AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲುಗೆ ಬೆಳೆಸಿ ಓಯೋ ರೂಮ್​ಗೆ ಕರೆದು ವಿಡಿಯೋ ರೆಕಾರ್ಡ್, ಬಳಿಕ ಹಣಕ್ಕೆ ಬೇಡಿಕೆ ಇಟ್ಟ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್

ನಿವೃತ್ತ ಸರ್ಕಾರಿ ನೌಕರ ಸಿಧೀಂದ್ರ ಎಂಬುವರಿಗೆ ಹನಿಟ್ರ್ಯಾಪ್ ಮಾಡಿ ಹಣ ವಸೂಲಿ ಮಾಡಿದ್ದ ಆರೋಪಿಗಳು ಸದ್ಯ ಅರೆಸ್ಟ್ ಆಗಿದ್ದಾರೆ. ಆರೋಪಿಗಳನ್ನು ಬಂಧಿಸಿ ಜಯನಗರ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಣ್ಣಮ್ಮ ಹಾಗೂ ಸ್ನೇಹ ಬಂಧಿತ ಆರೋಪಿಗಳು.

ಸಲುಗೆ ಬೆಳೆಸಿ ಓಯೋ ರೂಮ್​ಗೆ ಕರೆದು ವಿಡಿಯೋ ರೆಕಾರ್ಡ್, ಬಳಿಕ ಹಣಕ್ಕೆ ಬೇಡಿಕೆ ಇಟ್ಟ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on:Aug 15, 2023 | 2:59 PM

Share

ಬೆಂಗಳೂರು, ಆ.15: ಹನಿಟ್ರ್ಯಾಪ್(Honey Trap) ಮಾಡಿ ಹಣ ಪೀಕುತ್ತಿದ್ದ ಕುಖ್ಯಾತ ಹನಿಟ್ರ್ಯಾಪ್ ಗ್ಯಾಂಗನ್ನು ಜಯನಗರ ಪೊಲೀಸರು(Jayanagar police) ಅರೆಸ್ಟ್ ಮಾಡಿದ್ದಾರೆ. ಅಣ್ಣಮ್ಮ ಹಾಗೂ ಸ್ನೇಹ ಬಂಧಿತ ಆರೋಪಿಗಳು. ನಿವೃತ್ತ ಸರ್ಕಾರಿ ನೌಕರ ಸಿಧೀಂದ್ರ ಎಂಬುವರಿಗೆ ಹನಿಟ್ರ್ಯಾಪ್ ಮಾಡಿ ಹಣ ವಸೂಲಿ ಮಾಡಿದ್ದ ಆರೋಪಿಗಳು ಸದ್ಯ ಅರೆಸ್ಟ್ ಆಗಿದ್ದಾರೆ. ಆರೋಪಿಗಳನ್ನು ಬಂಧಿಸಿ ಜಯನಗರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮೊದಲಿಗೆ ಆರೋಪಿ ಅಣ್ಣಮ್ಮ ಜೀವನದಲ್ಲಿ ಕಷ್ಟ ಇದೆ ಎಂದು ಸಿಂಪತಿ ಗಿಟ್ಟಿಸಿಕೊಂಡು ಸುಧೀಂದ್ರ ಬಳಿ ಐದು ಸಾವಿರ ಹಣ ಪಡೆದಿದ್ದರು. ಬಳಿಕ ಸುಧೀಂದ್ರ ಬಳಿ ಸಲುಗೆ ಬೆಳೆಸಿ ಓಯೋ ರೂಂಗೆ ಕರೆಸಿಕೊಂಡರು. ಅಲ್ಲಿ ಸುಧೀಂದ್ರ ಜೊತೆ ದೈಹಿಕ ಸಂಬಂಧ ಬೆಳೆಸಿ‌ ಅದನ್ನ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಅದೇ ವಿಡಿಯೋನ ಬಳಸಿಕೊಂಡು ಬ್ಲಾಕ್ ಮೇಲ್ ಮಾಡಿ ಹಂತ ಹಂತವಾಗಿ ಹಣ ವಸೂಲಿ ಮಾಡಿದ್ದಾರೆ. ಸಂಬಂಧಿಕರು ಹಾಗೂ ಸ್ನೇಹಿತರಿಗೆ ವಿಡಿಯೋ ವಾಟ್ಸಾಪ್ ಮಾಡೋದಾಗಿ ಹೆದರಿಸಿ ಹಣ ವಸೂಲಿ ಮಾಡಿದ್ದಾರೆ. ಅಣ್ಣಮ್ಮ ಮಾತ್ರವಲ್ಲದೇ ಆಕೆಯ ಸ್ನೇಹಿತೆ ಸ್ನೇಹ ಎಂಬಾಕೆ ಕೂಡ ಕರೆ ಮಾಡಿ ಬ್ಲಾಕ್ ಮೇಲ್ ಮಾಡಿ ಪದೇ ಪದೇ ಸುಮಾರು 82 ಲಕ್ಷ ರೂಪಾಯಿ ವರೆಗೆ ಹಣ ವಸೂಲಿ ಮಾಡಿದ್ದಾರೆ. ಇಷ್ಟಕ್ಕೆ ನಿಲ್ಲದ ಮಹಿಳೆಯರು ಮತ್ತೆ ವಿಡಿಯೋ ವೈರಲ್‌ ಮಾಡುವುದಾಗಿ ಹೆದರಿಸಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಕೊನೆಗೆ ಮಹಿಳೆಯರ ಕಾಟ ಸಹಿಸಲಾಗದೇ ಜಯನಗರ ಪೊಲೀಸ್ ಠಾಣೆಗೆ ಸಿಧೀಂದ್ರ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಜಯನಗರ ಪೊಲೀಸರು ಸದ್ಯ ಆರೋಪಿಗಳನ್ನ ಬಂಧಿಸಿ‌ದ್ದಾರೆ.

ಇದನ್ನೂ ಓದಿ: ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿಯ ಮೇಲೆ ಗುಂಡಿನ ದಾಳಿ

ಕನಕಪುರ ದೇವಸ್ಥಾನದಲ್ಲಿ ಕಳ್ಳತನ

ರಾಮನಗರ: ಡಿಕೆ ಶಿವಕುಮಾರ್ ಮನೆದೇವತೆ ಕನಕಪುರದ ಕಂಕೇರಮ್ಮ ದೇವಾಲಯದಲ್ಲಿ 8 ಗ್ರಾಂ ಚಿನ್ನ, 50 ಗ್ರಾಂ ಬೆಳ್ಳಿ ಕಳ್ಳತನವಾಗಿದೆ. ಅರ್ಚಕರು ಊಟಕ್ಕೆ ಹೋಗಿದ್ದಾಗ ಚಿನ್ನ, ಬೆಳ್ಳಿ ಕದ್ದು ಖದೀಮರು ಪರಾರಿಯಾಗಿದ್ದಾರೆ. ಕಳ್ಳತನ ಮಾಡುವ ವಿಡಿಯೋ ದೇವಾಲಯದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:59 pm, Tue, 15 August 23

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!