AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raid: ಬೆಂಗಳೂರಿನಲ್ಲಿ 4ನೇ ದಿನವೂ ಮುಂದುವರಿದ ಐಟಿ ದಾಳಿ

IT Raid Bengaluru: 4ನೇ ದಿನವೂ ಗುತ್ತಿಗೆದಾರ ಉಪ್ಪಾರ್ ಕಚೇರಿಯಲ್ಲಿ ತನಿಖೆ ನಡೆಯುತ್ತಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಉಪ್ಪಾರ್ ಕಚೇರಿಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ

IT Raid: ಬೆಂಗಳೂರಿನಲ್ಲಿ 4ನೇ ದಿನವೂ ಮುಂದುವರಿದ ಐಟಿ ದಾಳಿ
ಉಪ್ಪಾರ್ ಕಚೇರಿಯಲ್ಲಿ ತನಿಖೆ ಮುಂದುವರಿದಿದೆ
TV9 Web
| Edited By: sandhya thejappa|

Updated on:Oct 10, 2021 | 11:14 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) 4ನೇ ದಿನವೂ ಐಟಿ ದಾಳಿ (IT Raid) ಮುಂದುವರಿದಿದೆ. ಬೆಳಗ್ಗೆ 9 ಗಂಟೆ ನಂತರ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಗುತ್ತಿಗೆದಾರರ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಸೋಮಶೇಖರ್, ಗುತ್ತಿಗೆದಾರ ಉಪ್ಪಾರ್ ಸೇರಿದಂತೆ ಹಲವರ ಮನೆ, ಕಚೇರಿಗಳಲ್ಲಿ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಉಪ್ಪಾರ್ ಕಚೇರಿ, ಬಸವೇಶ್ವರನಗರದಲ್ಲಿರುವ ಸೋಮಶೇಖರ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

4ನೇ ದಿನವೂ ಗುತ್ತಿಗೆದಾರ ಉಪ್ಪಾರ್ ಕಚೇರಿಯಲ್ಲಿ ತನಿಖೆ ನಡೆಯುತ್ತಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಉಪ್ಪಾರ್ ಕಚೇರಿಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಡರಾತ್ರಿವರೆಗೂ ತನಿಖೆ ನಡೆಸಿ ತೆರಳಿದ್ದ ಐಟಿ ಅಧಿಕಾರಿಗಳು, ಇಂದು ಇನ್ನೋವಾ ಕಾರಿನಲ್ಲಿ ಆಗಮಿಸಿದ್ದಾರೆ. ಇಂದು ಸಂಜೆವರೆಗೂ ದಾಖಲೆಗಳ ಲೆಕ್ಕಾಚಾರ ಮತ್ತು ಪರಿಶೀಲನೆ ನಡೆಸುತ್ತಾರೆ.

ದಾಳಿ ಅಂತ್ಯ ರಾಹುಲ್ ಎಂಟರ್ಪ್ರೈಸ್​ನಲ್ಲಿ ಶೋಧ ಅಂತ್ಯವಾಗಿದೆ. ಸತತ ಮೂರು ದಿನಗಳ ಕಾಲ ಐಟಿ ದಾಳಿ ನಡೆದಿತ್ತು. ಸಹಕಾರನಗರದ ರಾಹುಲ್ ಎಂಟರ್ಪ್ರೈಸಸ್ ಕಚೇರಿಯಲ್ಲಿ ನಿರಂತರ ಮೂರು ದಿನ ಕಡತಗಳ ಪರಿಶೀಲನೆ ನಡೆದಿತ್ತು. ಸಿಮೆಂಟ್ ಮತ್ತು ಸ್ಟೀಲ್ ಡೀಲ್ ಸಂಬಂಧಿತವಾಗಿ ಶೋಧ ನಡೆಸಲಾಗಿತ್ತು. ವಿವಿಧ ಕಾಂಟ್ರಾಕ್ಟರ್​ಗಳಿಗೆ ಸಂಬಂಧಿಸಿ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿತ್ತು. ರಾಹುಲ್ ಎಂಟರ್ಪ್ರೈಸ್ ಹಲವು ಕಾಂಟ್ರಾಕ್ಟರ್​ಗಳಿಗೆ ಮೆಟಿರೀಯಲ್ ಸಪ್ಲೈ ಮಾಡಿತ್ತು. ಇದಕ್ಕೆ ಸಂಬಂಧಿಸಿ ಸತತ 60 ಗಂಟೆಗಳಿಗೂ ಅಧಿಕ ಸಮಯ ದಾಳಿ ನಡೆಸಿದ್ದಾರೆ. ನಿನ್ನೆ ರಾತ್ರಿ ದಾಳಿ ಮುಕ್ತಾಯಗೊಳಿಸಿ ಐಟಿ ಅಧಿಕಾರಿಗಳು ನಿರ್ಗಮಿಸಿದ್ದಾರೆ.

ಇದನ್ನೂ ಓದಿ

ದಕ್ಷಿಣ ಕನ್ನಡ: ಮೂಡುಬಿದಿರೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

IT raid in Bangalore: ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಕಡೆ ಐಟಿ ದಾಳಿ; ಚಾರ್ಟೆಡ್ ಅಕೌಂಟೆಂಟ್ ಅಮಲಾ ಮನೆ ಮೇಲೆ IT ರೇಡ್

Published On - 11:10 am, Sun, 10 October 21

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ