AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raid: ಬೆಂಗಳೂರಿನ ಶೋಭಾ ಡೆವಲಪರ್ಸ್ ಕಚೇರಿಗಳ ಮೇಲೆ ಐಟಿ ದಾಳಿ

IT Raid: ಆದಾಯ ತೆರಿಗೆ ವಂಚನೆ ಹಿನ್ನೆಲೆ, ಬೆಂಗಳೂರು ಹಾಗೂ ಚೆನ್ನೈ ವಿಭಾಗದ ಐಟಿ(IT) ಅಧಿಕಾರಿಗಳಿಂದ ಶೋಭಾ ಡೆವಲಪರ್ಸ್ ಕೇಂದ್ರ ಕಚೇರಿ ಹಾಗೂ ಅದಕ್ಕೆ ಸಂಬಂಧಿಸಿದ ಇತರೆ ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ.

IT Raid: ಬೆಂಗಳೂರಿನ ಶೋಭಾ ಡೆವಲಪರ್ಸ್ ಕಚೇರಿಗಳ ಮೇಲೆ ಐಟಿ ದಾಳಿ
ಐಟಿ ದಾಳಿ
ಕಿರಣ್ ಹನುಮಂತ್​ ಮಾದಾರ್
|

Updated on:Mar 20, 2023 | 1:49 PM

Share

ಬೆಂಗಳೂರು:  ಶೋಭಾ ಡೆವಲಪರ್ಸ್ ಕೇಂದ್ರ ಕಚೇರಿ ಹಾಗೂ ಅದಕ್ಕೆ ಸಂಬಂಧಿಸಿದ ಇತರೆ ಕಚೇರಿಗಳ ಮೇಲೆ ಐಟಿ  ದಾಳಿಯಾಗಿದೆ.  ಆದಾಯ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ಚೆನ್ನೈ ವಿಭಾಗದ ಐಟಿ(IT) ಅಧಿಕಾರಿಗಳು ಶೋಭಾ ಡೆವಲಪರ್ಸ್ ಮೇಲೆ ದಾಳಿ ಮಾಡಿದ್ದಾರೆ. ಇಂದು(ಮಾರ್ಚ್ 20) ವೈಟ್ ಫೀಲ್ಡ್ ರಸ್ತೆಯ ಹೂಡಿ, ಬನ್ನೇರುಘಟ್ಟ ರಸ್ತೆಯ ಅರಕೆರೆ ಬಳಿಯ ಕಚೇರಿಗಳ ಮೇಲೆ ಸುಮಾರು 50 ವಾಹನಗಳಲ್ಲಿ ಹತ್ತು ಅಧಿಕಾರಿಗಳನ್ನೊಳಗೊಂಡ ಐದು ತಂಡಗಳಿಂದ ಏಕಕಾಲಕ್ಕೆ ದಾಳಿಯಾಗಿದ್ದು,  ಅಧಿಕಾರಿಗಳು ಕಡತಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.

ಬಿಗಿ ಪೊಲೀಸ್ ಬಂದೋಬಸ್ತ್​ನಲ್ಲಿ ಶೋಭಾ ಡೆವಲಪರ್ಸ್ ಮುಖ್ಯ ಕಚೇರಿಯಲ್ಲಿ ಪರಿಶೀಲನೆ

ಬಿಗಿ ಪೊಲೀಸ್ ಬಂದೋಬಸ್ತ್​ನಲ್ಲಿ ಶೋಭಾ ಡೆವಲಪರ್ಸ್ ಮುಖ್ಯ ಕಚೇರಿಯಲ್ಲಿ ಐವತ್ತಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ. ಇನ್ನು ಐಟಿ ದಾಳಿ ಹಿನ್ನಲೆ ಶೋಬಾ ಡೆವಲಪರ್ಸ್ ಮುಖ್ಯ ಕಚೇರಿಯಲ್ಲಿ ಇಂದಿನ ಕೆಲಸ ಸಂಪೂರ್ಣ ಸ್ಥಗಿತ ಮಾಡಲಾಗಿದೆ. ಯಾವುದೇ ನೌಕರರನ್ನ ಹೊರಗೆ ಹೋಗದಂತೆ ಐಟಿ ಅಧಿಕಾರಿಗಳು ಸೂಚಿಸಿದ್ದಾರೆ. ಅದರಂತೆ ಎಲ್ಲ ನೌಕರರನ್ನ ಕಚೇರಿ ಅವರಣದಲ್ಲೆ ಸ್ಥಳೀಯ  ಪೊಲೀಸರು ಇರಿಸಿದ್ದಾರೆ.

 IT ದಾಳಿ ವಿಚಾರ; IT ಎನ್ನುವುದು ಬಿಜೆಪಿ ಇಲೆಕ್ಷನ್ ಡಿಪಾರ್ಟ್ಮೆಂಟ್ ಎಂದ ರಾಜ್ಯ ಉಸ್ತುವಾರಿ ಸುರ್ಜೇವಾಲ

ಇನ್ನು ಶೋಭಾ ಡೆವಲಪರ್ಸ್ ಮೇಲೆ IT ದಾಳಿ ವಿಚಾರ ಕುರಿತು ಮಾತನಾಡಿದ ಸುರ್ಜೇವಾಲಾ‘ IT ಎನ್ನುವುದು ಬಿಜೆಪಿ ಇಲೆಕ್ಷನ್ ಡಿಪಾರ್ಟ್ಮೆಂಟ್ ಆಗಿದೆ. ಸಿಬಿಐ ಎನ್ನುವುದು ಕ್ಯಾಪ್ಟ್ಯೂವ್ ಬ್ಯೂರೋ ಇನ್ವೆಸ್ಟಿಗೇಶನ್ ಆಗಿದೆ. ಬಿಜೆಪಿ ED, CBI ಬಳಸಿಕೊಂಡು ಚುನಾವಣೆ ತಯಾರಿ ನಡೆಸಿದೆ. ಚುನಾವಣೆ ಮೈದಾನದಲ್ಲಿ IT, ED, CBI ಇಳದಿವೆ. ನಮ್ಮ ಮೇಲೆ ಸುಳ್ಳು ಸುಳ್ಳು ಆರೋಪ ಹೇರಲು ಮುಂದಾಗಿದೆ. ಇಂದು ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ ಘೋಷಣೆ ಮಾಡಲಿದೆ ಎಂದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:08 pm, Mon, 20 March 23

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್