Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲುಗೆ ಬೆಳೆಸಿ ಓಯೋ ರೂಮ್​ಗೆ ಕರೆದು ವಿಡಿಯೋ ರೆಕಾರ್ಡ್, ಬಳಿಕ ಹಣಕ್ಕೆ ಬೇಡಿಕೆ ಇಟ್ಟ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್

ನಿವೃತ್ತ ಸರ್ಕಾರಿ ನೌಕರ ಸಿಧೀಂದ್ರ ಎಂಬುವರಿಗೆ ಹನಿಟ್ರ್ಯಾಪ್ ಮಾಡಿ ಹಣ ವಸೂಲಿ ಮಾಡಿದ್ದ ಆರೋಪಿಗಳು ಸದ್ಯ ಅರೆಸ್ಟ್ ಆಗಿದ್ದಾರೆ. ಆರೋಪಿಗಳನ್ನು ಬಂಧಿಸಿ ಜಯನಗರ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಣ್ಣಮ್ಮ ಹಾಗೂ ಸ್ನೇಹ ಬಂಧಿತ ಆರೋಪಿಗಳು.

ಸಲುಗೆ ಬೆಳೆಸಿ ಓಯೋ ರೂಮ್​ಗೆ ಕರೆದು ವಿಡಿಯೋ ರೆಕಾರ್ಡ್, ಬಳಿಕ ಹಣಕ್ಕೆ ಬೇಡಿಕೆ ಇಟ್ಟ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್
ಸಾಂದರ್ಭಿಕ ಚಿತ್ರ
Follow us
ರಾಚಪ್ಪಾಜಿ ನಾಯ್ಕ್
| Updated By: ಆಯೇಷಾ ಬಾನು

Updated on:Aug 15, 2023 | 2:59 PM

ಬೆಂಗಳೂರು, ಆ.15: ಹನಿಟ್ರ್ಯಾಪ್(Honey Trap) ಮಾಡಿ ಹಣ ಪೀಕುತ್ತಿದ್ದ ಕುಖ್ಯಾತ ಹನಿಟ್ರ್ಯಾಪ್ ಗ್ಯಾಂಗನ್ನು ಜಯನಗರ ಪೊಲೀಸರು(Jayanagar police) ಅರೆಸ್ಟ್ ಮಾಡಿದ್ದಾರೆ. ಅಣ್ಣಮ್ಮ ಹಾಗೂ ಸ್ನೇಹ ಬಂಧಿತ ಆರೋಪಿಗಳು. ನಿವೃತ್ತ ಸರ್ಕಾರಿ ನೌಕರ ಸಿಧೀಂದ್ರ ಎಂಬುವರಿಗೆ ಹನಿಟ್ರ್ಯಾಪ್ ಮಾಡಿ ಹಣ ವಸೂಲಿ ಮಾಡಿದ್ದ ಆರೋಪಿಗಳು ಸದ್ಯ ಅರೆಸ್ಟ್ ಆಗಿದ್ದಾರೆ. ಆರೋಪಿಗಳನ್ನು ಬಂಧಿಸಿ ಜಯನಗರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮೊದಲಿಗೆ ಆರೋಪಿ ಅಣ್ಣಮ್ಮ ಜೀವನದಲ್ಲಿ ಕಷ್ಟ ಇದೆ ಎಂದು ಸಿಂಪತಿ ಗಿಟ್ಟಿಸಿಕೊಂಡು ಸುಧೀಂದ್ರ ಬಳಿ ಐದು ಸಾವಿರ ಹಣ ಪಡೆದಿದ್ದರು. ಬಳಿಕ ಸುಧೀಂದ್ರ ಬಳಿ ಸಲುಗೆ ಬೆಳೆಸಿ ಓಯೋ ರೂಂಗೆ ಕರೆಸಿಕೊಂಡರು. ಅಲ್ಲಿ ಸುಧೀಂದ್ರ ಜೊತೆ ದೈಹಿಕ ಸಂಬಂಧ ಬೆಳೆಸಿ‌ ಅದನ್ನ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಅದೇ ವಿಡಿಯೋನ ಬಳಸಿಕೊಂಡು ಬ್ಲಾಕ್ ಮೇಲ್ ಮಾಡಿ ಹಂತ ಹಂತವಾಗಿ ಹಣ ವಸೂಲಿ ಮಾಡಿದ್ದಾರೆ. ಸಂಬಂಧಿಕರು ಹಾಗೂ ಸ್ನೇಹಿತರಿಗೆ ವಿಡಿಯೋ ವಾಟ್ಸಾಪ್ ಮಾಡೋದಾಗಿ ಹೆದರಿಸಿ ಹಣ ವಸೂಲಿ ಮಾಡಿದ್ದಾರೆ. ಅಣ್ಣಮ್ಮ ಮಾತ್ರವಲ್ಲದೇ ಆಕೆಯ ಸ್ನೇಹಿತೆ ಸ್ನೇಹ ಎಂಬಾಕೆ ಕೂಡ ಕರೆ ಮಾಡಿ ಬ್ಲಾಕ್ ಮೇಲ್ ಮಾಡಿ ಪದೇ ಪದೇ ಸುಮಾರು 82 ಲಕ್ಷ ರೂಪಾಯಿ ವರೆಗೆ ಹಣ ವಸೂಲಿ ಮಾಡಿದ್ದಾರೆ. ಇಷ್ಟಕ್ಕೆ ನಿಲ್ಲದ ಮಹಿಳೆಯರು ಮತ್ತೆ ವಿಡಿಯೋ ವೈರಲ್‌ ಮಾಡುವುದಾಗಿ ಹೆದರಿಸಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಕೊನೆಗೆ ಮಹಿಳೆಯರ ಕಾಟ ಸಹಿಸಲಾಗದೇ ಜಯನಗರ ಪೊಲೀಸ್ ಠಾಣೆಗೆ ಸಿಧೀಂದ್ರ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಜಯನಗರ ಪೊಲೀಸರು ಸದ್ಯ ಆರೋಪಿಗಳನ್ನ ಬಂಧಿಸಿ‌ದ್ದಾರೆ.

ಇದನ್ನೂ ಓದಿ: ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿಯ ಮೇಲೆ ಗುಂಡಿನ ದಾಳಿ

ಕನಕಪುರ ದೇವಸ್ಥಾನದಲ್ಲಿ ಕಳ್ಳತನ

ರಾಮನಗರ: ಡಿಕೆ ಶಿವಕುಮಾರ್ ಮನೆದೇವತೆ ಕನಕಪುರದ ಕಂಕೇರಮ್ಮ ದೇವಾಲಯದಲ್ಲಿ 8 ಗ್ರಾಂ ಚಿನ್ನ, 50 ಗ್ರಾಂ ಬೆಳ್ಳಿ ಕಳ್ಳತನವಾಗಿದೆ. ಅರ್ಚಕರು ಊಟಕ್ಕೆ ಹೋಗಿದ್ದಾಗ ಚಿನ್ನ, ಬೆಳ್ಳಿ ಕದ್ದು ಖದೀಮರು ಪರಾರಿಯಾಗಿದ್ದಾರೆ. ಕಳ್ಳತನ ಮಾಡುವ ವಿಡಿಯೋ ದೇವಾಲಯದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:59 pm, Tue, 15 August 23

ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?