AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raids: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ, ನಿದ್ದೆಯಲ್ಲಿದ್ದ ಉದ್ಯಮಿಗಳಿಗೆ ಶಾಕ್

IT Raid: ಬೆಂಗಳೂರಿನಲ್ಲಿ ಇಂದು(ಅಕ್ಟೋಬರ್ 04) ಬೆಳ್ಳಂಬೆಳಗ್ಗೆ ಐಟಿ ನಡೆದಿದೆ. ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಉದ್ಯಮಿಗಳ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡಗಳು ರಾತ್ರೋರಾತ್ರಿ ಚೆನ್ನೈ, ದೆಹಲಿಯಿಂದ ಬೆಂಗಳೂರಿಗೆ ಬಂಂದಿದ್ದು, ಇಂದು ಬೆಳ್ಳಂಬೆಳಗ್ಗೆ ದಾಳಿ ಮಾಡಿವೆ.

IT Raids: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ  ದಾಳಿ, ನಿದ್ದೆಯಲ್ಲಿದ್ದ ಉದ್ಯಮಿಗಳಿಗೆ ಶಾಕ್
ಪ್ರಾತಿನಿಧಿಕ ಚಿತ್ರ
ಜಗದೀಶ ಬಿ.
| Edited By: |

Updated on:Oct 04, 2023 | 9:05 AM

Share

ಬೆಂಗಳೂರು, (ಅಕ್ಟೋಬರ್ 04): ಬೆಂಗಳೂರಿನ (Bengaluru 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ(IT Raid) ಮಾಡಿದ್ದಾರೆ. ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಇಂದು (ಅಕ್ಟೋಬರ್ 04) ಬೆಳ್ಳಂಬೆಳಗ್ಗೆ ಬೆಂಗಳೂರಿನ 10 ಕಡೆಗಳಲ್ಲಿ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ‌ ಮನೆಗಳ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡಗಳು ರಾತ್ರೋರಾತ್ರಿ ಚೆನ್ನೈ, ದೆಹಲಿಯಿಂದ ಬೆಂಗಳೂರಿಗೆ ಬಂಂದಿದ್ದು, ಇಂದು ಬೆಳ್ಳಂಬೆಳಗ್ಗೆ ದಾಳಿ ಮಾಡಿವೆ. ವಿಜಯನಗರ, ಬಿಟಿಎಂ ಲೇಔಟ್ , ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Karnataka Breaking Kannada News Live: ಬಿಎಂಟಿಸಿಯ 7 ಅಧಿಕಾರಿಗಳ ವಿರುದ್ಧ ಎಫ್​ಐಆರ್ 

ತೆರಿಗೆ ವಂಚನೆ ಮಾಡಿರುವ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ‌ ಮನೆ ಮೇಲೆ ದಾಳಿ‌ಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಸದ್ಯ ಮನೆ ಹಾಗೂ ಕಚೇರಿಗಳ‌‌ಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಎಲ್ಲೆಲ್ಲಿ ದಾಳಿ?

  • ವಿಜಯನಗರದಲ್ಲಿ ವೈದ್ಯೆ ನಿವಾಸದ ಮೇಲೆ ಸಹ ಐಟಿ ದಾಳಿಯಾಗಿದೆ. ಪ್ರಶಾಂತನಗರದ ವೈದ್ಯೆ ಮನೆಯಲ್ಲಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
  • ಬೆಂಗಳೂರಿನ ಮೇಕ್ರಿಸರ್ಕಲ್ ಬಳಿಯ ಗಜರಾಜ ಜುವೆಲರ್ಸ್ ಮೇಲೆ ದಾಳಿ ಮಾಡಲಾಗಿದ್ದು, ಅಧಿಕಾರಿಗಳು ಅಂಗಡಿ ಬಾಗಿಲು ಮುಚ್ಚಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.
  • ಬೆಂಗಳೂರಿನ ಶಾಂತಿನಗರದ ಉದ್ಯಮಿ ನವೀನ್​ ಮನೆ ಮೇಲೂ ಐಟಿ ದಾಳಿಯಾಗಿದೆ. ಎರಡು ಇನೋವಾ ಕಾರಿನಲ್ಲಿ ಬಂದಿರುವ ಎಂಟು ಮಂದಿ ಐಟಿ ಅಧಿಕಾರಿಗಳು, ನವೀನ್ ಅವರ ಶಾಂತಿನಗರದಲ್ಲಿನ ದೊಡ್ಡ ಐಶಾರಾಮಿ ಬಂಗಲೆಯಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ.

ಕಳೆದ ತಿಂಗಳು ಅಂದರೆ ಸೆಪ್ಟೆಂಬರ್ 27ರಂದು ಸಹ ಬೆಂಗಳೂರಿನ ವಿವಿದೆಡೆ ಐಟಿ ದಾಳಿಯಾಗಿತ್ತು. ಬೆಂಗಳೂರಿನ ಹುಳಿಮಾವು ಸಮೀಪದ ಆಪಸ್ ಅಪಾರ್ಟ್ ಮೆಂಟ್ ನ 14ನೇ ಮಹಡಿಯಲ್ಲಿರುವ ಉದ್ಯಮಿಯೊಬ್ಬರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:18 am, Wed, 4 October 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ