AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಕರ್ನಾಟಕದ ಸೊಕ್ಕಿನ ಮನುಷ್ಯ, ‘ಸಿದ್ದಾರಮೆ ಆಟ’ ಯಾರಿಗೆ ಗೊತ್ತಿಲ್ಲ? ಸಿಎಂ ವಿರುದ್ಧ ಜೆಡಿಎಸ್ ಕಿಡಿ

ಸರಣಿ ಟ್ವಿಟ್ ಮೂಲಕ ಸಿಎಂ ಸಿದ್ದರಾಮಯ್ಯರ ವಿರುದ್ಧ ಜೆಡಿಎಸ್ ಕಿಡಿಕಾರಿದೆ. ದೇಶವನ್ನು ಜಾತಿ, ಧರ್ಮದಿಂದಲೇ ವಿಭಜಿಸಿ ಪ್ರಜಾಪ್ರಭುತ್ವವನ್ನೇ ಅಂತ್ಯ ಕಾಣಿಸಲು ಹೊರಟಿದ್ದ ಕಾಂಗ್ರೆಸ್, ಚರಿತ್ರೆಯ ಕೊನೇ ಪುಟದಲ್ಲಿ ಏದುಸಿರು ಬಿಡುತ್ತಿದೆ ಎಂದು ಸೊಕ್ಕಿನ ಮನುಷ್ಯಕ್ಕೆ ಟ್ಯಾಗ್ ಮಾಡಿ ಟಾಂಗ್ ಕೊಟ್ಟಿದೆ.

ಸಿದ್ದರಾಮಯ್ಯ ಕರ್ನಾಟಕದ ಸೊಕ್ಕಿನ ಮನುಷ್ಯ, 'ಸಿದ್ದಾರಮೆ ಆಟ' ಯಾರಿಗೆ ಗೊತ್ತಿಲ್ಲ? ಸಿಎಂ ವಿರುದ್ಧ ಜೆಡಿಎಸ್ ಕಿಡಿ
ಸಿಎಂ ಸಿದ್ದರಾಮಯ್ಯ
ಸುನಿಲ್​ ಎಮ್​ ಹೆಚ್​
| Edited By: ಆಯೇಷಾ ಬಾನು|

Updated on: Jan 07, 2024 | 9:46 AM

Share

ಬೆಂಗಳೂರು, ಜ.07: ಜೆಚ್​ಡಿ ದೇವೇಗೌಡರ (HD Deve Gowda) ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ಮಾಡಿದ ಟೀಕೆಗೆ ಸರಣಿ ಟ್ವಿಟ್ ಮಾಡುವ ಮೂಲಕ ಜೆಡಿಎಸ್ (JDS) ಆಕ್ರೋಶ ಹೊರ ಹಾಕಿದೆ. ಸಿದ್ದರಾಮಯ್ಯ ಸೊಕ್ಕಿನ ಮನುಷ್ಯ. ನಿಮಗೆ ಏಣಿಯಾಗಿ, ಹೆಗಲಾಗಿದ್ದ ಗೌಡರ ಬೆನ್ನಿಗಿರಿದ ‘ಅಪರ ಬ್ರೂಟಸ್’ ನೀವು. ಜೆಡಿಎಸ್ ಪಕ್ಷವನ್ನು ಅಂತ್ಯ ಕಾಣಿಸಲು ನೀವು ಆಡುತ್ತಿರುವ ‘ಸಿದ್ದಾರಮೆ ಆಟ’ ಯಾರಿಗೆ ಗೊತ್ತಿಲ್ಲ? ಕರ್ನಾಟಕದ ಸೊಕ್ಕಿನ ಮನುಷ್ಯ ಎಂದು ಜೆಡಿಎಸ್ ಎಕ್ಸ್​ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದೆ.

ಗೌಡರು ಹೇಳಿದ್ದರಲ್ಲಿ ಲವಲೇಶವೂ ಉತ್ಪ್ರೇಕ್ಷೆ ಇಲ್ಲ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಇಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ, ಹೌದು. ದೇಶವನ್ನು ಜಾತಿ, ಧರ್ಮದಿಂದಲೇ ವಿಭಜಿಸಿ ಪ್ರಜಾಪ್ರಭುತ್ವವನ್ನೇ ಅಂತ್ಯ ಕಾಣಿಸಲು ಹೊರಟಿದ್ದ ಕಾಂಗ್ರೆಸ್, ಚರಿತ್ರೆಯ ಕೊನೇ ಪುಟದಲ್ಲಿ ಏದುಸಿರು ಬಿಡುತ್ತಿದೆ ಎಂದು ಸೊಕ್ಕಿನ ಮನುಷ್ಯಕ್ಕೆ ಟ್ಯಾಗ್ ಮಾಡಿ ಟಾಂಗ್ ಕೊಟ್ಟಿದೆ.

ಸಿದ್ದರಾಮಯ್ಯರದು ತುಘಲಕ್ ಮನಃಸ್ಥಿತಿ

ಶಾಪ ಹಾಕುವುದನ್ನು ಗೌಡರೆಂದೂ ಮಾಡಿಲ್ಲ, ಮಾಡುವುದೂ ಇಲ್ಲ. ಅವರ ಹಸ್ತ ಅಭಯ ಹಸ್ತ. ಅದು ಆಶೀರ್ವಾದ,ಅನುಗ್ರಹದ ದ್ಯೋತಕ. ಗುರುಸ್ವಾಮಿ ಎಂಬ ಅನಾಮಧೇಯ ವ್ಯಕ್ತಿ ಎದುರು ಸೋತ ನಿಮ್ಮನ್ನು ಅನುಗ್ರಹದಲ್ಲಿಯೇ ಅವರು ಅನುಗ್ರಹಿಸಿದ್ದು ಮರೆತಿರಾ? ಅಂದು ಆ ಕೈ ನಿಮ್ಮ ಕೈ ಹಿಡಿಯದಿದ್ದರೆ ನೀವಿಷ್ಟು ಎತ್ತರಕ್ಕೇರಲು ಸಾಧ್ಯವಿತ್ತೆ ಸಿದ್ದರಾಮಯ್ಯನವರೇ? ಜಾತ್ಯತೀತತೆ ನೀವಷ್ಟೇ ಹೇಳಬೇಕು ಸಿದ್ದರಾಮಯ್ಯನವರೇ? ಸಿಎಂ ಸಚಿವಾಲಯದ ಕೊಳಕು ಕೊಡವಿದರೆ ನಿಮ್ಮ ಢೋಂಗಿ ಜಾತ್ಯತೀತತೆಯ ಅಸಲಿ ಮುಖ ಕಳಚಿ ಬೀಳುತ್ತದೆ. ಅಭಿಪ್ರಾಯ, ಭಿನ್ನಾಭಿಪ್ರಾಯ, ಪ್ರಾಮಾಣಿಕತೆ, ಜಾತ್ಯತೀತತೆ. ಈ ಪದಗಳೆಲ್ಲ ನಿಮಗೆ ಆಗಿ ಬರಲ್ಲ. ನಿಮ್ಮದೇನಿದ್ದರೂ ಏಕಾಭಿಪ್ರಾಯ. ಸರ್ವಾಧಿಕಾರ ಧೋರಣೆ, ತುಘಲಕ್ ಮನಃಸ್ಥಿತಿ ಎಂದು ಕಿಡಿಕಾರಿದೆ.

ಇದನ್ನೂ ಓದಿ: ನಾಮಫಲಕಗಳಲ್ಲಿ ಶೇ 60% ಕನ್ನಡ ಕಡ್ಡಾಯಕ್ಕೆ ಸುಗ್ರಿವಾಜ್ಞೆ ಹೊರಡಿಸಿದ ರಾಜ್ಯ ಸರ್ಕಾರ

ಯಾರು, ಯಾರ ಸಂಗ ಮಾಡಿದ್ದರು? ಯಾವ ಗಾಳಿ ಯಾರಿಗೆ ಸೋಕಿತ್ತು? ನಿಮ್ಮ ಇಂಥ ಕಾಗಕ್ಕ,ಗೂಬ್ಬಕ್ಕ ಕಥೆಗಳ ಮೂಲಕ್ಕೆ ಹೋದರೆ ನೀವೇ ಬೆತ್ತಲೆ ಸ್ಥಿತಿಯಲ್ಲಿ ನಿಲ್ಲಬೇಕಾಗುತ್ತದೆ. ಅಂತಹ ಸ್ಥಿತಿ ತಂದುಕೊಳ್ಳಬೇಡಿ. ನಿಮ್ಮ ರಾಜಕೀಯ ಅಂತ್ಯಕಾಲ ಆನಂದವಾಗಿರಲಿ, ಅದಕ್ಕೆ ಕಳಂಕ ಮೆತ್ತಿಕೊಳ್ಳಬೇಡಿ ಎನ್ನುವುದು ನಮ್ಮ ಕಳಕಳಿಯ ಸಲಹೆ. ನಿಮ್ಮಂಥ ಆತ್ಮಸಾಕ್ಷಿಹೀನರು ಇದ್ದರೆ ಕಾಂಗ್ರೆಸ್ ಅಂತ್ಯವಾಗುತ್ತದೆ, ನಿಜ. ಜೆಡಿಎಸ್ ಪಕ್ಷವನ್ನು ಅಂತ್ಯ ಕಾಣಿಸಲು ನೀವು ಆಡುತ್ತಿರುವ ‘ಸಿದ್ದಾರಮೆ ಆಟ’ ಯಾರಿಗೆ ಗೊತ್ತಿಲ್ಲ? ಇವತ್ತಿಗೂ ಕತ್ತಲಾದೊಡನೆ ನಮ್ಮ ಪಕ್ಷದ ನಾಯಕರ ಮನೆಗಳ ಮುಂದೆ ಠಳಾಯಿಸುವ ನಿಮ್ಮ ಕತ್ತಲು ಗಿರಾಕಿಗಳ ಬಗ್ಗೆ ಹೇಳಬೇಕೆ? ಜೆಡಿಎಸ್ ಅಂತ್ಯ ನಿಮ್ಮ ಕನಸು ಅಷ್ಟೇ.

ಸೊಕ್ಕು ಎನ್ನುವುದು ನಿಮ್ಮ ಪೇಟೆಂಟ್. ಆ ನಿಮ್ಮ ಸದ್ಗುಣ(!?)ವನ್ನು ದೇವೇಗೌಡರಿಗೆ ಅಂಟಿಸುವ ಪಾಪದ ಕೆಲಸ ಮಾಡಬೇಡಿ. ಕರ್ನಾಟಕದ ‘ಸೊಕ್ಕಿನ ಮನುಷ್ಯ’ ಅಂತ ಯಾರಾದರೂ ಇದ್ದರೆ ಅದು ತಾವೇ ಸಿದ್ಧರಾಮಯ್ಯನವರೇ. ನಿಮ್ಮ ಪಕ್ಷದ ಪಡಸಾಲೆಗೆ ಬಂದರೆ ಅಲ್ಲಿರುವ ಪ್ರತಿ ಬಾಗಿಲು ನಿಮ್ಮ ಸೊಕ್ಕಿನ ಕಥೆಗಳನ್ನೇ ಹೇಳುತ್ತವೆ ಎಂದು ವಾಗ್ದಾಳಿ ನಡೆಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?