AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಉದ್ಯಮಿಗಳು, ಬಿಲ್ಡರ್​ಗಳಿಗೆ ಐಟಿ ಶಾಕ್​: ದಾಳಿ

ಬೆಂಗಳೂರಿನ ಉದ್ಯಮಿಗಳು, ಬಿಲ್ಡರ್​ಗಳಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಐಟಿ ಅಧಿಕಾರಿಗಳು ಏಕಕಾಲಕ್ಕೆ ಬೆಂಗಳೂರಿನ 25ಕ್ಕೂ ಹೆಚ್ಚು ಕಡೆ ಉದ್ಯಮಿಗಳು, ಬಿಲ್ಡರ್​ಗಳ ಮನೆ ಮತ್ತು ಕಚೇರಿ ಮೇಲೆ‌ ದಾಳಿ ಮಾಡಿದ್ದಾರೆ. ಕತ್ರುಗುಪ್ಪೆ ಉದ್ಯಮಿ ಶ್ರೀನಿವಾಸ್ ಎಂಬುವರ ಮನೆ ಮೇಲೆ ದಾಳಿ ಮಾಡಿರುವ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.  

ಬೆಂಗಳೂರಿನ ಉದ್ಯಮಿಗಳು, ಬಿಲ್ಡರ್​ಗಳಿಗೆ ಐಟಿ ಶಾಕ್​: ದಾಳಿ
ಆದಾಯ ತೆರಿಗೆ ಇಲಾಖೆ
ವಿವೇಕ ಬಿರಾದಾರ
|

Updated on:Nov 27, 2024 | 1:32 PM

Share

ಬೆಂಗಳೂರು, ನವೆಂಬರ್​ 27: ಬೆಂಗಳೂರಿನ ಉದ್ಯಮಿಗಳು, ಬಿಲ್ಡರ್​ಗಳಿಗೆ ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ಶಾಕ್ ನೀಡಿದ್ದಾರೆ. ಐಟಿ ಅಧಿಕಾರಿಗಳು ಏಕಕಾಲಕ್ಕೆ ಬೆಂಗಳೂರಿನ (Bengaluru) 25ಕ್ಕೂ ಹೆಚ್ಚು ಕಡೆ ಉದ್ಯಮಿಗಳು, ಬಿಲ್ಡರ್​ಗಳ ಮನೆ ಮತ್ತು ಕಚೇರಿ ಮೇಲೆ‌ ದಾಳಿ ಮಾಡಿದ್ದಾರೆ. ಕತ್ರುಗುಪ್ಪೆ ಉದ್ಯಮಿ ಶ್ರೀನಿವಾಸ್ ಎಂಬುವರ ಮನೆ ಮೇಲೆ ದಾಳಿ ಮಾಡಿರುವ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಇದೇ ತಿಂಗಳು (ನ.07) ರಂದು ಐಟಿ ಅಧಿಕಾರಿಗಳು ಬೆಂಗಳೂರಿನ ಕೆಲವು ಕಂಪನಿಗಳಿಗೆ ಚುರುಕು ಮುಟ್ಟಿಸಿದ್ದರು. ಐಟಿ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ಕೆಲವು ಕಂಪನಿಗಳ ಮೇಲೆ ದಾಳಿ ಮಾಡಿದ್ದರು. ಕೆಲಸದ ಮೂಡ್​ನಲ್ಲಿದ್ದ ಸಿಬ್ಬಂದಿಗೆ ಶಾಕ್​ ನೀಡಿದ್ದರು.

ಬೆಂಗಳೂರಿನಲ್ಲಿರುವ ದೆಹಲಿ ಹಾಗೂ ವಾಣಿಜ್ಯ ನಗರಿ ಮುಂಬೈ ಮೂಲದ ಕಂಪನಿಗಳ ಕಚೇರಿಗಳ ಮೇಲೆ ದಾಳಿ ನಡೆದಿತ್ತು. ದಾಳಿ ವೇಳೆ ಅಧಿಕಾರಿಗಳು ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು. ಆದಾಯ ತೆರಿಗೆ ಇಲಾಖೆಯ ದೆಹಲಿ ಹಾಗೂ ಮುಂಬೈ ಶಾಖೆಯ ಅಧಿಕಾರಿಗಳಿಂದಲೇ ದಾಳಿ ನಡೆದಿತ್ತು ಎಂದು ತಿಳಿದು ಬಂದಿತ್ತು.

ಇದನ್ನೂ ಓದಿ: ಅಕ್ರಮ: ಬಿಬಿಎಂಪಿ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಇಡಿ ದಾಳಿ, ಮುಡಾ ಅಧಿಕಾರಿಗಳ ವಿಚಾರಣೆ

ಮುಡಾ ಹಗರಣ ಸಂಬಂಧ ಸಿಎಂ ಆಪ್ತ ರಾಕೇಶ್ ಪಾಪಣ್ಣ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ‌ ನಡೆಸಿ ಶೋಧ ಕಾರ್ಯ ನಡೆಸಿದ್ದರು. ಬಿಲ್ಡರ್​ಗಳಾದ ಮಂಜುನಾಥ್, ಜಯರಾಮ್ ಮನೆ ಮತ್ತು ಕಚೇರಿ ಹಾಗೂ ಅವರ ಸಂಬಂಧಿಕರ ಮನೆ ಮೇಲೆ ದಾಳಿಯಾಗಿತ್ತು. ಐವರು ಮುಡಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಮುಡಾ ಮಾಜಿ ಆಯುಕ್ತ ನಟೇಶ್, ದಿನೇಶ್​ರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಅಂತೆಯೇ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜ್ ಅವರನ್ನೂ ವಿಚಾರಣೆಗೆ ಒಳಪಡಿಸಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವರದಿ: ಪ್ರದೀಪ್​

Published On - 11:50 am, Wed, 27 November 24

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?