AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧ: ದುರದೃಷ್ಟಕರ ಎಂದ ಗೃಹ ಸಚಿವ, ದೌರ್ಜನ್ಯ ಎಂದ ಸಿದ್ದರಾಮಯ್ಯ

ಕರ್ನಾಟಕದ ವಿವಿಧೆಡೆ ನಡೆಯುತ್ತಿರುವ ಜಾತ್ರೆಗಳಲ್ಲಿ ಹಿಂದೂಯೇತರ ಸಮುದಾಯಗಳಿಗೆ ಸೇರಿದವರು ವ್ಯಾಪಾರ, ವ್ಯವಹಾರ ನಡೆಸುವಂತಿಲ್ಲ ಎಂದು ನಿರ್ಬಂಧಿಸಿರುವುದು ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಗಿದೆ

ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧ: ದುರದೃಷ್ಟಕರ ಎಂದ ಗೃಹ ಸಚಿವ, ದೌರ್ಜನ್ಯ ಎಂದ ಸಿದ್ದರಾಮಯ್ಯ
ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on:Mar 23, 2022 | 11:06 AM

Share

ಬೆಂಗಳೂರು: ಕರ್ನಾಟಕದ ವಿವಿಧೆಡೆ ನಡೆಯುತ್ತಿರುವ ಜಾತ್ರೆಗಳಲ್ಲಿ ಹಿಂದೂಯೇತರ ಸಮುದಾಯಗಳಿಗೆ ಸೇರಿದವರು ವ್ಯಾಪಾರ, ವ್ಯವಹಾರ ನಡೆಸುವಂತಿಲ್ಲ ಎಂದು ನಿರ್ಬಂಧಿಸಿರುವುದು ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ‘ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಇಲ್ಲ, ತರಿಸಿಕೊಳ್ಳುತ್ತೇನೆ’ ಎಂದು ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರದಲ್ಲಿ ಕೋರ್ಟ್ ತೀರ್ಪು ವಿರೋಧಿಸಿ ಒಂದು ಕೋಮಿಗೆ ಸೇರಿದವರು ಬಂದ್ ಮಾಡಿ ಪ್ರತಿಕ್ರಿಯಿಸಿದರು. ಅದರ ಮುಂದುವರಿದ ಭಾಗವಾಗಿ ಹೀಗಾಗುತ್ತಿದೆ. ಇದು ದುರದೃಷ್ಟಕರ ಬೆಳವಣಿಗೆ. ಈ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ ಎಂದರು.

ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಬರದಂತೆ ನೋಡಿಕೊಳ್ಳುತ್ತೇವೆ. ಈ ಎಲ್ಲ ಪರಿಸ್ಥಿತಿಗೆ ಕಾಂಗ್ರೆಸ್‌ನವರೇ ಕಾರಣ. ಅವರೇ ಹೊಣೆ ಹೊರಬೇಕು. ಅಧಿಕಾರಕ್ಕಾಗಿ ಒಂದು ಕೋಮಿನ ಓಲೈಕೆ ಮಾಡಿ ಈ ದೇಶದಲ್ಲಿ ಎಲ್ಲಾ ಮನಸ್ಸನ್ನು ಒಡೆದಿದ್ದು ಕಾಂಗ್ರೆಸ್ಸಿಗರು ಎಂದು ಖಂಡಿಸಿದರು.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಂತೆ ಎಲ್ಲ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದೇನೆ. ವಿವಾದ ಕುರಿತ ಸಂಪೂರ್ಣ ಮಾಹಿತಿಯನ್ನು ತರಿಸಿಕೊಳ್ಳುತ್ತೇನೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕೋಮುಸೌಹಾರ್ದಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಬೇಕು. ಶಾಂತಿ ಸುವ್ಯವಸ್ಥೆಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದರು. ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್​ನವರು ಸತ್ಯ ಹೇಳುವುದನ್ನು ಮರೆತರು. ಕಾಂಗ್ರೆಸ್​ನವರ ಪ್ರತಿಕ್ರಿಯೆಗೆ ಯಾವ ಬೆಲೆಯೂ ಇಲ್ಲ. ಜನಸಮುದಾಯವು ಕೇಳುವುದಿಲ್ಲ ಎಂದು ವಿವರಿಸಿದರು.

ವ್ಯಾಪಾರಕ್ಕೆ ಅವಕಾಶ ಕೊಡಬೇಕು: ಡಿಕೆಶಿ ಕಲಬುರ್ಗಿ: ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇದು ಸರಿಯಲ್ಲ. ಎಲ್ಲಕಡೆ ಎಲ್ಲರಿಗೂ ವ್ಯಾಪಾರಕ್ಕೆ ಅವಕಾಶ ನೀಡಬೇಕು. ಚರ್ಚ್, ಮಸೀದಿ ಮುಂದೆ ಹಿಂದುಗಳಿಗೆ ಅವಕಾಶ ನೀಡದೇ ಹೋದ್ರೆ ಏನಾಗುತ್ತೆ? ಅನೇಕರು ಅನೇಕ ರೀತಿಯ ಕೆಲಸ ಮಾಡುತ್ತಿದ್ದಾರೆ. ಯಾರೂ ತೊಂದರೆ ಕೊಡುವ ಕೆಲಸವನ್ನು ಮಾಡಬಾರದು ಎಂದು ಸಲಹೆ ಮಾಡಿದರು.

ಸಹಬಾಳ್ವೆಗೆ ಒತ್ತುಕೊಡಿ: ಖಾದರ್ ಮಂಗಳೂರು: ಭಾರತ ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶ. ಇಲ್ಲಿ ಎಲ್ಲ ಧರ್ಮೀಯರು ಸಹಬಾಳ್ವೆಯಿಂದ ಬದುಕುತ್ತಿದ್ದಾರೆ. ಆದರೆ ಕೆಲವರು ಧರ್ಮಗಳ ನಡುವೆ ಕಂದಕವನ್ನು ಸೃಷ್ಟಿಸುತ್ತಿದ್ದಾರೆ ಎಂದು ವಿಧಾನಸಭೆಯಲ್ಲಿ ವಿಪಕ್ಷದ ಉಪನಾಯಕರಾಗಿರುವ ಯು.ಟಿ.ಖಾದರ್ ಹೇಳಿದರು. ಜಾತ್ರೆಗಳಲ್ಲಿ ಮುಸ್ಲಿಂ ಸಮುದಾಯದವರು ವ್ಯಾಪಾರ ನಡೆಸುವುದಕ್ಕೆ ಹಿಂದೂ ಸಂಘಟನೆಗಳು ವಿರೋಧಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು ಕರಾವಳಿ ಭಾಗದ ಮುಲ್ಕಿ ಸೇರಿದಂತೆ ಹಲವೆಡೆ ಕೆಲವರು ಸ್ವಹಿತಾಸಕ್ತಿಗಾಗಿ ಭಿತ್ತಿಪತ್ರಗಳನ್ನು ಹಾಕುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ, ದ್ವೇಷ ಸೃಷ್ಟಿಸಲು ಹೊರಟಿದ್ದಾರೆ. ಇದೊಂದು ಅಸಹ್ಯದ ಕೃತ್ಯ. ಇದಕ್ಕೆ ಹಿಂದೂ ಸಹೋದರರು ಬೆಂಬಲ ಕೊಡಬಾರದು. ಬಿಜೆಪಿ ಸರ್ಕಾರ ಈ ವಿಚಾರವಾಗಿ ಮೌನವಾಗಿದೆ. ಒಳಗೊಳಗೆ ಖುಷಿ ಪಡುತ್ತಿದೆಯಾ? ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರ‌ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪ ಮಾಡಿದರು.

ಅವಕಾಶ ನಿರಾಕರಣೆ ತಪ್ಪು: ಸಿದ್ದರಾಮಯ್ಯ ಬೆಂಗಳೂರು: ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಈ ರೀತಿ ಅವಕಾಶ ನಿರಾಕರಿಸುವುದು ತಪ್ಪು ಎಂದಿದ್ದಾರೆ. ಅಂಗಡಿ ಟೆಂಡರ್ ನಿರಾಕರಿಸುವುದು, ಅವಕಾಶ ನಿರಾಕರಣೆ ಮಾಡುವುದು ದೌರ್ಜನ್ಯ ಎನಿಸಿಕೊಳ್ಳುತ್ತದೆ. ಇದು ಮೂಲಭೂತ ಹಕ್ಕನ್ನು ಹತ್ತಿಕ್ಕುವ ಕೆಲಸ. ಇದು ಸಂಪೂರ್ಣ ಕಾನೂನು ಬಾಹಿರ ಎಂದಿದ್ದಾರೆ. ನಮ್ಮ ದೇಶದಲ್ಲಿ ಮುಕ್ತ ವ್ಯಾಪಾರಕ್ಕೆ ಅವಕಾಶವಿದೆ. ಮುಕ್ತ ವ್ಯಾಪಾರಕ್ಕೆ ನಿರ್ಬಂಧಿಸುವುದು ಕಾನೂನುಬಾಹಿರವಾಗುತ್ತದೆ ಎಂದರು.

ಇದನ್ನೂ ಓದಿ: ಕನಕಾಚಲಪತಿ ಗರುಡೋತ್ಸವ, ಶಿವಮೊಗ್ಗ ಕೋಟೆ ಮಾರಿಕಾಂಬ, ಮಂಗಳೂರು ಬಪ್ಪನಾಡು ಜಾತ್ರೆ ಆರಂಭ

ಇದನ್ನೂ ಓದಿ: ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮರ ವ್ಯಾಪಾರಕ್ಕಿಲ್ಲ ಜಾಗ, ಭಜರಂಗ ದಳದಿಂದ ಕ್ಯಾಂಪೇನ್

Published On - 10:53 am, Wed, 23 March 22

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?