AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋರ್ಜರಿ ಸಹಿ ಮಾಡಿ ಹಣ ಮಂಜೂರಾತಿಗೆ ಯತ್ನ! ಭೋವಿ ಅಭಿವೃದ್ಧಿ ನಿಗಮದ ನಿರ್ದೇಶಕ ರವಿಕುಮಾರ್ ವಿರುದ್ಧ ಎಫ್ಐಆರ್

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಐಪಿಸಿ 420, 506, 504, 509, 380, 465, 468, 471 ಅಡಿ ಕೇಸ್ ದಾಖಲಾಗಿದೆ. ಎಫ್ಐಆರ್ ದಾಖಲಾಗುತ್ತಿದ್ದಂತೆ ರವಿಕುಮಾರ್ ಎಸ್ಕೇಪ್ ಆಗಿದ್ದಾರೆ.

ಫೋರ್ಜರಿ ಸಹಿ ಮಾಡಿ ಹಣ ಮಂಜೂರಾತಿಗೆ ಯತ್ನ! ಭೋವಿ ಅಭಿವೃದ್ಧಿ ನಿಗಮದ ನಿರ್ದೇಶಕ ರವಿಕುಮಾರ್ ವಿರುದ್ಧ ಎಫ್ಐಆರ್
ಭೋವಿ ಅಭಿವೃದ್ಧಿ ನಿಗಮದ ನಿರ್ದೇಶಕ ರವಿಕುಮಾರ್
TV9 Web
| Edited By: |

Updated on:May 04, 2022 | 8:21 AM

Share

ಬೆಂಗಳೂರು: ಫೋರ್ಜರಿ ಸಹಿ (Forgery Signature) ಮಾಡಿ ಹಣ ಮಂಜೂರಾತಿಗೆ ಯತ್ನಿಸಿದ ಆರೋಪದ ಹಿನ್ನೆಲೆ ಭೋವಿ ಅಭಿವೃದ್ಧಿ ನಿಗಮದ ನಿರ್ದೇಶಕ ರವಿಕುಮಾರ್ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಐಪಿಸಿ 420, 506, 504, 509, 380, 465, 468, 471 ಅಡಿ ಕೇಸ್ ದಾಖಲಾಗಿದೆ. ಎಫ್ಐಆರ್ ದಾಖಲಾಗುತ್ತಿದ್ದಂತೆ ರವಿಕುಮಾರ್ ಎಸ್ಕೇಪ್ ಆಗಿದ್ದಾರೆ. ನಿಗಮದ ಎಂ.ಡಿ.ಲೀಲಾವತಿ, ಜಿ.ಎಂ.ನಾಗರಾಜಪ್ಪರ ಸಹಿಯನ್ನು ರವಿಕುಮಾರ್ ಫೋರ್ಜರಿ ಸಹಿ ಮಾಡಿ, ಸುಮಾರು 1.83 ಕೋಟಿ ರೂ. ಲಪಟಾಯಿಸಲು ಪ್ಲ್ಯಾನ್ ಮಾಡಿದ್ದರು ಎಂದು ಹೇಳಲಾಗುತ್ತಿದೆ.

ಉದ್ಯಮಶೀಲತಾ ಯೋಜನೆಯಡಿ ಸಾಲಸೌಲಭ್ಯ ಕೋರಿ ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಬಳ್ಳಾರಿ, ವಿಜಯಪುರ, ಚಿಕ್ಕಬಳ್ಳಾಪುರ, ಕಲಬುರಗಿಯಿಂದ ಅರ್ಜಿಗಳನ್ನು ಸಲ್ಲಿಕೆ ಮಾಡಿದ್ದರು. ನಕಲಿ ಜಾತಿ ಪತ್ರ, ಅಂಕಪಟ್ಟಿ ಸಲ್ಲಿಸಿದ್ದ ಅರ್ಜಿಗಳು ತಿರಸ್ಕೃತವಾಗಿದ್ದವು. ಮೇ 4ರಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಕ್ರಮ ಬೆಳಕಿಗೆ ಬಂದಿದೆ. ಅಕ್ರಮದ ಬಗ್ಗೆ ಪ್ರಶ್ನಿಸಲು ಮುಂದಾದ ಕೆಎಎಸ್ ಅಧಿಕಾರಿಗಳಿಗೆ ಎಂ.ಡಿ.ಲೀಲಾವತಿರಿಗೆ ಅಶ್ಲೀಲ ಪದಗಳಿಂದ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ.

ಡಾ.ಬಿ.ಕೆ.ನಾಗರಾಜಪ್ಪರಿಗೆ ವಾಟ್ಸಾಪ್​ ವಾಯ್ಸ್ ಮೆಸೇಜ್​ನಲ್ಲಿ ಧಮ್ಕಿ ಹಾಕಿದ್ದು, ಸದ್ಯ ನಾಪತ್ತೆಯಾದ ರವಿಕುಮಾರ್​ಗಾಗಿ ಹುಡುಕಾಟ ಮುಂದುವರಿದಿದೆ.

ನಿಗಮಕ್ಕೆ ಸೇರಿದ್ದ ಐಸಿಐಸಿಐ ಬ್ಯಾಂಕ್​ಗೆ ಸೇರಿದ ಚೆಕ್​ಗಳು ಕಳೆದ ಮಾರ್ಚ್​ನಲ್ಲಿ ಕಳುವಾಗಿತ್ತು. ಈ ಬಗ್ಗೆ ಭೋವಿ ಅಭಿವೃದ್ಧಿ ನಿಗಮ ಐಸಿಐಸಿಐ ಬ್ಯಾಂಕ್​ಗೆ ದೂರು ನೀಡಿತ್ತು. ಕಳುವಾಗಿದ್ದ ಚೆಕ್ ಬಳಸಿ ನಿರ್ದೇಶಕ ರವಿಕುಮಾರ್ ರಾಯಚೂರು ಜಿಲ್ಲೆಗೆ 52 ಲಕ್ಷ ಜಮಾ ಮಾಡಿದ್ದಾರೆ. 52 ಲಕ್ಷ ಅಕ್ರಮವಾಗಿ ಜಮಾ ಮಾಡಿರುವುದಲ್ಲದೇ, 60 ಅಕ್ರಮ ಫಲಾಪೇಕ್ಷಿಗಳ ಹೆಸರಲ್ಲಿ ಒಂದು ಕೋಟಿ 83 ಲಕ್ಷ ಹಣ ಮಂಜೂರಾತಿಗೆ ಸಹಿ ಫೋರ್ಜರಿ ಮಾಡಿದ್ದಾರೆ. ಈ ಎಲ್ಲಾ ಅಕ್ರಮ ಇಂದು ನಡೆದ ಭೋವಿ ಅಭಿವೃದ್ದಿ ನಿಗಮ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ

ರವಿಚಂದ್ರನ್​ ಮಗನ ಮದುವೆ ಆಹ್ವಾನ ಪತ್ರಿಕೆಯಲ್ಲಿ ಹೊಸ ನಟಿಯ ಹೆಸರು? ವೈರಲ್​ ಫೋಟೋದ ಅಸಲಿಯತ್ತು ಇಲ್ಲಿದೆ

PSI ನೇಮಕಾತಿ ಹಗರಣದಲ್ಲಿ ಮತ್ತೊಬ್ಬ ಅಧಿಕಾರಿ ತಲೆದಂಡ; ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತರಾಜು ವರ್ಗಾವಣೆ

Published On - 8:16 am, Wed, 4 May 22

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ