AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jain University: ವಿದ್ಯಾರ್ಥಿಗಳಿಂದ ವಿವಾದಾತ್ಮಕ ಸ್ಕಿಟ್ ಪ್ರದರ್ಶನ: ದಲಿತ ಸಮುದಾಯದಿಂದ ಖಂಡನೆ

ಜೈನ್ ವಿಶ್ವವಿದ್ಯಾಲಯದ ಕಾಲೇಜು ಉತ್ಸವದಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದ ಸ್ಕಿಟ್ ವಿವಾದವನ್ನು ಹುಟ್ಟುಹಾಕಿದೆ. ಇದು ದೇಶಾದ್ಯಂತ ಇಡೀ ದಲಿತ ಸಮುದಾಯಕ್ಕೆ ಮಾಡಿದ ಅವಮಾನ ಎಂದು ದಲಿತ ಸಮುದಾಯದವರು ಖಂಡಿಸಿದ್ದಾರೆ.

Jain University: ವಿದ್ಯಾರ್ಥಿಗಳಿಂದ ವಿವಾದಾತ್ಮಕ ಸ್ಕಿಟ್ ಪ್ರದರ್ಶನ: ದಲಿತ ಸಮುದಾಯದಿಂದ ಖಂಡನೆ
ಜೈನ್ ವಿಶ್ವವಿದ್ಯಾಲಯImage Credit source: Siasat
TV9 Web
| Edited By: |

Updated on:Feb 10, 2023 | 6:38 PM

Share

ಬೆಂಗಳೂರು: ಬೆಂಗಳೂರಿನ (Bengaluru) ಪ್ರತಿಷ್ಠಿತ ಜೈನ್ ವಿಶ್ವವಿದ್ಯಾಲಯದ (Jain University) ಕಾಲೇಜು ಉತ್ಸವದಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದ ಸ್ಕಿಟ್ ವಿವಾದವನ್ನು ಹುಟ್ಟುಹಾಕಿದೆ. ವಿದ್ಯಾರ್ಥಿಗಳು ಬಿ.ಆರ್ ಅಂಬೇಡ್ಕರ್ (B.R Ambedkar) ಮತ್ತು ಪರಿಶಿಷ್ಟ ಜಾತಿ ಸೇರಿದಂತೆ ದಲಿತ ಸಮುದಾಯವನ್ನು ಒಳಗೊಂಡ ವಿವಾದಾತ್ಮಕ ಸ್ಕಿಟ್ ಅನ್ನು ಪ್ರದರ್ಶಿಸಿದರು. ಈ ಸ್ಕಿಟ್​ನಲ್ಲಿ ಬಿ.ಆರ್ ಅಂಬೇಡ್ಕರ್​ರನ್ನ ‘ಬಿಯರ್ ಅಂಬೇಡ್ಕರ್’ ಎಂದು ಅವಹೇಳನ ಮಾಡಲಾಗಿದೆ. ಅಲ್ಲದೇ ದಲಿತರು ಮತ್ತು ಪರಿಶಿಷ್ಟ ಜಾತಿಯ ಬಗ್ಗೆ ವಿವಿಧ ಹಾಸ್ಯಗಳನ್ನು ವಿದ್ಯಾರ್ಥಿಗಳು ಮಾಡಿದ್ದಾರೆ. ಕಾಲೇಜಿನ ಈ ಸ್ಕಿಟ್‌ನ ವಿಡಿಯೋ ಈಗಾಗಲೇ ಬಹಳಷ್ಟು ವೈರಲ್ ಆಗಿದೆ.

ಕಾಲೇಜು ಫೆಸ್ಟ್‌ನಲ್ಲಿ ಕಿಕ್ಕಿರಿದ ಪ್ರೇಕ್ಷಕರ ಮುಂದೆ ವಿವಾದಾತ್ಮಕ ಸ್ಕಿಟ್ ಪ್ರದರ್ಶಿಸಲಾಯಿತು. ಮ್ಯಾಡ್-ಆಡ್ (Mad Ad) ಸ್ಪರ್ಧೆಯಲ್ಲಿ ಪ್ರದರ್ಶಿಸಲಾದ ಈ ವಿವಾದಾತ್ಮಕ ಸ್ಕಿಟ್​ ಅನ್ನು, ಇದು ದೇಶಾದ್ಯಂತ ಇಡೀ ದಲಿತ ಸಮುದಾಯಕ್ಕೆ ಮಾಡಿದ ಅವಮಾನ ಎಂದು ದಲಿತ ಸಮುದಾಯದವರು ಖಂಡಿಸಿದ್ದಾರೆ. ಮುಂಬೈನ ದಲಿತ ಕಾರ್ಯಕರ್ತನೊಬ್ಬ ಈ ಸ್ಕಿಟ್ ಪ್ರದರ್ಶನದ ವಿರುದ್ಧ ಈಗಾಗಲೇ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 11 ಫ್ಲೈ ಓವರ್​ಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ: ಬೊಮ್ಮಾಯಿ ಮಾಹಿತಿ

ಕಾಲೇಜು ಫೆಸ್ಟ್ ನಲ್ಲಿ ವಿದ್ಯಾರ್ಥಿಗಳ ಜೊತೆ ಉಪನ್ಯಾಸಕರೂ ಪಾಲ್ಗೊಂಡಿದ್ದು, ಇದೀಗ ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮಾಡಿದ ವಿವಾದಾತ್ಮಕ ಸ್ಕಿಟ್ ಫುಲ್ ವೈರಲ್ ಆಗಿದೆ. ಇಷ್ಟೆಲ್ಲಾ ಆದರೂ ಕಾಲೇಜು ಆಡಳಿತ ಮಾತ್ರ ಇನ್ನೂ ಯಾವ ಪ್ರತಿಕ್ರಿಯೆಯನ್ನು ನೀಡಿಲ್ಲ.

Published On - 5:47 pm, Fri, 10 February 23

ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!