AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಗುಡಿಯಲ್ಲಿ ನಾಪತ್ತೆ ಆಗಿದ್ದ ಜೆಡಿಎಸ್ ಮಾಜಿ ಕಾರ್ಪೋರೆಟರ್ ಪತಿ ಲೋಹಿತ್ ವಾರಣಾಸಿಯಲ್ಲಿ ಪತ್ತೆ

ಮಾರ್ಚ್ 29 ರಂದು ಕಾರು ಪಂಕ್ಷರ್ ಆಗಿ ರಕ್ತದ ಕಲೆ‌ ಇದ್ದಹಾಗೆ ಪತ್ತೆಯಾಗಿತ್ತು. ಯಾರು ಕಿಡಿಗೇಡಿಗಳು ಕಿಡ್ನ್ಯಾಪ್ ಮಾಡಿರಬಹುದು ಎಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದರು. ಹೀಗಾಗಿ ನಂದಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು.

ನಂದಗುಡಿಯಲ್ಲಿ ನಾಪತ್ತೆ ಆಗಿದ್ದ ಜೆಡಿಎಸ್ ಮಾಜಿ ಕಾರ್ಪೋರೆಟರ್ ಪತಿ ಲೋಹಿತ್ ವಾರಣಾಸಿಯಲ್ಲಿ ಪತ್ತೆ
JDS ಮಾಜಿ ಕಾರ್ಪೊರೇಟರ್ ಪತಿ ನಾಪತ್ತೆಯಾಗಿದ್ದ ಘಟನೆ
TV9 Web
| Updated By: ganapathi bhat|

Updated on:Apr 13, 2022 | 4:44 PM

Share

ಬೆಂಗಳೂರು: ನಾಪತ್ತೆ ಆಗಿದ್ದ ಜೆಡಿಎಸ್ ಮಾಜಿ ಕಾರ್ಪೋರೆಟರ್ ಐಶ್ವರ್ಯ ನಾಗರಾಜ್‌ ಪತಿ‌ ಲೋಹಿತ್ ವಾರಣಾಸಿಯಲ್ಲಿ ಪತ್ತೆಯಾಗಿದ್ದಾರೆ. ವಾರಣಾಸಿಯಲ್ಲಿ ಲೋಹಿತ್ ನನ್ನು ಪೊಲೀಸರು ಪತ್ತೆಹಚ್ಚಿ ಹಿಡಿದುಕೊಂಡಿದ್ದಾರೆ. ನಂದಗುಡಿ ಇನ್ಸಪೇಕ್ಟರ್ ರಂಗಸ್ವಾಮಿ ನೇತೃತ್ವದ ತಂಡದಿಂದ ಪತ್ತೆ ಮಾಡಲಾಗಿದೆ. ಕಾರು ನಂದಗುಡಿ ಬಳಿ ಬಿಟ್ಟು ನಿಗೂಡವಾಗಿ ನಾಪತ್ತೆಯಾಗಿದ್ದ ಲೋಹಿತ್ ಇದೀಗ ಸಿಕ್ಕಿದ್ದಾರೆ. ಮಾರ್ಚ್ 29 ರಂದು ಕಾರು ಪಂಕ್ಷರ್ ಆಗಿ ರಕ್ತದ ಕಲೆ‌ ಇದ್ದಹಾಗೆ ಪತ್ತೆಯಾಗಿತ್ತು. ಯಾರು ಕಿಡಿಗೇಡಿಗಳು ಕಿಡ್ನ್ಯಾಪ್ ಮಾಡಿರಬಹುದು ಎಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದರು. ಹೀಗಾಗಿ ನಂದಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು.

ಕಾರು ಬಿಟ್ಟು ಸ್ವಯಂ ಪ್ರೇರಿತವಾಗಿ ತೆರಳಿದ್ದ ಲೋಹಿತ್, ಚಪ್ಪಲಿ ಬೆಲ್ಟ್ ದೇವಸ್ಥಾನದ ಬಳಿ ಬಿಟ್ಟು ವಾರಣಾಸಿಗೆ ಹೋಗಿದ್ದರು. ಲೋಹಿತ್ ನಾಪತ್ತೆ ಹಿನ್ನೆಲೆ ತನಿಖೆ ನಡೆಸಲಾಗಿದ್ದು, ಇಂದು ಮಧ್ಯಾಹ್ನ ವಾರಣಾಸಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಇಂದು ರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ನಂದಗುಡಿಗೆ ಕರೆತರುವ ಸಾಧ್ಯತೆ ಇದೆ ತಿಳಿದುಬಂದಿದೆ.

ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಪ್ರಕರಣದ ತನಿಖೆ ಎಟಿಸಿ ಹೆಗಲಿಗೆ

ಇತ್ತ ಬೆಂಗಳೂರಿನಲ್ಲಿ ಒಟ್ಟು 15 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ತಿಳಿದುಬಂದಿದೆ. 10ಕ್ಕೂ ಅಧಿಕ ಇಮೇಲ್‌ಗಳಿಂದ ಬೆದರಿಕೆ ಬಂದಿದೆ. Proxy server ಬಳಸಿ ದುಷ್ಕರ್ಮಿಗಳು ಮೇಲ್ ಮಾಡಿದ್ದಾರೆ. 8- 10 Proxy server ಬಳಸಿರುವುದರಿಂದ ಹಲವಾರು ಲೇಯರ್‌ಗಳಿವೆ. ಒಂದು ಲೇಯರ್ ಪತ್ತೆ ಮಾಡಿದ್ರೆ, ಅದು ಇನ್ನೊಂದು ಲೇಯರ್‌ಗೆ ಕನೆಕ್ಟ್ ಆಗತ್ತೆ. ಇಮೇಲ್ ಮೂಲ ಪತ್ತೆ ಹಚ್ಚಲು ಗೂಗಲ್ ಸಂಸ್ಥೆಗೆ ಪತ್ರ ಬರೆಯಲಾಗಿದೆ. ಐಟಿ ಆ್ಯಕ್ಟ್, 66F ಅಡಿ ಪ್ರಕರಣ ದಾಖಲಾಗಿರೋದ್ರಿಂದ ಪ್ರಕರಣಕ್ಕೆ ಗಂಭೀರತೆ ಇದೆ. ತನಿಖೆ ನಡೆಸ್ತಿರುವ ಪೊಲೀಸರಿಗೆ ಎಟಿಸಿಯಿಂದಲೂ ಸಾಥ್ ನೀಡಲಾಗುತ್ತದೆ ಎಂಬ ಬಗ್ಗೆ ಮಾಹಿತಿ ಲಭಿಸಿದೆ. ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಪ್ರಕರಣದ ತನಿಖೆ ಎಟಿಸಿ ಹೆಗಲಿಗೆ ನೀಡಲಾಗಿದೆ. ಆ್ಯಂಟಿ ಟೆರರಿಸಂ ಸೆಲ್ ತನಿಖೆಯನ್ನು ಕೈಗೆತ್ತಿಕೊಂಡಿದೆ.

ಕಸದ ರಾಶಿ ಕುಸಿದು ಇಬ್ಬರು ಸಾವು

ಸುಲ್ತಾನಪುರ ಬಳಿ ಕಸದ ರಾಶಿ ಕುಸಿದು ಇಬ್ಬರು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. JSW ಡಂಪಿಂಗ್ ಯಾರ್ಡ್​ನಲ್ಲಿ ದುರ್ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸುಲ್ತಾನಪುರದಲ್ಲಿ ಘಟನೆ ನಡೆದಿದೆ. ಕಬ್ಬಿಣ ಆಯುವ ಇಬ್ಬರು ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕುಡತಿನಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಚಾರಣಾಧೀನ ಕೈದಿ ಜತಿನ್ ಕುಮಾರ್ ಆತ್ಮಹತ್ಯೆಗೆ ಯತ್ನ

ಕೋರ್ಟ್​ನ 5ನೇ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಚಾರಣಾಧೀನ ಕೈದಿ ಜತಿನ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. 2020ರಲ್ಲಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತನ್ನ ಮಕ್ಕಳನ್ನೇ ಹತ್ಯೆಗೈದ ಆರೋಪ ಜತಿನ್ ಮೇಲಿತ್ತು. ಹುಳಿಮಾವು ಪೊಲೀಸರಿಂದ ಬಂಧಿತನಾಗಿದ್ದ ಆರೋಪಿ ವಿಚಾರಣೆ ಹಿನ್ನೆಲೆ ಇಂದು ಕೋರ್ಟ್​ಗೆ ಕರೆತರಲಾಗಿತ್ತು. ಪೊಲೀಸರಿಂದ ತಪ್ಪಿಸಿಕೊಂಡು ಜತಿನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಾಯಾಳು ಆರೋಪಿ ಜತಿನ್​ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: JDS ಮಾಜಿ ಕಾರ್ಪೊರೇಟರ್ ಪತಿ ನಿಗೂಢ ನಾಪತ್ತೆ; ವಾರ ಕಳೆದರೂ, ಎಷ್ಟೇ ತನಿಖೆ ನಡೆಸಿದರೂ ಸಿಕ್ತಿಲ್ಲ ಯಾವುದೇ ಸುಳಿವು

ಇದನ್ನೂ ಓದಿ: ಜೆಡಿಎಸ್ ಮಾಜಿ ಕಾರ್ಪೊರೇಟರ್ ಪತಿ ನಿಗೂಡವಾಗಿ ನಾಪತ್ತೆ; ಕಾರಿನ ಬಳಿ ಪತ್ತೆಯಾದ ರಕ್ತದ ಕಲೆ

Published On - 4:43 pm, Wed, 13 April 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!