AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಸಲಾತಿ ಒಪ್ಪುವಂತೆ ಶ್ರೀಗಳಿಗೆ ಸಿಎಂ ಒತ್ತಡ: ಡಿಕೆಶಿ ಹೇಳಿಕೆಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ

ಡಿಕೆ ಶಿವಕುಮಾರ್ ಅವರಿಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂತ ಕಾಣುತ್ತೆ. ಡಿಕೆ ಶಿವಕುಮಾರ್​ ಅವರು ಕೂಡ ನಮ್ಮ ಹೋರಾಟದ ವೇಳೆ ಪಾದಯಾತ್ರೆಗೆ ಬಂದು ಬೆಂಬಲ ಕೊಟ್ಟಿದ್ದರು. ದೂರವಾಣಿ ಮೂಲಕವೂ ಹೋರಾಟದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದರು. ಕೇಂದ್ರ ಸರ್ಕಾರ ಹಾಗೂ ಸಿಎಂ ಬೊಮ್ಮಾಯಿ ಅವರು ಯಾವುದೇ ಒತ್ತಡ ಹಾಕಿಲ್ಲ ಎಂದು ಸ್ವಾಮೀಜಿ ಹೇಳಿದ್ದಾರೆ.

ಮೀಸಲಾತಿ ಒಪ್ಪುವಂತೆ ಶ್ರೀಗಳಿಗೆ ಸಿಎಂ ಒತ್ತಡ: ಡಿಕೆಶಿ ಹೇಳಿಕೆಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ
ಬಸವ ಜಯಮೃತ್ಯಂಜಯ ಸ್ವಾಮೀಜಿ
ವಿವೇಕ ಬಿರಾದಾರ
|

Updated on: Mar 26, 2023 | 4:43 PM

Share

ಬೆಂಗಳೂರು: ಪಂಚಮಸಾಲಿ ಲಿಂಗಾಯತ (Panchamsali Lingayat)​ ಸಮಾಜಕ್ಕೆ ನೀಡಿರುವ 2ಡಿ ಮೀಸಲಾತಿಯನ್ನು (2d Reservation) ಒಪ್ಪುವಂತೆ ಸ್ವಾಮೀಜಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಒತ್ತಡ ಹಾಕಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ (DK Shivakumar) ಹೇಳಿಕೆಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂತ ಕಾಣುತ್ತೆ. ಡಿಕೆ ಶಿವಕುಮಾರ್​ ಅವರು ಕೂಡ ನಮ್ಮ ಹೋರಾಟದ ವೇಳೆ, ಪಾದಯಾತ್ರೆಗೆ ಬಂದು ಬೆಂಬಲ ಕೊಟ್ಟಿದ್ದರು. ದೂರವಾಣಿ ಮೂಲಕವೂ ಹೋರಾಟದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದರು. ಕೇಂದ್ರ ಸರ್ಕಾರ ಹಾಗೂ ಸಿಎಂ ಬೊಮ್ಮಾಯಿ ಅವರು ಯಾವುದೇ ಒತ್ತಡ ಹಾಕಿಲ್ಲ ಎಂದು ಸ್ವಾಮೀಜಿ ಹೇಳಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಚುನಾವಣೆ ನೀತಿ ಸಂಹಿತೆ ಬಂದರೇ ಕಷ್ಟ ಆಗಬಹುದು. ನಮ್ಮ ಹೋರಾಟದಿಂದ ಸಮುದಾಯದ ಜನ ನಿರಾಶೆ ಆಗಬಾರದು. ಈ ಕಾರಣಕ್ಕಾಗಿ ನಾವು 2ಡಿ ಮೀಸಲಾತಿಯನ್ನು ಒಪ್ಪಿಕೊಂಡಿದ್ದೇವೆ. ಹೊಟ್ಟೆ ತುಂಬಾ ಊಟ ಕೊಡಿ ಅಂತ ಸರ್ಕಾರವನ್ನ ಕೇಳಿದ್ವಿ, ಆದರೆ ಸರ್ಕಾರದಿಂದ ಅದು ಸಾಧ್ಯವಾಗಲಿಲ್ಲ, ಹಸಿವು ನೀಗಿಸುವ ಪ್ರಯತ್ನ ಮಾಡಿದ್ದಾರೆ ಎಂದರು.

ಇದನ್ನೂ ಓದಿ: ಶ್ರೀಗಳಿಗೆ 25 ಬಾರಿ ಕರೆ​ ಮಾಡಿ ಒಪ್ಪಿಕೊಳ್ಳಿ ಎಂದು ಒತ್ತಡ ಹಾಕಿದ್ದಾರೆ: ಡಿಕೆ ಶಿವಕುಮಾರ್ ಸ್ಫೋಟಕ ಆರೋಪ

ಈ ಹೋರಾಟದಿಂದ ನಾವು ಒಂದು ಮೆಟ್ಟಿಲನ್ನು ಹತ್ತಿದ್ದೇವೆ. ಎರಡೂವರೆ ವರ್ಷದ ಹೋರಾಟದ ಫಲವಾಗಿ ಮೊದಲ ಹಂತದ ಜಯ ಸಿಕ್ಕಿದೆ. ನಮ್ಮ ಹೋರಾಟಕ್ಕೆ ಮಣಿದು ಶೇ.7 ರಷ್ಟು ಮೀಸಲಾತಿ ಸರ್ಕಾರ ನೀಡಿದೆ. ನಾವು ಯಾವುದೇ ಒತ್ತಡಕ್ಕೆ ಒಳಗಾಗಿಲ್ಲ. ಸ್ವಲ್ಪ ಮಟ್ಟಿಗಾದರೂ ಮೀಸಲಾತಿ ಪಡೆದುಕೊಂಡಿರೋದು ಖುಷಿ ಕೊಟ್ಟಿದೆ. ನಿರ್ಮಲಾನಂದನಾಥ ಸ್ವಾಮೀಜಿ, ನಾವು ಯಾವುದೇ ಒತ್ತಡಕ್ಕೆ ಒಳಗಾಗಿಲ್ಲ. ಹೋರಾಟಕ್ಕೆ ಜಯ ಸಿಕ್ಕ ಬಳಿಕ ತಾತ್ಕಾಲಿಕವಾಗಿ ಹೋರಾಟ ನಿಲ್ಲಿಸಿದ್ದೇವೆ, ಚುನಾವಣೆ ಬಳಿಕ ಯಾವ ರೀತಿ ಹೋರಾಟ ಮಾಡಬೇಕು ಎಂಬುದರ ಕುರಿತು ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

ಜೇನುಗೂಡಿಗೆ ಕೈಹಾಕಿ ಕಡಿಸಿಕೊಂಡರೂ ನಾನು ಮೀಸಲಾತಿ ಕೊಟ್ಟಿದ್ದೇನೆ: ಸಿಎಂ ಬೊಮ್ಮಾಯಿ

ಜೇನುಗೂಡಿಗೆ ಕೈಹಾಕಿ ಕಡಿಸಿಕೊಂಡರೂ ನಾನು ಮೀಸಲಾತಿ ಕೊಟ್ಟಿದ್ದೇನೆ. ಬೇರೆಯವರ ರೀತಿ ಮೀಸಲಾತಿ  ಬೇಡಿಕೆ ವಿಚಾರವನ್ನು ಮುಂದೆ ಹಾಕಬಹುದಿತ್ತು. ಸಮಾಜದ ಮೀಸಲಾತಿ ಬೇಡಿಕೆ ಮುಂದೆ ಹಾಕಿ ಕೆಲವರು ಅನುಭವಿಸಿದರು. ಮುಂಬರುವ ದಿನ ಒಗ್ಗಟ್ಟಾಗಿ ಒಂದಾಗಿ ನಾಡು ಕಟ್ಟುವ ಸಂಕಲ್ಪ ಮಾಡೋಣ. ಪಂಚಮಸಾಲಿ ಸಮುದಾಯದ ಬೆಂಬಲ, ಮಾರ್ಗದರ್ಶನ ನನ್ನ ಮೇಲಿದೆ. ಎಲ್ಲ ಸಮುದಾಯಕ್ಕೆ ನ್ಯಾಯ ಕೊಡುವ ಕೆಲಸ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ