AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jain University: ವಿದ್ಯಾರ್ಥಿಗಳಿಂದ ವಿವಾದಾತ್ಮಕ ಸ್ಕಿಟ್ ಪ್ರದರ್ಶನ: ದಲಿತ ಸಮುದಾಯದಿಂದ ಖಂಡನೆ

ಜೈನ್ ವಿಶ್ವವಿದ್ಯಾಲಯದ ಕಾಲೇಜು ಉತ್ಸವದಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದ ಸ್ಕಿಟ್ ವಿವಾದವನ್ನು ಹುಟ್ಟುಹಾಕಿದೆ. ಇದು ದೇಶಾದ್ಯಂತ ಇಡೀ ದಲಿತ ಸಮುದಾಯಕ್ಕೆ ಮಾಡಿದ ಅವಮಾನ ಎಂದು ದಲಿತ ಸಮುದಾಯದವರು ಖಂಡಿಸಿದ್ದಾರೆ.

Jain University: ವಿದ್ಯಾರ್ಥಿಗಳಿಂದ ವಿವಾದಾತ್ಮಕ ಸ್ಕಿಟ್ ಪ್ರದರ್ಶನ: ದಲಿತ ಸಮುದಾಯದಿಂದ ಖಂಡನೆ
ಜೈನ್ ವಿಶ್ವವಿದ್ಯಾಲಯImage Credit source: Siasat
TV9 Web
| Updated By: Digi Tech Desk|

Updated on:Feb 10, 2023 | 6:38 PM

Share

ಬೆಂಗಳೂರು: ಬೆಂಗಳೂರಿನ (Bengaluru) ಪ್ರತಿಷ್ಠಿತ ಜೈನ್ ವಿಶ್ವವಿದ್ಯಾಲಯದ (Jain University) ಕಾಲೇಜು ಉತ್ಸವದಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದ ಸ್ಕಿಟ್ ವಿವಾದವನ್ನು ಹುಟ್ಟುಹಾಕಿದೆ. ವಿದ್ಯಾರ್ಥಿಗಳು ಬಿ.ಆರ್ ಅಂಬೇಡ್ಕರ್ (B.R Ambedkar) ಮತ್ತು ಪರಿಶಿಷ್ಟ ಜಾತಿ ಸೇರಿದಂತೆ ದಲಿತ ಸಮುದಾಯವನ್ನು ಒಳಗೊಂಡ ವಿವಾದಾತ್ಮಕ ಸ್ಕಿಟ್ ಅನ್ನು ಪ್ರದರ್ಶಿಸಿದರು. ಈ ಸ್ಕಿಟ್​ನಲ್ಲಿ ಬಿ.ಆರ್ ಅಂಬೇಡ್ಕರ್​ರನ್ನ ‘ಬಿಯರ್ ಅಂಬೇಡ್ಕರ್’ ಎಂದು ಅವಹೇಳನ ಮಾಡಲಾಗಿದೆ. ಅಲ್ಲದೇ ದಲಿತರು ಮತ್ತು ಪರಿಶಿಷ್ಟ ಜಾತಿಯ ಬಗ್ಗೆ ವಿವಿಧ ಹಾಸ್ಯಗಳನ್ನು ವಿದ್ಯಾರ್ಥಿಗಳು ಮಾಡಿದ್ದಾರೆ. ಕಾಲೇಜಿನ ಈ ಸ್ಕಿಟ್‌ನ ವಿಡಿಯೋ ಈಗಾಗಲೇ ಬಹಳಷ್ಟು ವೈರಲ್ ಆಗಿದೆ.

ಕಾಲೇಜು ಫೆಸ್ಟ್‌ನಲ್ಲಿ ಕಿಕ್ಕಿರಿದ ಪ್ರೇಕ್ಷಕರ ಮುಂದೆ ವಿವಾದಾತ್ಮಕ ಸ್ಕಿಟ್ ಪ್ರದರ್ಶಿಸಲಾಯಿತು. ಮ್ಯಾಡ್-ಆಡ್ (Mad Ad) ಸ್ಪರ್ಧೆಯಲ್ಲಿ ಪ್ರದರ್ಶಿಸಲಾದ ಈ ವಿವಾದಾತ್ಮಕ ಸ್ಕಿಟ್​ ಅನ್ನು, ಇದು ದೇಶಾದ್ಯಂತ ಇಡೀ ದಲಿತ ಸಮುದಾಯಕ್ಕೆ ಮಾಡಿದ ಅವಮಾನ ಎಂದು ದಲಿತ ಸಮುದಾಯದವರು ಖಂಡಿಸಿದ್ದಾರೆ. ಮುಂಬೈನ ದಲಿತ ಕಾರ್ಯಕರ್ತನೊಬ್ಬ ಈ ಸ್ಕಿಟ್ ಪ್ರದರ್ಶನದ ವಿರುದ್ಧ ಈಗಾಗಲೇ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 11 ಫ್ಲೈ ಓವರ್​ಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ: ಬೊಮ್ಮಾಯಿ ಮಾಹಿತಿ

ಕಾಲೇಜು ಫೆಸ್ಟ್ ನಲ್ಲಿ ವಿದ್ಯಾರ್ಥಿಗಳ ಜೊತೆ ಉಪನ್ಯಾಸಕರೂ ಪಾಲ್ಗೊಂಡಿದ್ದು, ಇದೀಗ ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮಾಡಿದ ವಿವಾದಾತ್ಮಕ ಸ್ಕಿಟ್ ಫುಲ್ ವೈರಲ್ ಆಗಿದೆ. ಇಷ್ಟೆಲ್ಲಾ ಆದರೂ ಕಾಲೇಜು ಆಡಳಿತ ಮಾತ್ರ ಇನ್ನೂ ಯಾವ ಪ್ರತಿಕ್ರಿಯೆಯನ್ನು ನೀಡಿಲ್ಲ.

Published On - 5:47 pm, Fri, 10 February 23

ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ