AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಸುಧಾಕರ್ ಆಪ್ತನ ಮನೆ ಮೇಲೆ ಐಟಿ ದಾಳಿ, ಕೋಟ್ಯಾಂತರ ರೂ. ಹಣ ಪತ್ತೆ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಆಪ್ತನ ಮೇಲೆ ಐಟಿ ದಾಳಿಯಾಗಿದ್ದು, ಮನೆಯಲ್ಲಿ ಕೋಟ್ಯಾಂತರ ರೂಪಾಯಿ ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ಹಾಗಾದ್ರೆ, ಎಷ್ಟು ನಗದು ಹಣ ಸಿಕ್ತು? ಎನ್ನುವ ವಿವರ ಇಲ್ಲಿದೆ.

ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಸುಧಾಕರ್ ಆಪ್ತನ ಮನೆ ಮೇಲೆ ಐಟಿ ದಾಳಿ, ಕೋಟ್ಯಾಂತರ ರೂ. ಹಣ ಪತ್ತೆ
ಗೋವಿಂದಪ್ಪ ಮನೆ
TV9 Web
| Edited By: |

Updated on: Apr 25, 2024 | 8:50 PM

Share

ಬೆಂಗಳೂರು, (ಏಪ್ರಿಲ್ 25): ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್(Dr K Sudhakar)  ಆಪ್ತ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಾದಾವರ ಗೋವಿಂದಪ್ಪ ನಿವಾಸದ ಮೇಲೆ ಐಟಿ ದಾಳಿಯಾಗಿದೆ (IT Raid). ಗೋವಿಂದಪ್ಪನವರ ನೆಲಮಂಗಲದ ಮನೆಯಲ್ಲಿ ಹಣ ಇದೆ ಎಂದು ಮಾಹಿತಿ ತಿಳಿಯುತ್ತಿದ್ದಂತೆಯೇ ಐಟಿ ಅಧಿಕಾರಿಗಳು ಇಂದು(ಏಪ್ರಿಲ್ 25) ದಾಳಿ ಮಾಡಿದ್ದಾರೆ. 10ಜನ ಐಟಿ ಅಧಿಕಾರಿಗಳು ಮನೆಯ ಇಂಚಿಂಚು ಪರಿಶೀಲನೆ ಮಾಡಿದ್ದು, ಈ ವೇಳೆ ಕೋಟ್ಯಾಂತರ ರೂಪಾಯಿ ನಗದು ಪತ್ತೆಯಾಗಿದೆ.

ಗೋವಿಂದಪ್ಪನವರ ನೆಲಮಂಗಲದ ಮನೆಯಲ್ಲಿ ಹಣ ಇದೆ ಎಂದು ಮಾಹಿತಿ ತಿಳಿಯುತ್ತಿದ್ದಂತೆಯೇ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀನಲೆ ನಡೆಸಿದರು. ಈ ವೇಳೆ ಕೋಟ್ಯಾಂತರ ರೂಪಾಯಿ ನಗದು ಹಣ ಹಾಗೂ ಚಿನ್ನಾಭರಣೆ ಪತ್ತೆಯಾಗಿದೆ. ಕೂಡಲೇ ಐಟಿ ಸಿಬ್ಬಂದಿ ಹಣ ಎಣಿಕೆ ಮೆಷಿನ್ ಹಾಗೂ ಚಿನ್ನಭರಣ ತೂಕದ ಮೆಷಿನ್ ತಗೆದುಕೊಂಡು ಬಂದು ಎಣಿಕೆ ಮಾಡಿದ್ದು, ಮನೆಯಲ್ಲಿ ದಾಖಲೆ ಇಲ್ಲದೆ ಪತ್ತೆಯಾದ ಬರೋಬ್ಬರಿ 4 ಕೋಟಿ 80ಲಕ್ಷ ರೂ. ಹಣ ವಶಕ್ಕೆ ಪಡೆದುಕೊಂಡಿದ್ದಾರೆ.

ದೊಡ್ಡ ಮೊತ್ತದ ಹಣ ಪತ್ತೆಯಾಗುತ್ತಿದ್ದಂತೆಯೇ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ದೌಡಾಯಿಸಿ ಮಾಹಿತಿ ಪಡೆದುಕೊಂಡರು. ಅಲ್ಲದೇ ಭದ್ರತೆ ಪರಿಶೀಲಿಸಿ ತೆರಳಿದ್ದಾರೆ. ಇನ್ನು ಹಣ ಎಣಿಕೆ ಮುಗಿದಿರುವ ಹಿನ್ನೆಲೆಯಲ್ಲಿ ಇದೀಗ ಚಿನ್ನಭರಣ ತೂಕದ ಕಾರ್ಯ ಆರಂಭವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್