AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಪೆಟ್ರೋಲ್ ಬಂಕ್ ಬಂದ್ ಆಗುತ್ತೆ ಎನ್ನುವುದು ಸುಳ್ಳು ಸುದ್ದಿ; ಪೆಟ್ರೋಲ್ ಬಂಕ್ ಮಾಲೀಕರ ಸಂಘದಿಂದ ಸ್ಪಷ್ಟನೆ

Petrol bunk Owners Strike: ತೆರಿಗೆ ನೀತಿ ಪ್ರಶ್ನಿಸಿ ಪೆಟ್ರೋಲ್ ಬಂಕ್ ಮಾಲೀಕರು ನಾಳೆ ಮುಷ್ಕರ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಎಲ್ಲ ಪೆಟ್ರೋಲ್ ಬಂಕ್ಗಳು ಎಂದಿನಂತೆಯೇ ಕಾರ್ಯ ನಿರ್ವಹಿಸಲಿವೆ. ನಾಳೆ ಪೆಟ್ರೋಲ್ ಬಂಕ್ ಬಂದ್ ಎನ್ನುವುದು ಸುಳ್ಳು ಸುದ್ದಿ ಎಂದು ಪೆಟ್ರೋಲ್ ಬಂಕ್ ಮಾಲೀಕರ ಸಂಘ ಸ್ಪಷ್ಟ ಪಡಿಸಿದೆ.

ನಾಳೆ ಪೆಟ್ರೋಲ್ ಬಂಕ್ ಬಂದ್ ಆಗುತ್ತೆ ಎನ್ನುವುದು ಸುಳ್ಳು ಸುದ್ದಿ; ಪೆಟ್ರೋಲ್ ಬಂಕ್ ಮಾಲೀಕರ ಸಂಘದಿಂದ ಸ್ಪಷ್ಟನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:May 30, 2022 | 5:07 PM

Share

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೆಟ್ರೋಲ್ ಬಂಕ್ ಮಾಲೀಕರಿಂದ ನಾಳೆ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂಬುವುದು ಸುಳ್ಳು ಸುದ್ದಿ ಎಂದು ಟಿವಿ9ಗೆ ಪೆಟ್ರೋಲ್ ಬಂಕ್ ಮಾಲೀಕರ ಸಂಘ ಸ್ಪಷ್ಟನೆ ನೀಡಿದೆ. ನಾಳೆ ಪೆಟ್ರೋಲ್ ಬಂಕ್ ಬಂದ್ ಆಗುತ್ತೆ ಎನ್ನುವುದು ಸುಳ್ಳು ಸುದ್ದಿ. ಬೆಂಗಳೂರು ಸೇರಿ ರಾಜ್ಯದಲ್ಲಿ ಪೆಟ್ರೋಲ್ ಬಂಕ್ ಬಂದ್ ಪ್ರಶ್ನೆ ಇಲ್ಲ. ಪೆಟ್ರೋಲ್, ಡೀಸೆಲ್ ಖರೀದಿಗೆ ಯಾವುದೇ ಸಮಸ್ಯೆ ಆಗಲ್ಲ ಎಂದು ತಿಳಿಸಿದ್ದಾರೆ.

ತೆರಿಗೆ ನೀತಿ ಪ್ರಶ್ನಿಸಿ ಪೆಟ್ರೋಲ್ ಬಂಕ್ ಮಾಲೀಕರು ನಾಳೆ ಮುಷ್ಕರ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಎಲ್ಲ ಪೆಟ್ರೋಲ್ ಬಂಕ್ಗಳು ಎಂದಿನಂತೆಯೇ ಕಾರ್ಯ ನಿರ್ವಹಿಸಲಿವೆ. ನಾಳೆ ಪೆಟ್ರೋಲ್ ಬಂಕ್ ಬಂದ್ ಎನ್ನುವುದು ಸುಳ್ಳು ಸುದ್ದಿ ಎಂದು ಪೆಟ್ರೋಲ್ ಬಂಕ್ ಮಾಲೀಕರ ಸಂಘ ಸ್ಪಷ್ಟ ಪಡಿಸಿದೆ. ಇದನ್ನೂ ಓದಿ: GT vs RR Final: ಕೊಹ್ಲಿ ದಾಖಲೆ ಮುರಿಯಲ್ಲಾಗಲಿಲ್ಲ! ಈ ಐಪಿಎಲ್​ನಲ್ಲಿ ಬಟ್ಲರ್ ಸೃಷ್ಟಿಸಿದ ಪ್ರಮುಖ ದಾಖಲೆಗಳಿವು

ಕೇಂದ್ರ ಸರ್ಕಾರ ಎರಡು ಬಾರಿ ಟ್ಯಾಕ್ಸ್ ಕಡಿತ ಗೊಳಿಸಿದೆ. ಆದರೆ ಪ್ರತಿ ಬಾರಿ ಮುನ್ನ ಖರೀದಿಸಿಟ್ಟ ತೈಲಕ್ಕೆ ನೀಡಿದ ಟ್ಯಾಕ್ಸ್ ಮರುಪಾವತಿ ಮಾಡಿಲ್ಲ. ಹೀಗಾಗಿ ಪ್ರತೀ ಡೀಲರ್​ಗಳಿಗೆ 7 ರಿಂದ 8 ಲಕ್ಷ ನಷ್ಟವಾಗಿದೆ. ಬೇಡಿಕೆಗೆ ತಕ್ಕಂತೆ ಪೆಟ್ರೋಲ್ ಡೀಸೆಲ್ ಪೂರೈಕೆ ಮಾಡದ ಬಿಪಿಸಿಎಲ್ ಮತ್ತು ಹೆಚ್ಪಿಸಿಎಲ್ ಕಂಪನಿಗಳು ಅಗತ್ಯಕ್ಕೆ ಅನುಗುಣವಾಗಿ ತೈಲ ಪೂರೈಕೆ ಮಾಡುವಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೆಟ್ರೋಲ್ ಬಂಕ್ ಮಾಲೀಕರಿಂದ ನಾಳೆ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಹೇಳಲಾಗುತ್ತಿತ್ತು. ಆದ್ರೆ ಸದ್ಯ ಇದು ಸುಳ್ಳು ನಾಳೆ ಎಂದಿನಂತೆ ಎಲ್ಲಾ  ಪೆಟ್ರೋಲ್ ಬಂಕ್ ತೆರೆಯಲಿದೆ ಎಂದು ಪೆಟ್ರೋಲ್ ಬಂಕ್ ಮಾಲೀಕರ ಸಂಘ ಸ್ಪಷ್ಟ ಪಡಿಸಿದೆ.

ನಾಳೆ ಪೆಟ್ರೋಲ್ ಡಿಸೇಲ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ ನಾಳೆ ಪೆಟ್ರೋಲ್ ಡಿಸೇಲ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ. ಎಂದಿನಂತೆ ವಾಹನ ಸವಾರರಿಗೆ ಇಂಧನ ಲಭ್ಯವಾಗಲಿದೆ. ನಾಳೆ ಒಂದು ದಿನದ ಮುಷ್ಕರಕ್ಕೆ ಪೆಟ್ರೋಲ್ ಬಂಕ್ ಮಾಲೀಕರು ಮುಂದಾಗಿದ್ದರು. ಆದರೆ ಈಗಾಗಲೇ ಮಂಗಳವಾರ ಮತ್ತು ಬುಧವಾರಕ್ಕೆ ಆಗುವಷ್ಟು ಇಂಧನವನ್ನು ಶನಿವಾರ ಮತ್ತು ಭಾನುವಾರವೇ ಮಾಲೀಕರು ಖರೀದಿ ಮಾಡಿದ್ದಾರೆ. ಹೀಗಾಗಿ ಗ್ರಾಹಕರಿಗೆ ನಾಳೆ ಯಾವುದೇ ಸಮಸ್ಯೆ ಆಗೋದಿಲ್ಲ ಎಂದು ಪೆಟ್ರೋಲ್ ಬಂಕ್ ಮಾಲೀಕರು ತಿಳಿಸಿದ್ದಾರೆ.

Published On - 4:35 pm, Mon, 30 May 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ