿದ್ದಾರೆ. ಐದು ವರ್ಷದ ಪ್ಲಾನ್ ಅವರು ಕೇಳಿದ್ದಾರೆ. ಹೊಸೂರು ರಸ್ತೆಯಲ್ಲಿ ಮೆಟ್ರೋ, ಎಲಿವೇಟೆಡ್ ಕಾರಿಡಾರ್ ಬಗ್ಗೆ ಹೇಳಿದ್ದಾರೆ. ನಿಮಗೆ ಏನು ಬೇಕು ಹೇಳಿ, ನಾವು ಎಲ್ಲವನ್ನೂ ನೀಡುವುದಾಗಿ ಭರವಸೆ ನೀಡಿದ್ದೇವೆ ಎಂದು ನುಡಿದರು.

ಮೋಹನ್ ದಾಸ್ ಪೈ ಟ್ವೀಟ್ ವಿಚಾರವಾಗಿ ಮಾತನಾಡಿದ ಅವರು ಮೋಹನ್ ದಾಸ್ ಪೈ ಮಾಹಿತಿ ನೀಡಿದ್ದಾರೆ. ಅವರು ನಮ್ಮನ್ನು ಹೊಗಳಿರುವ ವಿಚಾರವೂ ಇದೆ. ಅವರು ನಮ್ಮ ಬೆಂಗಳೂರಿನ ಧ್ವನಿ. ಅವರನ್ನು ನಾವು ಎಂದೂ ಖಂಡಿಸಿಲ್ಲ. ಅವರ ಸಲಹೆ, ಮಾರ್ಗದರ್ಶನ ಪಡೆದಿದ್ದೇವೆ‌ ಎಂದು ಸ್ಪಷ್ಟಪಡಿಸಿದರು.

ಸಭೆಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿಗಳು, ಬಿಬಿಎಂಪಿ ಮುಖ್ಯ ಆಯುಕ್ತರು, ಬೆಂಗಳೂರು ಜಲಮಂಡಲಿ ಅಧಿಕಾರಿಗಳು, ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಮತ್ತು ನಗರ ಪೊಲೀಸ್ ಆಯುಕ್ತರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಸಭೆಯಲ್ಲಿ ಇನ್ಫೋಸಿಸ್, ವಿಪ್ರೊ, ಎಂಫಸಿಸ್, ನಾಸ್ಕಾಂ, ಗೋಲ್ಡ್ಮನ್ ಸ್ಯಾಕ್ಸ್, ಇಂಟೆಲ್, ಟಿಸಿಎಸ್, ಫಿಲಿಪ್ಸ್, ಸೊನಾಟಾ ಸಾಫ್ಟ್‌ವೇರ್ ಮುಂತಾದ ಕಂಪನಿಗಳ ಮುಖ್ಯಸ್ಥರು ಇಲ್ಲವೇ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:09 pm, Wed, 7 September 22

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!