AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raid: ಬೆಂಗಳೂರಿನಲ್ಲಿ 4ನೇ ದಿನವೂ ಮುಂದುವರಿದ ಐಟಿ ದಾಳಿ

IT Raid Bengaluru: 4ನೇ ದಿನವೂ ಗುತ್ತಿಗೆದಾರ ಉಪ್ಪಾರ್ ಕಚೇರಿಯಲ್ಲಿ ತನಿಖೆ ನಡೆಯುತ್ತಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಉಪ್ಪಾರ್ ಕಚೇರಿಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ

IT Raid: ಬೆಂಗಳೂರಿನಲ್ಲಿ 4ನೇ ದಿನವೂ ಮುಂದುವರಿದ ಐಟಿ ದಾಳಿ
ಉಪ್ಪಾರ್ ಕಚೇರಿಯಲ್ಲಿ ತನಿಖೆ ಮುಂದುವರಿದಿದೆ
TV9 Web
| Updated By: sandhya thejappa|

Updated on:Oct 10, 2021 | 11:14 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) 4ನೇ ದಿನವೂ ಐಟಿ ದಾಳಿ (IT Raid) ಮುಂದುವರಿದಿದೆ. ಬೆಳಗ್ಗೆ 9 ಗಂಟೆ ನಂತರ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಗುತ್ತಿಗೆದಾರರ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಸೋಮಶೇಖರ್, ಗುತ್ತಿಗೆದಾರ ಉಪ್ಪಾರ್ ಸೇರಿದಂತೆ ಹಲವರ ಮನೆ, ಕಚೇರಿಗಳಲ್ಲಿ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಉಪ್ಪಾರ್ ಕಚೇರಿ, ಬಸವೇಶ್ವರನಗರದಲ್ಲಿರುವ ಸೋಮಶೇಖರ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

4ನೇ ದಿನವೂ ಗುತ್ತಿಗೆದಾರ ಉಪ್ಪಾರ್ ಕಚೇರಿಯಲ್ಲಿ ತನಿಖೆ ನಡೆಯುತ್ತಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಉಪ್ಪಾರ್ ಕಚೇರಿಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಡರಾತ್ರಿವರೆಗೂ ತನಿಖೆ ನಡೆಸಿ ತೆರಳಿದ್ದ ಐಟಿ ಅಧಿಕಾರಿಗಳು, ಇಂದು ಇನ್ನೋವಾ ಕಾರಿನಲ್ಲಿ ಆಗಮಿಸಿದ್ದಾರೆ. ಇಂದು ಸಂಜೆವರೆಗೂ ದಾಖಲೆಗಳ ಲೆಕ್ಕಾಚಾರ ಮತ್ತು ಪರಿಶೀಲನೆ ನಡೆಸುತ್ತಾರೆ.

ದಾಳಿ ಅಂತ್ಯ ರಾಹುಲ್ ಎಂಟರ್ಪ್ರೈಸ್​ನಲ್ಲಿ ಶೋಧ ಅಂತ್ಯವಾಗಿದೆ. ಸತತ ಮೂರು ದಿನಗಳ ಕಾಲ ಐಟಿ ದಾಳಿ ನಡೆದಿತ್ತು. ಸಹಕಾರನಗರದ ರಾಹುಲ್ ಎಂಟರ್ಪ್ರೈಸಸ್ ಕಚೇರಿಯಲ್ಲಿ ನಿರಂತರ ಮೂರು ದಿನ ಕಡತಗಳ ಪರಿಶೀಲನೆ ನಡೆದಿತ್ತು. ಸಿಮೆಂಟ್ ಮತ್ತು ಸ್ಟೀಲ್ ಡೀಲ್ ಸಂಬಂಧಿತವಾಗಿ ಶೋಧ ನಡೆಸಲಾಗಿತ್ತು. ವಿವಿಧ ಕಾಂಟ್ರಾಕ್ಟರ್​ಗಳಿಗೆ ಸಂಬಂಧಿಸಿ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿತ್ತು. ರಾಹುಲ್ ಎಂಟರ್ಪ್ರೈಸ್ ಹಲವು ಕಾಂಟ್ರಾಕ್ಟರ್​ಗಳಿಗೆ ಮೆಟಿರೀಯಲ್ ಸಪ್ಲೈ ಮಾಡಿತ್ತು. ಇದಕ್ಕೆ ಸಂಬಂಧಿಸಿ ಸತತ 60 ಗಂಟೆಗಳಿಗೂ ಅಧಿಕ ಸಮಯ ದಾಳಿ ನಡೆಸಿದ್ದಾರೆ. ನಿನ್ನೆ ರಾತ್ರಿ ದಾಳಿ ಮುಕ್ತಾಯಗೊಳಿಸಿ ಐಟಿ ಅಧಿಕಾರಿಗಳು ನಿರ್ಗಮಿಸಿದ್ದಾರೆ.

ಇದನ್ನೂ ಓದಿ

ದಕ್ಷಿಣ ಕನ್ನಡ: ಮೂಡುಬಿದಿರೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

IT raid in Bangalore: ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಕಡೆ ಐಟಿ ದಾಳಿ; ಚಾರ್ಟೆಡ್ ಅಕೌಂಟೆಂಟ್ ಅಮಲಾ ಮನೆ ಮೇಲೆ IT ರೇಡ್

Published On - 11:10 am, Sun, 10 October 21

ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ಅಪ್ಪು ಹೋದಮೇಲೆ ಏರಿಯಾನಲ್ಲಿ ಗಣೇಶ ಇಡುತ್ತಿಲ್ಲ: ವಿನಯ್ ರಾಜ್​ಕುಮಾರ್
ಅಪ್ಪು ಹೋದಮೇಲೆ ಏರಿಯಾನಲ್ಲಿ ಗಣೇಶ ಇಡುತ್ತಿಲ್ಲ: ವಿನಯ್ ರಾಜ್​ಕುಮಾರ್
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್