
ಬೆಂಗಳೂರು: ಜಯದೇವ ಆಸ್ಪತ್ರೆಯ (Jayadeva hospital) ಹಾಲಿ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ರವರ ಅವಧಿ ಜುಲೈ 19ಕ್ಕೆ ಮುಕ್ತಾಯಗೊಳ್ಳಲಿದ್ದು, ಹಾಲಿ ನಿರ್ದೇಶಕರನ್ನು ಮುಂದುವರಿಸಬೇಕೋ ಅಥವಾ ಹೊಸ ನಿರ್ದೇಶಕರ ನೇಮಕ ಮಾಡಬೇಕು ಎಂಬ ವಿಚಾರದಲ್ಲಿ ಸರ್ಕಾರ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಆದರೆ ಡಾ.ಮಂಜುನಾಥ್ರನ್ನೇ ಮುಂದುವರಿಸುವಂತೆ ಸುಧಾಮೂರ್ತಿ ಸೇರಿದಂತೆ ಹಲವು ಗಣ್ಯರು ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದಾರೆ.
ಆದರೆ ರಾಜ್ಯ ಸರ್ಕಾರ ಈವರೆಗೆ ಯಾವುದೇ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ಇನ್ನೂ ಡಾ.ಮಂಜುನಾಥ್ ಸೇವೆ ಮುಂದುವರಿಕೆಗೆ ಕೆಲ ಸಚಿವರ ಅಡ್ಡಿ ಮಾಡುತ್ತಿದ್ದಾರೆ ಎಂದು ಆರೋಪ ಕೇಳಿಬರುತ್ತಿದೆ. ಈ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವರು ಡಾ.ಮಂಜುನಾಥ್ ಅವರ ಜೊತೆ ಚರ್ಚೆ ನಡೆಸಿದ್ದಾರೆ. ಡಾ.ಮಂಜುನಾಥ್ರವರ ಸೇವೆಯನ್ನು ರಾಜ್ಯ ಸರ್ಕಾರ ಮೊಟಕುಗೊಳಿಸಿದರೆ, ಜಯದೇವ ಹೃದ್ರೋಗ ಆಸ್ಪತ್ರೆ ಸಿಬ್ಬಂದಿ ಒಪಿಡಿಯನ್ನು ಬಂದ್ ಮಾಡುವ ಸಾಧ್ಯತೆ ಇದೆ.
Published On - 5:51 pm, Sat, 16 July 22