AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jain University: ವಿದ್ಯಾರ್ಥಿಗಳಿಂದ ವಿವಾದಾತ್ಮಕ ಸ್ಕಿಟ್ ಪ್ರದರ್ಶನ: ದಲಿತ ಸಮುದಾಯದಿಂದ ಖಂಡನೆ

ಜೈನ್ ವಿಶ್ವವಿದ್ಯಾಲಯದ ಕಾಲೇಜು ಉತ್ಸವದಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದ ಸ್ಕಿಟ್ ವಿವಾದವನ್ನು ಹುಟ್ಟುಹಾಕಿದೆ. ಇದು ದೇಶಾದ್ಯಂತ ಇಡೀ ದಲಿತ ಸಮುದಾಯಕ್ಕೆ ಮಾಡಿದ ಅವಮಾನ ಎಂದು ದಲಿತ ಸಮುದಾಯದವರು ಖಂಡಿಸಿದ್ದಾರೆ.

Jain University: ವಿದ್ಯಾರ್ಥಿಗಳಿಂದ ವಿವಾದಾತ್ಮಕ ಸ್ಕಿಟ್ ಪ್ರದರ್ಶನ: ದಲಿತ ಸಮುದಾಯದಿಂದ ಖಂಡನೆ
ಜೈನ್ ವಿಶ್ವವಿದ್ಯಾಲಯImage Credit source: Siasat
TV9 Web
| Edited By: |

Updated on:Feb 10, 2023 | 6:38 PM

Share

ಬೆಂಗಳೂರು: ಬೆಂಗಳೂರಿನ (Bengaluru) ಪ್ರತಿಷ್ಠಿತ ಜೈನ್ ವಿಶ್ವವಿದ್ಯಾಲಯದ (Jain University) ಕಾಲೇಜು ಉತ್ಸವದಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದ ಸ್ಕಿಟ್ ವಿವಾದವನ್ನು ಹುಟ್ಟುಹಾಕಿದೆ. ವಿದ್ಯಾರ್ಥಿಗಳು ಬಿ.ಆರ್ ಅಂಬೇಡ್ಕರ್ (B.R Ambedkar) ಮತ್ತು ಪರಿಶಿಷ್ಟ ಜಾತಿ ಸೇರಿದಂತೆ ದಲಿತ ಸಮುದಾಯವನ್ನು ಒಳಗೊಂಡ ವಿವಾದಾತ್ಮಕ ಸ್ಕಿಟ್ ಅನ್ನು ಪ್ರದರ್ಶಿಸಿದರು. ಈ ಸ್ಕಿಟ್​ನಲ್ಲಿ ಬಿ.ಆರ್ ಅಂಬೇಡ್ಕರ್​ರನ್ನ ‘ಬಿಯರ್ ಅಂಬೇಡ್ಕರ್’ ಎಂದು ಅವಹೇಳನ ಮಾಡಲಾಗಿದೆ. ಅಲ್ಲದೇ ದಲಿತರು ಮತ್ತು ಪರಿಶಿಷ್ಟ ಜಾತಿಯ ಬಗ್ಗೆ ವಿವಿಧ ಹಾಸ್ಯಗಳನ್ನು ವಿದ್ಯಾರ್ಥಿಗಳು ಮಾಡಿದ್ದಾರೆ. ಕಾಲೇಜಿನ ಈ ಸ್ಕಿಟ್‌ನ ವಿಡಿಯೋ ಈಗಾಗಲೇ ಬಹಳಷ್ಟು ವೈರಲ್ ಆಗಿದೆ.

ಕಾಲೇಜು ಫೆಸ್ಟ್‌ನಲ್ಲಿ ಕಿಕ್ಕಿರಿದ ಪ್ರೇಕ್ಷಕರ ಮುಂದೆ ವಿವಾದಾತ್ಮಕ ಸ್ಕಿಟ್ ಪ್ರದರ್ಶಿಸಲಾಯಿತು. ಮ್ಯಾಡ್-ಆಡ್ (Mad Ad) ಸ್ಪರ್ಧೆಯಲ್ಲಿ ಪ್ರದರ್ಶಿಸಲಾದ ಈ ವಿವಾದಾತ್ಮಕ ಸ್ಕಿಟ್​ ಅನ್ನು, ಇದು ದೇಶಾದ್ಯಂತ ಇಡೀ ದಲಿತ ಸಮುದಾಯಕ್ಕೆ ಮಾಡಿದ ಅವಮಾನ ಎಂದು ದಲಿತ ಸಮುದಾಯದವರು ಖಂಡಿಸಿದ್ದಾರೆ. ಮುಂಬೈನ ದಲಿತ ಕಾರ್ಯಕರ್ತನೊಬ್ಬ ಈ ಸ್ಕಿಟ್ ಪ್ರದರ್ಶನದ ವಿರುದ್ಧ ಈಗಾಗಲೇ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 11 ಫ್ಲೈ ಓವರ್​ಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ: ಬೊಮ್ಮಾಯಿ ಮಾಹಿತಿ

ಕಾಲೇಜು ಫೆಸ್ಟ್ ನಲ್ಲಿ ವಿದ್ಯಾರ್ಥಿಗಳ ಜೊತೆ ಉಪನ್ಯಾಸಕರೂ ಪಾಲ್ಗೊಂಡಿದ್ದು, ಇದೀಗ ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮಾಡಿದ ವಿವಾದಾತ್ಮಕ ಸ್ಕಿಟ್ ಫುಲ್ ವೈರಲ್ ಆಗಿದೆ. ಇಷ್ಟೆಲ್ಲಾ ಆದರೂ ಕಾಲೇಜು ಆಡಳಿತ ಮಾತ್ರ ಇನ್ನೂ ಯಾವ ಪ್ರತಿಕ್ರಿಯೆಯನ್ನು ನೀಡಿಲ್ಲ.

Published On - 5:47 pm, Fri, 10 February 23

Follow Us
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!