AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಮೇಘನಾ ಫುಡ್ಸ್​ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿ

ಬೆಂಗಳೂರಿನ ಮೇಘನಾ ಫುಡ್ಸ್​ ಗ್ರೂಪ್ ಕಂಪನಿಗೆ ಸಂಬಂಧಿಸಿದ​ 10ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೇಘನಾ ಫುಡ್ಸ್ ಕಂಪನಿ ಹೋಟೆಲ್ ಮತ್ತು ರೆಸ್ಟೋರೆಂಟ್​ಗಳನ್ನು ನಡೆಸುತ್ತಿದ್ದು, ಇದರ ಕೋರಮಂಗಲ, ಇಂದಿರಾನಗರ, ಜಯನಗರದಲ್ಲಿರುವ ಶಾಖೆಗಳಿವೆ.

ಬೆಂಗಳೂರಿನ ಮೇಘನಾ ಫುಡ್ಸ್​ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿ
ಆದಾಯ ತೆರಿಗೆ ಇಲಾಖೆ
ಪ್ರಜ್ವಲ್ ಅಮೀನ್​, ಉಡುಪಿ
| Updated By: ವಿವೇಕ ಬಿರಾದಾರ|

Updated on:Mar 19, 2024 | 3:07 PM

Share

ಬೆಂಗಳೂರು, ಮಾರ್ಚ್​ 19: ಬೆಂಗಳೂರಿನ (Bengaluru) ಮೇಘನಾ ಫುಡ್ಸ್​ ಗ್ರೂಪ್ ಕಂಪನಿಗೆ ಸಂಬಂಧಿಸಿದ​ 10ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೇಘನಾ ಫುಡ್ಸ್ ಕಂಪನಿ ಹೋಟೆಲ್ ಮತ್ತು ರೆಸ್ಟೋರೆಂಟ್​ಗಳನ್ನು ನಡೆಸುತ್ತಿದ್ದು, ಇದರ ಕೋರಮಂಗಲ, ಇಂದಿರಾನಗರ, ಜಯನಗರದಲ್ಲಿರುವ ಶಾಖೆಗಳಿವೆ. ಆದಾಯ ತೆರಿಗೆ ಪಾವತಿಯಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕರ್ನಾಟಕ ಮತ್ತು ಗೋವಾ ವಿಭಾಗದ ಅಧಿಕಾರಿಗಳು ಆಗಮಿಸಿದ್ದಾರೆ.

ಏನಿದು ಐಟಿ ರೇಡ್?

ಆದಾಯ ತೆರಿಗೆ ಇಲಾಖೆ ಒಂದು ಸ್ಥಳದಲ್ಲಿ ನಡೆಸುವ ಶೋಧ ಮತ್ತು ಸರ್ವೇಕ್ಷಣೆ ಕಾರ್ಯಾಚರಣೆಯನ್ನೇ ರೇಡ್ ಎನ್ನುವುದು. ಒಬ್ಬ ವ್ಯಕ್ತಿ ಅಥವಾ ಸಂಸ್ಥೆ ಅಕ್ರಮವಾಗಿ ಹಣ ಇಟ್ಟುಕೊಂಡಿದ್ದು ಗೊತ್ತಾದರೆ ಅಥವಾ ಅನುಮಾನ ಬಂದರೆ ಐಟಿ ಇಲಾಖೆ ರೇಡ್ ಮಾಡುತ್ತದೆ.

ಕಪ್ಪು ಹಣ ಸಂಗ್ರಹವನ್ನು ನಿಗ್ರಹಿಸಲು ಸಾಮಾನ್ಯವಾಗಿ ಈ ರೇಡ್ ನಡೆಸಲಾಗುತ್ತದೆ. ತೆರಿಗೆ ಪಾವತಿಯಾಗದ ಹಣವನ್ನು ಕಪ್ಪು ಹಣ ಎಂದು ಭಾವಿಸಲಾಗುತ್ತದೆ. ಹೀಗಾಗಿ, ಅನ್​ಅಕೌಂಟೆಡ್ ಆಗಿರುವ ಹಣ, ಅಂದರೆ ದಾಖಲೆ ಇಲ್ಲದ ಮತ್ತು ತೆರಿಗೆ ಕಟ್ಟದೇ ಇರುವ ಹಣ ಕಪ್ಪು ಹಣ. ಒಡವೆಯೂ ಒಳಗೊಂಡಂತೆ ಯಾವುದೇ ಲೆಕ್ಕವಿಲ್ಲದ ಆಸ್ತಿಗಳು ಇದರಲ್ಲಿ ಒಳಗೊಳ್ಳುತ್ತವೆ.

ಆದಾಯ ತೆರಿಗೆ ಇಲಾಖೆ ದೇಶದ ಹಣಕಾಸು ಬೆಳವಣಿಗೆ ಬಗ್ಗೆ ಸದಾ ಜಾಗೃತವಾಗಿರುತ್ತದೆ. ಯಾವ ಬಿಸಿನೆಸ್ ಎಷ್ಟು ಲಾಭ ಮಾಡಿದೆ ಇತ್ಯಾದಿ ಎಲ್ಲವನ್ನೂ ಗಮನಿಸುತ್ತಾ ಇರುತ್ತದೆ.

ಇದನ್ನೂ ಓದಿ: ಹುಬ್ಬಳ್ಳಿ: ಉದ್ಯಮಿ ಗಣೇಶ್ ಸೇಟ್ ಮನೆ ಮೇಲೆ ಐಟಿ ದಾಳಿ

ರೇಡ್​ಗೆ ಐಟಿ ಇಲಾಖೆ ಸಿದ್ಧತೆ ಹೇಗಿರುತ್ತೆ?

ಆದಾಯ ತೆರಿಗೆ ಇಲಾಖೆಯ ಕರ್ನಾಟಕ ವಿಭಾಗದ ಚೀಫ್ ಮುಖ್ಯ ಕಮಿಷನರ್ ಆಗಿ ನಿವೃತ್ತರಾಗಿರುವ ಹಾಗೂ ಕನ್ನಡದ ಖ್ಯಾತ ಸಾಹಿತಿಯೂ ಆಗಿರುವ ಕೆ ಸತ್ಯನಾರಾಯಣ ಅವರು ಟಿವಿ9 ಕನ್ನಡಕ್ಕೆ ನೀಡಿದ ಮಾಹಿತಿ ಪ್ರಕಾರ, ಐಟಿ ದಾಳಿ ಸಾಮಾನ್ಯವಾಗಿ ತೀರಾ ನಾಟಕೀಯವಾಗಿ, ದಿಢೀರ್ ಆಗಿ ನಡೆಯುವಂಥದ್ದಲ್ಲ. ಸಾಕಷ್ಟು ತಯಾರಿ ಮಾಡಿ, ಒಂದು ನೋಟ್ ಸಿದ್ಧಪಡಿಸಿ, ಡೈರೆಕ್ಟರ್, ಅಡಿಶನಲ್ ಡೈರೆಕ್ಟರ್ ಮಟ್ಟಕ್ಕೆ ಅದನ್ನು ತರಲಾಗುತ್ತದೆ. ಆ ಬಳಿಕ ವಾರಂಟ್ ಇಷ್ಯೂ ಮಾಡಲಾಗುತ್ತದೆ. ಇಲಾಖೆ ಮಟ್ಟದಲ್ಲೂ ಯಾವ ದುರ್ಬಳಕೆ ಆಗದಿರುವುದನ್ನು ಖಚಿಪಡಿಸಿಕೊಳ್ಳಲು ಕ್ರಾಸ್ ಚೆಕ್ ಮಾಡಲಾಗುತ್ತದೆ.

ಒಂದು ಕಡೆ ರೇಡ್ ನಡೆಸಲು ಬೇಕಾದ ಸಾಕ್ಷ್ಯಾಧಾರ ಇದ್ದರೂ ತತ್​ಕ್ಷಣವೇ ದಾಳಿ ಮಾಡಲಾಗುತ್ತದೆ ಎಂಬಂತಿಲ್ಲ. ಇಲಾಖೆಯಲ್ಲೂ ಸಿಬ್ಬಂದಿ ಕೊರತೆ ಇರುತ್ತದೆ. ಅಧಿಕಾರಿಗಳನ್ನು ಸಂಯೋಜಿಸಿ, ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ರೇಡ್ ಅಖಾಡಕ್ಕೆ ಇಳಿಯಲು ಒಂದೆರಡು ವಾರವೇ ಆಗಬಹುದು.

ಸುಖಾಸುಮ್ಮನೆ ರೇಡ್ ಮಾಡಲು ಆಗುವುದಿಲ್ಲ?

ರಾಜಕೀಯ ಒತ್ತಡ ಇತ್ಯಾದಿಯಿಂದ ಐಟಿ ರೇಡ್ ಆಗುವುದು ಕಡಿಮೆ. ಕೋರ್ಟ್​ನಲ್ಲಿ ವಿಚಾರಣೆಗೆ ಹೋಗುವುದರಿಂದ ಐಟಿ ಇಲಾಖೆ ಆಧಾರರಹಿತ ಪ್ರಕರಣಗಳನ್ನು ದಾಖಲಿಸುವುದಿಲ್ಲ.

Published On - 8:44 am, Tue, 19 March 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ