AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raid: ಬೆಂಗಳೂರಿನ ಶೋಭಾ ಡೆವಲಪರ್ಸ್ ಕಚೇರಿಗಳ ಮೇಲೆ ಐಟಿ ದಾಳಿ

IT Raid: ಆದಾಯ ತೆರಿಗೆ ವಂಚನೆ ಹಿನ್ನೆಲೆ, ಬೆಂಗಳೂರು ಹಾಗೂ ಚೆನ್ನೈ ವಿಭಾಗದ ಐಟಿ(IT) ಅಧಿಕಾರಿಗಳಿಂದ ಶೋಭಾ ಡೆವಲಪರ್ಸ್ ಕೇಂದ್ರ ಕಚೇರಿ ಹಾಗೂ ಅದಕ್ಕೆ ಸಂಬಂಧಿಸಿದ ಇತರೆ ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ.

IT Raid: ಬೆಂಗಳೂರಿನ ಶೋಭಾ ಡೆವಲಪರ್ಸ್ ಕಚೇರಿಗಳ ಮೇಲೆ ಐಟಿ ದಾಳಿ
ಐಟಿ ದಾಳಿ
ಕಿರಣ್ ಹನುಮಂತ್​ ಮಾದಾರ್
|

Updated on:Mar 20, 2023 | 1:49 PM

Share

ಬೆಂಗಳೂರು:  ಶೋಭಾ ಡೆವಲಪರ್ಸ್ ಕೇಂದ್ರ ಕಚೇರಿ ಹಾಗೂ ಅದಕ್ಕೆ ಸಂಬಂಧಿಸಿದ ಇತರೆ ಕಚೇರಿಗಳ ಮೇಲೆ ಐಟಿ  ದಾಳಿಯಾಗಿದೆ.  ಆದಾಯ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ಚೆನ್ನೈ ವಿಭಾಗದ ಐಟಿ(IT) ಅಧಿಕಾರಿಗಳು ಶೋಭಾ ಡೆವಲಪರ್ಸ್ ಮೇಲೆ ದಾಳಿ ಮಾಡಿದ್ದಾರೆ. ಇಂದು(ಮಾರ್ಚ್ 20) ವೈಟ್ ಫೀಲ್ಡ್ ರಸ್ತೆಯ ಹೂಡಿ, ಬನ್ನೇರುಘಟ್ಟ ರಸ್ತೆಯ ಅರಕೆರೆ ಬಳಿಯ ಕಚೇರಿಗಳ ಮೇಲೆ ಸುಮಾರು 50 ವಾಹನಗಳಲ್ಲಿ ಹತ್ತು ಅಧಿಕಾರಿಗಳನ್ನೊಳಗೊಂಡ ಐದು ತಂಡಗಳಿಂದ ಏಕಕಾಲಕ್ಕೆ ದಾಳಿಯಾಗಿದ್ದು,  ಅಧಿಕಾರಿಗಳು ಕಡತಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.

ಬಿಗಿ ಪೊಲೀಸ್ ಬಂದೋಬಸ್ತ್​ನಲ್ಲಿ ಶೋಭಾ ಡೆವಲಪರ್ಸ್ ಮುಖ್ಯ ಕಚೇರಿಯಲ್ಲಿ ಪರಿಶೀಲನೆ

ಬಿಗಿ ಪೊಲೀಸ್ ಬಂದೋಬಸ್ತ್​ನಲ್ಲಿ ಶೋಭಾ ಡೆವಲಪರ್ಸ್ ಮುಖ್ಯ ಕಚೇರಿಯಲ್ಲಿ ಐವತ್ತಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ. ಇನ್ನು ಐಟಿ ದಾಳಿ ಹಿನ್ನಲೆ ಶೋಬಾ ಡೆವಲಪರ್ಸ್ ಮುಖ್ಯ ಕಚೇರಿಯಲ್ಲಿ ಇಂದಿನ ಕೆಲಸ ಸಂಪೂರ್ಣ ಸ್ಥಗಿತ ಮಾಡಲಾಗಿದೆ. ಯಾವುದೇ ನೌಕರರನ್ನ ಹೊರಗೆ ಹೋಗದಂತೆ ಐಟಿ ಅಧಿಕಾರಿಗಳು ಸೂಚಿಸಿದ್ದಾರೆ. ಅದರಂತೆ ಎಲ್ಲ ನೌಕರರನ್ನ ಕಚೇರಿ ಅವರಣದಲ್ಲೆ ಸ್ಥಳೀಯ  ಪೊಲೀಸರು ಇರಿಸಿದ್ದಾರೆ.

 IT ದಾಳಿ ವಿಚಾರ; IT ಎನ್ನುವುದು ಬಿಜೆಪಿ ಇಲೆಕ್ಷನ್ ಡಿಪಾರ್ಟ್ಮೆಂಟ್ ಎಂದ ರಾಜ್ಯ ಉಸ್ತುವಾರಿ ಸುರ್ಜೇವಾಲ

ಇನ್ನು ಶೋಭಾ ಡೆವಲಪರ್ಸ್ ಮೇಲೆ IT ದಾಳಿ ವಿಚಾರ ಕುರಿತು ಮಾತನಾಡಿದ ಸುರ್ಜೇವಾಲಾ‘ IT ಎನ್ನುವುದು ಬಿಜೆಪಿ ಇಲೆಕ್ಷನ್ ಡಿಪಾರ್ಟ್ಮೆಂಟ್ ಆಗಿದೆ. ಸಿಬಿಐ ಎನ್ನುವುದು ಕ್ಯಾಪ್ಟ್ಯೂವ್ ಬ್ಯೂರೋ ಇನ್ವೆಸ್ಟಿಗೇಶನ್ ಆಗಿದೆ. ಬಿಜೆಪಿ ED, CBI ಬಳಸಿಕೊಂಡು ಚುನಾವಣೆ ತಯಾರಿ ನಡೆಸಿದೆ. ಚುನಾವಣೆ ಮೈದಾನದಲ್ಲಿ IT, ED, CBI ಇಳದಿವೆ. ನಮ್ಮ ಮೇಲೆ ಸುಳ್ಳು ಸುಳ್ಳು ಆರೋಪ ಹೇರಲು ಮುಂದಾಗಿದೆ. ಇಂದು ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ ಘೋಷಣೆ ಮಾಡಲಿದೆ ಎಂದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:08 pm, Mon, 20 March 23

ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ