AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raid: ಬೆಂಗಳೂರಿನಲ್ಲಿ 4ನೇ ದಿನವೂ ಮುಂದುವರಿದ ಐಟಿ ದಾಳಿ

IT Raid Bengaluru: 4ನೇ ದಿನವೂ ಗುತ್ತಿಗೆದಾರ ಉಪ್ಪಾರ್ ಕಚೇರಿಯಲ್ಲಿ ತನಿಖೆ ನಡೆಯುತ್ತಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಉಪ್ಪಾರ್ ಕಚೇರಿಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ

IT Raid: ಬೆಂಗಳೂರಿನಲ್ಲಿ 4ನೇ ದಿನವೂ ಮುಂದುವರಿದ ಐಟಿ ದಾಳಿ
ಉಪ್ಪಾರ್ ಕಚೇರಿಯಲ್ಲಿ ತನಿಖೆ ಮುಂದುವರಿದಿದೆ
TV9 Web
| Edited By: |

Updated on:Oct 10, 2021 | 11:14 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) 4ನೇ ದಿನವೂ ಐಟಿ ದಾಳಿ (IT Raid) ಮುಂದುವರಿದಿದೆ. ಬೆಳಗ್ಗೆ 9 ಗಂಟೆ ನಂತರ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಗುತ್ತಿಗೆದಾರರ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಸೋಮಶೇಖರ್, ಗುತ್ತಿಗೆದಾರ ಉಪ್ಪಾರ್ ಸೇರಿದಂತೆ ಹಲವರ ಮನೆ, ಕಚೇರಿಗಳಲ್ಲಿ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಉಪ್ಪಾರ್ ಕಚೇರಿ, ಬಸವೇಶ್ವರನಗರದಲ್ಲಿರುವ ಸೋಮಶೇಖರ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

4ನೇ ದಿನವೂ ಗುತ್ತಿಗೆದಾರ ಉಪ್ಪಾರ್ ಕಚೇರಿಯಲ್ಲಿ ತನಿಖೆ ನಡೆಯುತ್ತಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಉಪ್ಪಾರ್ ಕಚೇರಿಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಡರಾತ್ರಿವರೆಗೂ ತನಿಖೆ ನಡೆಸಿ ತೆರಳಿದ್ದ ಐಟಿ ಅಧಿಕಾರಿಗಳು, ಇಂದು ಇನ್ನೋವಾ ಕಾರಿನಲ್ಲಿ ಆಗಮಿಸಿದ್ದಾರೆ. ಇಂದು ಸಂಜೆವರೆಗೂ ದಾಖಲೆಗಳ ಲೆಕ್ಕಾಚಾರ ಮತ್ತು ಪರಿಶೀಲನೆ ನಡೆಸುತ್ತಾರೆ.

ದಾಳಿ ಅಂತ್ಯ ರಾಹುಲ್ ಎಂಟರ್ಪ್ರೈಸ್​ನಲ್ಲಿ ಶೋಧ ಅಂತ್ಯವಾಗಿದೆ. ಸತತ ಮೂರು ದಿನಗಳ ಕಾಲ ಐಟಿ ದಾಳಿ ನಡೆದಿತ್ತು. ಸಹಕಾರನಗರದ ರಾಹುಲ್ ಎಂಟರ್ಪ್ರೈಸಸ್ ಕಚೇರಿಯಲ್ಲಿ ನಿರಂತರ ಮೂರು ದಿನ ಕಡತಗಳ ಪರಿಶೀಲನೆ ನಡೆದಿತ್ತು. ಸಿಮೆಂಟ್ ಮತ್ತು ಸ್ಟೀಲ್ ಡೀಲ್ ಸಂಬಂಧಿತವಾಗಿ ಶೋಧ ನಡೆಸಲಾಗಿತ್ತು. ವಿವಿಧ ಕಾಂಟ್ರಾಕ್ಟರ್​ಗಳಿಗೆ ಸಂಬಂಧಿಸಿ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿತ್ತು. ರಾಹುಲ್ ಎಂಟರ್ಪ್ರೈಸ್ ಹಲವು ಕಾಂಟ್ರಾಕ್ಟರ್​ಗಳಿಗೆ ಮೆಟಿರೀಯಲ್ ಸಪ್ಲೈ ಮಾಡಿತ್ತು. ಇದಕ್ಕೆ ಸಂಬಂಧಿಸಿ ಸತತ 60 ಗಂಟೆಗಳಿಗೂ ಅಧಿಕ ಸಮಯ ದಾಳಿ ನಡೆಸಿದ್ದಾರೆ. ನಿನ್ನೆ ರಾತ್ರಿ ದಾಳಿ ಮುಕ್ತಾಯಗೊಳಿಸಿ ಐಟಿ ಅಧಿಕಾರಿಗಳು ನಿರ್ಗಮಿಸಿದ್ದಾರೆ.

ಇದನ್ನೂ ಓದಿ

ದಕ್ಷಿಣ ಕನ್ನಡ: ಮೂಡುಬಿದಿರೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

IT raid in Bangalore: ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಕಡೆ ಐಟಿ ದಾಳಿ; ಚಾರ್ಟೆಡ್ ಅಕೌಂಟೆಂಟ್ ಅಮಲಾ ಮನೆ ಮೇಲೆ IT ರೇಡ್

Published On - 11:10 am, Sun, 10 October 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ