AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಇ ಮೆದುಳು ಜ್ವರ ನಿಯಂತ್ರಣಕ್ಕೆ ಬಂತು ಲಸಿಕೆ: ಶಾಲೆಗಳಲ್ಲಿ ಲಸಿಕಾಕರಣದ ಬಗ್ಗೆ ಸಚಿವ ಸುಧಾಕರ್ ಮಾಹಿತಿ

ಜೆಇ (ಜೆನವ್ಯಾಕ್ ಜೆಇ) ಮೆದುಳು ಜ್ವರ ನಿಯಂತ್ರಣಕ್ಕೆ ನಾಳೆಯಿಂದ (ಡಿ. 05) 48 ಲಕ್ಷ ಮಕ್ಕಳಿಗೆ ಕೇಂದ್ರ ಸರ್ಕಾರದಿಂದ ಉಚಿತವಾಗಿ ಲಸಿಕೆ ನೀಡಲು ತೀರ್ಮಾನಿಸಿದ್ದು, ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.

ಜೆಇ ಮೆದುಳು ಜ್ವರ ನಿಯಂತ್ರಣಕ್ಕೆ ಬಂತು ಲಸಿಕೆ: ಶಾಲೆಗಳಲ್ಲಿ ಲಸಿಕಾಕರಣದ ಬಗ್ಗೆ ಸಚಿವ ಸುಧಾಕರ್ ಮಾಹಿತಿ
ಆರೋಗ್ಯ ಸಚಿವ ಡಾ. ಕೆ. ಸುಧಾಕರ್
TV9 Web
| Edited By: |

Updated on:Dec 04, 2022 | 5:05 PM

Share

ಬೆಂಗಳೂರು: ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆಯನ್ನು ಜೆಇ ಮೆದುಳು ಜ್ವರ (JE Brain fever) ಉಂಟು ಮಾಡುತ್ತದೆ. ಹಾಗಾಗಿ ಈ ಜೆಇ (ಜೆನವ್ಯಾಕ್ ಜೆಇ) ಮೆದುಳು ಜ್ವರ ನಿಯಂತ್ರಣ ಹಿನ್ನೆಲೆ ಡಿ. 05 ರಿಂದ 48 ಲಕ್ಷ ಮಕ್ಕಳಿಗೆ ಕೇಂದ್ರ ಸರ್ಕಾರದಿಂದ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ (DrKSudhakar) ಮಾಹಿತಿ ನೀಡಿದ್ದಾರೆ. ಡಿಸೆಂಬರ್ ಮೊದಲನೇ ವಾರದಲ್ಲಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಲಸಿಕೆ ಹಾಕಿಸಲು ಕ್ರಮಕೈಗೊಳ್ಳಲಾಗಿದೆ. ಮೊದಲ ವಾರದಲ್ಲಿ ಶಾಲೆಗಳಲ್ಲಿ ಲಸಿಕಾಕರಣ, ಬಳಿಕ 10 ಜಿಲ್ಲೆಗಳಲ್ಲಿ 1 ಮತ್ತು 2ನೇ ಡೋಸ್ ಲಸಿಕೆ ಹಾಕಲಾಗುವುದು. 1-15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಪ್ಲೇವಿ ವೈರಸ್ ಎಂಬ ವೈರಾಣುವಿನಿಂದ ಜೆಇ ಮೆದುಳು ಜ್ವರ ಬರುತ್ತದೆ. ಕ್ಯೂಲೆಕ್ಸ್ ಸೊಳ್ಳೆಗಳ ಮೂಲಕ ಈ ಜ್ವರ ಹರಡುತ್ತದೆ.

ಎಲ್ಲಾ ಆರೋಗ್ಯ ಸಂಸ್ಥೆಗಳು, ಅಂಗನವಾಡಿ ಕೇಂದ್ರ ಹಾಗೂ ಇನ್ನಿತರ ಪ್ರದೇಶಗಳಲ್ಲಿ ಎರಡು ವಾರಗಳಲ್ಲಿ ಲಸಿಕಾಕರಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರಪಂಚದಾದ್ಯಂತ 24 ರಾಷ್ಟ್ರಗಳಲ್ಲಿ ಜಪಾನೀಸ್ ಎನ್‍ಸೆಫಲೈಟಿಸ್ (ಮೆದುಳು ಜ್ವರ) ಪಿಡುಗು ಗುರುತಿಸಲ್ಪಟ್ಟಿದೆ. ಭಾರತ ಸೇರಿದಂತೆ ಏಷ್ಯಾದ 11 ರಾಷ್ಟ್ರಗಳು ಪಟ್ಟಿಯಲ್ಲಿವೆ. 1955 ರಲ್ಲಿ ತಮಿಳುನಾಡಿನ ವೆಲ್ಲೂರ್​ನಲ್ಲಿ ಜೆಇ ಮೆದುಳು ಜ್ವರದ ಮೊದಲ ಪ್ರಕರಣ ವರದಿಯಾಗಿತ್ತು.

ಇದನ್ನೂ ಓದಿ: ಮಕ್ಕಳಿಗೆ ಲಸಿಕೆ; ದೇಶದಲ್ಲಿ ಕರ್ನಾಟಕ 3ನೇ ಸ್ಥಾನ; ಡಾ. ಕೆ ಸುಧಾಕರ್ ಮಾಹಿತಿ

ಕರ್ನಾಟಕದಲ್ಲಿ 1978 ರಲ್ಲಿ ಕೋಲಾರ ಜಿಲ್ಲೆಯಲ್ಲಿ ಮೊದಲ ಪ್ರಕರಣ ಪತ್ತೆಯಾಗಿತ್ತು. ರೋಗ ಪತ್ತೆಗೆ ರಾಜ್ಯದಲ್ಲಿ ಸೆಂಟಿನಲ್ ಸರ್ವೆಲೆನ್ಸ್ ಲ್ಯಾಬೊರೇಟರಿ ಸಜ್ಜುಗೊಳಿಸಲಾಗಿದೆ. ನಿಮ್ಹಾನ್ಸ್ -ಸ್ಟೇಟ್ ಅಪೆಕ್ಸ್ ಲ್ಯಾಬೊರೇಟರಿ, ವಿಮ್ಸ್-ಬಳ್ಳಾರಿ, ಕಿಮ್ಸ್-ಹುಬ್ಬಳ್ಳಿ, ಡಿಪಿಎಚ್‍ಎಲ್-ಕೋಲಾರ, ಮಣಿಪಾಲ್ ಸೆಂಟರ್ ಫಾರ್ ವೈರಸ್ ರಿಸರ್ಚ್-ಉಡುಪಿ, ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿ(ಎನ್‍ಐವಿ)-ಬೆಂಗಳೂರು ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಧಾರವಾಡ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳನ್ನು 10 ಜೆಇ ಎಂಡೆಮಿಕ್ ಜಿಲ್ಲೆಗಳು ಎಂದು ಗುರುತಿಸಲಾಗಿದೆ.

ಈ ಜಿಲ್ಲೆಗಳಲ್ಲಿ ಮಕ್ಕಳಿಗೆ 9 ತಿಂಗಳು ತುಂಬಿದ ನಂತರ ಮೊದಲನೇ ಡೋಸ್ ಮತ್ತು 1.5 ವರ್ಷ ವಯಸ್ಸಿನಲ್ಲಿ 2ನೇ ಡೋಸ್ ಲಸಿಕೆ ಹೆಚ್ಚುವರಿಯಾಗಿ ಬಾಗಲಕೋಟೆ, ದಕ್ಷಿಣ ಕನ್ನಡ, ಗದಗ, ಹಾಸನ, ಹಾವೇರಿ, ಕಲಬುರಗಿ, ತುಮಕೂರು, ರಾಮನಗರ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜೆಇ ಹರಡದ ಅವಧಿಯಲ್ಲಿ ಲಸಿಕಾ ಅಭಿಯಾನ ಹಮ್ಮಿಕೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವಾಲಯದ ನಿರ್ದೇಶನದಂತೆ ಸೂಚನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:04 pm, Sun, 4 December 22

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್