AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಉದ್ಯಮಿಗಳು, ಬಿಲ್ಡರ್​ಗಳಿಗೆ ಐಟಿ ಶಾಕ್​: ದಾಳಿ

ಬೆಂಗಳೂರಿನ ಉದ್ಯಮಿಗಳು, ಬಿಲ್ಡರ್​ಗಳಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಐಟಿ ಅಧಿಕಾರಿಗಳು ಏಕಕಾಲಕ್ಕೆ ಬೆಂಗಳೂರಿನ 25ಕ್ಕೂ ಹೆಚ್ಚು ಕಡೆ ಉದ್ಯಮಿಗಳು, ಬಿಲ್ಡರ್​ಗಳ ಮನೆ ಮತ್ತು ಕಚೇರಿ ಮೇಲೆ‌ ದಾಳಿ ಮಾಡಿದ್ದಾರೆ. ಕತ್ರುಗುಪ್ಪೆ ಉದ್ಯಮಿ ಶ್ರೀನಿವಾಸ್ ಎಂಬುವರ ಮನೆ ಮೇಲೆ ದಾಳಿ ಮಾಡಿರುವ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.  

ಬೆಂಗಳೂರಿನ ಉದ್ಯಮಿಗಳು, ಬಿಲ್ಡರ್​ಗಳಿಗೆ ಐಟಿ ಶಾಕ್​: ದಾಳಿ
ಆದಾಯ ತೆರಿಗೆ ಇಲಾಖೆ
ವಿವೇಕ ಬಿರಾದಾರ
|

Updated on:Nov 27, 2024 | 1:32 PM

Share

ಬೆಂಗಳೂರು, ನವೆಂಬರ್​ 27: ಬೆಂಗಳೂರಿನ ಉದ್ಯಮಿಗಳು, ಬಿಲ್ಡರ್​ಗಳಿಗೆ ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ಶಾಕ್ ನೀಡಿದ್ದಾರೆ. ಐಟಿ ಅಧಿಕಾರಿಗಳು ಏಕಕಾಲಕ್ಕೆ ಬೆಂಗಳೂರಿನ (Bengaluru) 25ಕ್ಕೂ ಹೆಚ್ಚು ಕಡೆ ಉದ್ಯಮಿಗಳು, ಬಿಲ್ಡರ್​ಗಳ ಮನೆ ಮತ್ತು ಕಚೇರಿ ಮೇಲೆ‌ ದಾಳಿ ಮಾಡಿದ್ದಾರೆ. ಕತ್ರುಗುಪ್ಪೆ ಉದ್ಯಮಿ ಶ್ರೀನಿವಾಸ್ ಎಂಬುವರ ಮನೆ ಮೇಲೆ ದಾಳಿ ಮಾಡಿರುವ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಇದೇ ತಿಂಗಳು (ನ.07) ರಂದು ಐಟಿ ಅಧಿಕಾರಿಗಳು ಬೆಂಗಳೂರಿನ ಕೆಲವು ಕಂಪನಿಗಳಿಗೆ ಚುರುಕು ಮುಟ್ಟಿಸಿದ್ದರು. ಐಟಿ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ಕೆಲವು ಕಂಪನಿಗಳ ಮೇಲೆ ದಾಳಿ ಮಾಡಿದ್ದರು. ಕೆಲಸದ ಮೂಡ್​ನಲ್ಲಿದ್ದ ಸಿಬ್ಬಂದಿಗೆ ಶಾಕ್​ ನೀಡಿದ್ದರು.

ಬೆಂಗಳೂರಿನಲ್ಲಿರುವ ದೆಹಲಿ ಹಾಗೂ ವಾಣಿಜ್ಯ ನಗರಿ ಮುಂಬೈ ಮೂಲದ ಕಂಪನಿಗಳ ಕಚೇರಿಗಳ ಮೇಲೆ ದಾಳಿ ನಡೆದಿತ್ತು. ದಾಳಿ ವೇಳೆ ಅಧಿಕಾರಿಗಳು ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು. ಆದಾಯ ತೆರಿಗೆ ಇಲಾಖೆಯ ದೆಹಲಿ ಹಾಗೂ ಮುಂಬೈ ಶಾಖೆಯ ಅಧಿಕಾರಿಗಳಿಂದಲೇ ದಾಳಿ ನಡೆದಿತ್ತು ಎಂದು ತಿಳಿದು ಬಂದಿತ್ತು.

ಇದನ್ನೂ ಓದಿ: ಅಕ್ರಮ: ಬಿಬಿಎಂಪಿ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಇಡಿ ದಾಳಿ, ಮುಡಾ ಅಧಿಕಾರಿಗಳ ವಿಚಾರಣೆ

ಮುಡಾ ಹಗರಣ ಸಂಬಂಧ ಸಿಎಂ ಆಪ್ತ ರಾಕೇಶ್ ಪಾಪಣ್ಣ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ‌ ನಡೆಸಿ ಶೋಧ ಕಾರ್ಯ ನಡೆಸಿದ್ದರು. ಬಿಲ್ಡರ್​ಗಳಾದ ಮಂಜುನಾಥ್, ಜಯರಾಮ್ ಮನೆ ಮತ್ತು ಕಚೇರಿ ಹಾಗೂ ಅವರ ಸಂಬಂಧಿಕರ ಮನೆ ಮೇಲೆ ದಾಳಿಯಾಗಿತ್ತು. ಐವರು ಮುಡಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಮುಡಾ ಮಾಜಿ ಆಯುಕ್ತ ನಟೇಶ್, ದಿನೇಶ್​ರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಅಂತೆಯೇ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜ್ ಅವರನ್ನೂ ವಿಚಾರಣೆಗೆ ಒಳಪಡಿಸಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವರದಿ: ಪ್ರದೀಪ್​

Published On - 11:50 am, Wed, 27 November 24