AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನಂದ್ ಸಿಂಗ್‌ ಅರಣ್ಯ ಖಾತೆಯಲ್ಲಿ ಏನು ಕನಸು ಕಂಡಿದ್ರೋ ಗೊತ್ತಿಲ್ಲ; ಯಾವ ಖಾತೆಯಾದ್ರೂ ಅದು ಸರ್ಕಾರದ ಕೆಲಸ: ಬಿ.ಸಿ.ಪಾಟೀಲ್

ಸಚಿವ ಆನಂದ್ ಸಿಂಗ್ ಜತೆ ನಾನು ಚರ್ಚೆ ಮಾಡಿದ್ದೇನೆ. ಸದ್ಯದಲ್ಲಿಯೇ ಎಲ್ಲಾ ಅಸಮಾಧಾನ ಬಗೆಹರಿಯುತ್ತದೆ ಎಂದು ಸಚಿವ ಬಿ.ಸಿ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ಆನಂದ್ ಸಿಂಗ್‌ ಅರಣ್ಯ ಖಾತೆಯಲ್ಲಿ ಏನು ಕನಸು ಕಂಡಿದ್ರೋ ಗೊತ್ತಿಲ್ಲ; ಯಾವ ಖಾತೆಯಾದ್ರೂ ಅದು ಸರ್ಕಾರದ ಕೆಲಸ: ಬಿ.ಸಿ.ಪಾಟೀಲ್
ಕಚೇರಿಗೆ ಪೂಜೆ ಮಾಡುತ್ತಿರುವ ಬಿ.ಸಿ.ಪಾಟೀಲ್
TV9 Web
| Edited By: |

Updated on:Aug 09, 2021 | 12:47 PM

Share

ಬೆಂಗಳೂರು: ಕೃಷಿ ಸಚಿವ ಬಿ.ಸಿ.ಪಾಟೀಲ್​ ಇಂದು ಕಚೇರಿಗೆ ಪೂಜೆ ಮಾಡಿ, ಅಧಿಕೃತವಾಗಿ ಕೆಲಸ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನನ್ನ ಕೆಲಸವನ್ನು ಆರಂಭಿಸಿದ್ದೇನೆ. ನನಗೆ ಯಾವ ಖಾತೆ ಕೊಡುತ್ತೀರಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಕೇಳಿದ್ದೆ. ಕೃಷಿಗೆ ನಿನ್ನನ್ನು ಬಿಟ್ಟರೆ ಬೇರೆ ಯಾರೂ ಕಾಣುತ್ತಿಲ್ಲ ಅಂದಿದ್ದರು. ಸಂತೋಷದಿಂದ ನಾನು ಕೃಷಿ ಖಾತೆ ವಹಿಸಿಕೊಂಡಿದ್ದೇನೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆ ನೀಡಿದ್ದಾರೆ.

ನಾವು ಯಾವ ಖಾತೆಯಲ್ಲಿದ್ದರೂ ಅದು ಸರ್ಕಾರದ ಕೆಲಸ. ಆನಂದ್ ಸಿಂಗ್‌ಗೆ ಮೊದಲು ದೊಡ್ಡ ಖಾತೆಯನ್ನು ಕೊಟ್ಟಿದ್ದರು. ಆ ಖಾತೆಯನ್ನು ಕಿತ್ತುಕೊಂಡಿದ್ದಕ್ಕೆ ಅಸಮಾಧಾನವಾಗಿದೆ. ಖಾತೆ ದೊಡ್ಡದು ಅಂದರೆ ಹೆಚ್ಚು ಕೆಲಸ ಇರುತ್ತದೆ. ಅರಣ್ಯ ಖಾತೆ ಬಗ್ಗೆ ಏನು ಕನಸು ಕಂಡಿದ್ದರೆಂದು ಗೊತ್ತಿಲ್ಲ. 115+17 ಎರಡೂ ಸೇರಿದ್ದಕ್ಕೆ ಸರ್ಕಾರ ಸುಸೂತ್ರವಾಗಿದೆ. ಎರಡಕ್ಕೂ ಅಷ್ಟೇ ಪ್ರಾಮುಖ್ಯತೆ ಇದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಆನಂದ್ ಸಿಂಗ್ ಮತ್ತು ಎಂಟಿಬಿ ನಾಗರಾಜ್ ಅಸಮಾಧಾನ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು, ಖಾತೆ ಹಂಚಿಕೆ ವೇಳೆ ಅಸಮಾಧಾನ ಸಹಜವಾಗಿ ಇರುತ್ತದೆ. ಸಿಎಂ ಬೊಮ್ಮಾಯಿ ಅಸಮಾಧಾನವನ್ನು ಸರಿಪಡಿಸುತ್ತಾರೆ. ಎಲ್ಲದಕ್ಕೂ ಸದ್ಯದಲ್ಲಿಯೇ ತೆರೆಬೀಳುತ್ತದೆ. ನಮ್ಮ ಮಿತ್ರಮಂಡಳಿಯಲ್ಲಿ ಯಾವುದೇ ಬಿರುಕು ಇಲ್ಲ. ಸಚಿವ ಆನಂದ್ ಸಿಂಗ್ ಜತೆ ನಾನು ಚರ್ಚೆ ಮಾಡಿದ್ದೇನೆ. ಸದ್ಯದಲ್ಲಿಯೇ ಎಲ್ಲಾ ಅಸಮಾಧಾನ ಬಗೆಹರಿಯುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಬಳಿಕ ಸಚಿವರು ವಿಜಯೋತ್ಸವ ಮಾಡುತ್ತಿದ್ದಾರೆಂಬ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್ ನಾವು ಯಾವುದೇ ವಿಜಯೋತ್ಸವವನ್ನು ಮಾಡಿಲ್ಲ. ನಾವು ಸಚಿವರಾಗಿದ್ದಕ್ಕೆ ಸಹಜವಾಗಿ ಜನ ಖುಷಿ ಪಟ್ಟಿದ್ದಾರೆ. ಸಂಭ್ರಮಾಚರಣೆ ಖುಷಿಯಿಂದ ಆಗಿದೆ ಏನೂ ಮಾಡುವುದಕ್ಕೆ ಆಗಲ್ಲ. ಅವರು ಖುಷಿಯಿಂದ ಬಂದಾಗ ಹೊಡೆದು ಓಡಿಸಲು ಆಗಲ್ಲ. ಜನರಿಂದ ಆಯ್ಕೆಯಾದವರು, ಅವರ ಪ್ರೀತಿ ತಡೆಯಬಾರದು. ವಿಪಕ್ಷದಲ್ಲಿ ಇದ್ದವರು ಟೀಕೆ ಮಾಡುವುದು ಸಹಜ ಎಂದು ಬೆಂಗಳೂರಿನಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ:

ಸಚಿವ ಬಿಸಿ ಪಾಟೀಲ್‌ ಕೋಲಾರದಲ್ಲಿ ರೈತರೊಂದಿಗೆ ಏಕ್‌ ದಿನ್‌ ಕಾ ಸುಲ್ತಾನ್‌

ಪ್ರಜಾಪ್ರಭುತ್ವ ಜನರಿಂದ ನಡೆಯುತ್ತದೆಯೇ ಹೊರತು ಮಠಾಧೀಶರಿಂದಲ್ಲ ಎಂದ ಮಾಜಿ ಸಚಿವ ಬಿ ಸಿ ಪಾಟೀಲ್

Published On - 12:16 pm, Mon, 9 August 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?