AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸದ ಅವಧಿ ವಿಸ್ತರಣೆಗೆ ವಿರೋಧ: ಬೆಂಗಳೂರಿನಲ್ಲಿ ಶನಿವಾರ ಐಟಿಬಿಟಿ ನೌಕರರಿಂದ ಬೃಹತ್ ಪ್ರತಿಭಟನೆ

ರಾಜ್ಯದಲ್ಲಿ ಐಟಿ-ಬಿಟಿ ನೌಕರರಿಗೆ ಒಂಬತ್ತು ಗಂಟೆಗಳ ಡ್ಯೂಟಿ ಮಾಡಬೇಕು ಎಂಬ ನಿಯಮ ಇದೆ. ಆದರೆ ಕಂಪನಿಗಳು ಮಾತ್ರ 14 ಗಂಟೆಗಳ ಕಾಲ ಕೆಲಸ ಮಾಡಬೇಕೆಂದು ಸರ್ಕಾರದ ಕದ ತಟ್ಟಿವೆ. ಇದನ್ನು ವಿರೋಧಿಸಿ ಈಗಾಗಲೇ ಟೆಕ್ಕಿಗಳು ಸೋಶಿಯಲ್ ಮೀಡಿಯಾ ಮೂಲಕ ಹೋರಾಟ ಮಾಡಿದ್ದರು. ಶನಿವಾರ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.

ಕೆಲಸದ ಅವಧಿ ವಿಸ್ತರಣೆಗೆ ವಿರೋಧ: ಬೆಂಗಳೂರಿನಲ್ಲಿ ಶನಿವಾರ ಐಟಿಬಿಟಿ ನೌಕರರಿಂದ ಬೃಹತ್ ಪ್ರತಿಭಟನೆ
ಬೆಂಗಳೂರಿನಲ್ಲಿ ಶನಿವಾರ ಐಟಿಬಿಟಿ ನೌಕರರಿಂದ ಬೃಹತ್ ಪ್ರತಿಭಟನೆ
ಕಿರಣ್​ ಸೂರ್ಯ
| Edited By: |

Updated on: Jul 30, 2024 | 7:07 AM

Share

ಬೆಂಗಳೂರು, ಜುಲೈ 30: ರಾಜ್ಯದ ಐಟಿ ಬಿಟಿ ನೌಕರರಿಗೆ ಸದ್ಯ ಬಹುತೇಕ ಕಂಪನಿಗಳಲ್ಲಿ ಪ್ರತಿದಿನ 9 ಗಂಟೆಗಳ ಕಾಲ ಕೆಲಸ ಮಾಡಬೇಕೆಂಬ ನಿಯಮ ಇದೆ. ಆದರೆ ಆ ಒಂಬತ್ತು ಗಂಟೆ ಸಮಯವನ್ನು 14 ಗಂಟೆಗೆ ವಿಸ್ತರಣೆ ಮಾಡುವಂತೆ ಐಟಿಬಿಟಿ ಕಂಪನಿಗಳು ಕಾರ್ಮಿಕ ಇಲಾಖೆಗೆ ಮನವಿ ಮಾಡಿವೆ. ಆ ಹಿನ್ನೆಲೆಯಲ್ಲಿ ಕಾರ್ಮಿಕರು, ಸಚಿವರು ಈಗಾಗಲೇ ಸಭೆ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಈಗಾಗಲೇ ಐಟಿಬಿಟಿ ನೌಕರರು ಸಿಎಂ ಸಿದ್ದರಾಮಯ್ಯ ಮತ್ತು ‌ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಸಾಮೂಹಿಕವಾಗಿ ಮೇಲ್ ಮಾಡಿ ಎಕ್ಸ್ ಮತ್ತು ಫೇಸ್ ಬುಕ್ ನಲ್ಲಿ ‘I oppose the Increase in Working Hours’ ಅಂತ ಪೋಸ್ಟ್ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಮುಂದುವರಿದ ‌ಭಾಗವಾಗಿ ಈ ಶನಿವಾರ ಮಧ್ಯಾಹ್ನ ಮೂರು ಗಂಟೆಗೆ ಫ್ರೀಡಂ ಪಾರ್ಕ್​​ನಲ್ಲಿ ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ.

ಶನಿವಾರ ಪ್ರತಿಭಟನೆ ಮಾಡುವ ವಿಚಾರವಾಗಿ ಕರ್ನಾಟಕ ಐಟಿ ಅಂಡ್ ಐಟಿಎಸ್ ಯೂನಿಯನ್ ಜನರಲ್ ಸೆಕ್ರೆಟರಿ ಸುಹಾಸ್ ಅಡಿಗ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಐಟಿಬಿಟಿ ಕಂಪನಿಗಳ ನೌಕರರನ್ನು ಸಂಪರ್ಕ ಮಾಡಿ ಶನಿವಾರದ ಪ್ರತಿಭಟನೆಗೆ ಸಾಥ್ ನೀಡಬೇಕು ಮತ್ತು ಪ್ರತಿಯೊಬ್ಬರೂ ಪ್ರತಿಭಟನೆಯಲ್ಲಿ ಭಾಗಿಯಾಗಬೇಕೆಂದು ಮನವಿ ಮಾಡಲಾಗುತ್ತಿದೆ. ಈ ಬಗ್ಗೆ ಬಿತ್ತಿಪತ್ರಗಳನ್ನು ನೀಡುವ ಮೂಲಕ ದೊಡ್ಡ ಮಟ್ಟದಲ್ಲಿ ಅಭಿಯಾನ ಆರಂಭಿಸಲಾಗಿದೆ. ಈ ಬಗ್ಗೆ ಮಾತಾನಾಡಿದ ಐಟಿ ಉದ್ಯೋಗಿ ಐಶ್ವರ್ಯ, 14 ಗಂಟೆ ಕೆಲದ ಪ್ರಸ್ತಾವವನ್ನು ನಾವು ಒಪ್ಪುವುದಿಲ್ಲ. ಇದರಿಂದ ತುಂಬಾ ಸಮಸ್ಯೆ ಆಗುತ್ತದೆ ಎಂದು ತಮ್ಮ ವಿರೋಧವನ್ನು ವ್ಯಕ್ತಪಡಿಸಿದರು.

ಇದನ್ನೂ ಓದಿ: 14 ಗಂಟೆಗಳ ಕೆಲಸದ ಅವಧಿ ವಿಸ್ತರಣೆ ಪ್ರಸ್ತಾಪ: ಸರ್ಕಾರದ ವಿರುದ್ಧ ಐಟಿ ವೃತ್ತಿಪರರ ಮೇಲ್ ಸಮರ

ಒಟ್ಟಿನಲ್ಲಿ ಐಟಿಬಿಟಿ ನೌಕರರ ಕೆಲಸದ ಅವಧಿಯನ್ನು 9 ರಿಂದ 14 ಗಂಟೆಗಳಿಗೆ ವಿಸ್ತರಣೆ ಮಾಡುವುದನ್ನು ವಿರೋಧಿಸಿ ಟೆಕ್ಕಿಗಳು ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ದೊಡ್ಡಮಟ್ಟದಲ್ಲಿ ಪ್ರತಿಭಟನೆ ಮಾಡುವ ಮೂಲಕ ತಮ್ಮ ವಿರೋಧವನ್ನು ವ್ಯಕ್ತಪಡಿಸಲಿದ್ದಾರೆ. ಆದರೆ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!