AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raids: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ, ನಿದ್ದೆಯಲ್ಲಿದ್ದ ಉದ್ಯಮಿಗಳಿಗೆ ಶಾಕ್

IT Raid: ಬೆಂಗಳೂರಿನಲ್ಲಿ ಇಂದು(ಅಕ್ಟೋಬರ್ 04) ಬೆಳ್ಳಂಬೆಳಗ್ಗೆ ಐಟಿ ನಡೆದಿದೆ. ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಉದ್ಯಮಿಗಳ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡಗಳು ರಾತ್ರೋರಾತ್ರಿ ಚೆನ್ನೈ, ದೆಹಲಿಯಿಂದ ಬೆಂಗಳೂರಿಗೆ ಬಂಂದಿದ್ದು, ಇಂದು ಬೆಳ್ಳಂಬೆಳಗ್ಗೆ ದಾಳಿ ಮಾಡಿವೆ.

IT Raids: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ  ದಾಳಿ, ನಿದ್ದೆಯಲ್ಲಿದ್ದ ಉದ್ಯಮಿಗಳಿಗೆ ಶಾಕ್
ಪ್ರಾತಿನಿಧಿಕ ಚಿತ್ರ
Jagadisha B
| Updated By: ರಮೇಶ್ ಬಿ. ಜವಳಗೇರಾ|

Updated on:Oct 04, 2023 | 9:05 AM

Share

ಬೆಂಗಳೂರು, (ಅಕ್ಟೋಬರ್ 04): ಬೆಂಗಳೂರಿನ (Bengaluru 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ(IT Raid) ಮಾಡಿದ್ದಾರೆ. ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಇಂದು (ಅಕ್ಟೋಬರ್ 04) ಬೆಳ್ಳಂಬೆಳಗ್ಗೆ ಬೆಂಗಳೂರಿನ 10 ಕಡೆಗಳಲ್ಲಿ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ‌ ಮನೆಗಳ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡಗಳು ರಾತ್ರೋರಾತ್ರಿ ಚೆನ್ನೈ, ದೆಹಲಿಯಿಂದ ಬೆಂಗಳೂರಿಗೆ ಬಂಂದಿದ್ದು, ಇಂದು ಬೆಳ್ಳಂಬೆಳಗ್ಗೆ ದಾಳಿ ಮಾಡಿವೆ. ವಿಜಯನಗರ, ಬಿಟಿಎಂ ಲೇಔಟ್ , ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Karnataka Breaking Kannada News Live: ಬಿಎಂಟಿಸಿಯ 7 ಅಧಿಕಾರಿಗಳ ವಿರುದ್ಧ ಎಫ್​ಐಆರ್ 

ತೆರಿಗೆ ವಂಚನೆ ಮಾಡಿರುವ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ‌ ಮನೆ ಮೇಲೆ ದಾಳಿ‌ಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಸದ್ಯ ಮನೆ ಹಾಗೂ ಕಚೇರಿಗಳ‌‌ಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಎಲ್ಲೆಲ್ಲಿ ದಾಳಿ?

  • ವಿಜಯನಗರದಲ್ಲಿ ವೈದ್ಯೆ ನಿವಾಸದ ಮೇಲೆ ಸಹ ಐಟಿ ದಾಳಿಯಾಗಿದೆ. ಪ್ರಶಾಂತನಗರದ ವೈದ್ಯೆ ಮನೆಯಲ್ಲಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
  • ಬೆಂಗಳೂರಿನ ಮೇಕ್ರಿಸರ್ಕಲ್ ಬಳಿಯ ಗಜರಾಜ ಜುವೆಲರ್ಸ್ ಮೇಲೆ ದಾಳಿ ಮಾಡಲಾಗಿದ್ದು, ಅಧಿಕಾರಿಗಳು ಅಂಗಡಿ ಬಾಗಿಲು ಮುಚ್ಚಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.
  • ಬೆಂಗಳೂರಿನ ಶಾಂತಿನಗರದ ಉದ್ಯಮಿ ನವೀನ್​ ಮನೆ ಮೇಲೂ ಐಟಿ ದಾಳಿಯಾಗಿದೆ. ಎರಡು ಇನೋವಾ ಕಾರಿನಲ್ಲಿ ಬಂದಿರುವ ಎಂಟು ಮಂದಿ ಐಟಿ ಅಧಿಕಾರಿಗಳು, ನವೀನ್ ಅವರ ಶಾಂತಿನಗರದಲ್ಲಿನ ದೊಡ್ಡ ಐಶಾರಾಮಿ ಬಂಗಲೆಯಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ.

ಕಳೆದ ತಿಂಗಳು ಅಂದರೆ ಸೆಪ್ಟೆಂಬರ್ 27ರಂದು ಸಹ ಬೆಂಗಳೂರಿನ ವಿವಿದೆಡೆ ಐಟಿ ದಾಳಿಯಾಗಿತ್ತು. ಬೆಂಗಳೂರಿನ ಹುಳಿಮಾವು ಸಮೀಪದ ಆಪಸ್ ಅಪಾರ್ಟ್ ಮೆಂಟ್ ನ 14ನೇ ಮಹಡಿಯಲ್ಲಿರುವ ಉದ್ಯಮಿಯೊಬ್ಬರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:18 am, Wed, 4 October 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ