ಬೆಂಗಳೂರಿನಲ್ಲಿ ಕೆಜಿಎಫ್​ ಬಾಬು ಸೇರಿದಂತೆ ಹಲವು ಕಾಂಗ್ರೆಸ್​ ನಾಯಕರ ಮನೆಗಳ ಮೇಲೆ ಐಟಿ ದಾಳಿ

|

Updated on: Apr 19, 2023 | 10:57 AM

ಹೈಗ್ರೌಂಡ್ಸ್ ಬಳಿಯಿರುವ ಕೆಜಿಎಫ್ ಬಾಬು ನಿವಾಸ ರುಕ್ಸಾನಾ ಪ್ಯಾಲೇಸ್​​ನ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಕೆಜಿಎಫ್​ ಬಾಬು ಸೇರಿದಂತೆ ಹಲವು ಕಾಂಗ್ರೆಸ್​ ನಾಯಕರ ಮನೆಗಳ ಮೇಲೆ ಐಟಿ ದಾಳಿ
KGF Babu
Follow us on

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಕೇವಲ 20 ದಿನಗಳು ಮಾತ್ರ ಬಾಕಿ ಇವೆ. ಎಲ್ಲೆಡೆ ರಾಜಕೀಯ ಪಕ್ಷಗಳ ಪ್ರಚಾರ ಜೋರಾಗಿದೆ. ಇದರ ನಡುವೆ ಐಟಿ ಅಧಿಕಾರಿಗಳು ಕೂಡ ಅಲರ್ಟ್ ಆಗಿದ್ದು ಪದೇ ಪದೇ ದಾಳಿ ನಡೆಸುತ್ತಿದ್ದಾರೆ(IT Raid). ಕಳೆದ ಕೆಲ ದಿನಗಳ ಹಿಂದೆ ಮಂಗಳೂರು, ಮೈಸೂರು ಸೇರಿದಂತೆ ಕೆಲ ಕಡೆ ಕಾಂಗ್ರೆಸ್ ಮುಖಂಡರುಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿತ್ತು. ಈಗ ಐಟಿ ಅಧಿಕಾರಿಗಳು ಬೆಂಗಳೂರಿನಲ್ಲಿ ಕೆಜಿಎಫ್​ ಬಾಬು(KGF Babu) ಸೇರಿದಂತೆ ಹಲವು ಕಾಂಗ್ರೆಸ್​ ನಾಯಕರ(Congress) ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿ ರಾಜ್ಯಾದ್ಯಂತ 50 ಕಡೆ ಹಲವಾರು ಕಾಂಗ್ರೆಸ್ ನಾಯಕರ ನಿವಾಸದ ಮೇಲೆ ದಾಳಿ ನಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಕೆಜಿಎಫ್ ಬಾಬು ಚಿಕ್ಕಪೇಟೆ ಕ್ಷೇತ್ರದ ಸ್ಪರ್ಧಿ

ಇಂದು(ಏಪ್ರಿಲ್ 19) ಮುಂಜಾನೆಯಿಂದಲೇ ಹೈಗ್ರೌಂಡ್ಸ್ ಬಳಿಯಿರುವ ಕೆಜಿಎಫ್ ಬಾಬು ನಿವಾಸ ರುಕ್ಸಾನಾ ಪ್ಯಾಲೇಸ್​​ನ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಚಿಕ್ಕಪೇಟೆ ಅಸೆಂಬ್ಲಿ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ ಬಯಸಿ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಕೆಜಿಎಫ್ ಬಾಬು, ಕ್ಷೇತ್ರದಲ್ಲಿ ಅನೇಕ ಸಾಮಾಜ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಆದರೆ ಕಾಂಗ್ರೆಸ್​ ಪಕ್ಷವು ಬಾಬುಗೆ ಟಿಕೆಟ್ ನೀಡಲಿಲ್ಲ. ಹಾಗಾಗಿ ​ಬಾಬು ಅವರು ತಮ್ಮ ಪತ್ನಿಯನ್ನು ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದ್ದಾರೆ ಎಂಬುದು ಗಮನಾರ್ಹ.

ಇದನ್ನೂ ಓದಿ: Karnataka Elections: ಪದ್ಮನಾಭನಗರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಗುರಪ್ಪ ನಾಯ್ಡು ಮನೆ ಮೇಲೆ ಐಟಿ ದಾಳಿ

ಕಾಂಗ್ರೆಸ್​ನವರನ್ನು ಹೆದರಿಸೋಕೆ ಏನು ಬೇಕಾದರೂ ಮಾಡಲಿ

ಇನ್ನು ಐಟಿ ದಾಳಿ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ಜತೆ ಇರುವವರ ಮನೆ ಮೇಲೆ ಐಟಿ ದಾಳಿ ನಡೆಯುತ್ತಿದೆ. ಕಾಂಗ್ರೆಸ್​ನವರನ್ನು ಹೆದರಿಸೋಕೆ ಏನು ಬೇಕಾದರೂ ಮಾಡಲಿ. ಅವರು ಏನೇ ಮಾಡಿದರೂ ನಾವು ರಾಜ್ಯದಲ್ಲಿ ಬದಲಾವಣೆ ತರುತ್ತೇವೆ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಾಗ್ದಾಳಿ ನಡೆಸಿದರು.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:25 am, Wed, 19 April 23