AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಥವರ ಬಗ್ಗೆ ನಾನು ಏನೂ ಹೇಳಲ್ಲ: ಜಮೀರ್ ಕೊಟ್ಟ ಹಿಜಾಬ್ ಹೇಳಿಕೆಗೆ ಪ್ರತಿಕ್ರಿಯಿಸಲು ಎಚ್​ಡಿಕೆ ನಕಾರ

ಸಂಘಟನೆಗಳ ನಾಯಕರು ಹೇಳಿಕೊಡುವ ಮಾತುಗಳಿಂದ ಪ್ರೇರೇಪಿತರಾಗಿ ಸಮಾಜದ ಶಾಂತಿಯನ್ನು ಹಾಳು ಮಾಡಬೇಡಿ ಎಂದು ಎಚ್​ಡಿ ಕುಮಾರಸ್ವಾಮಿ ಹೇಳಿದರು.

ಅಂಥವರ ಬಗ್ಗೆ ನಾನು ಏನೂ ಹೇಳಲ್ಲ: ಜಮೀರ್ ಕೊಟ್ಟ ಹಿಜಾಬ್ ಹೇಳಿಕೆಗೆ ಪ್ರತಿಕ್ರಿಯಿಸಲು ಎಚ್​ಡಿಕೆ ನಕಾರ
ಎಚ್.​ಡಿ.ಕುಮಾರಸ್ವಾಮಿ ಮತ್ತು ಎಚ್​.ಡಿ.ದೇವೇಗೌಡ
TV9 Web
| Edited By: |

Updated on: Feb 14, 2022 | 6:03 PM

Share

ಬೆಂಗಳೂರು: ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವ ಕುರಿತು ಕಾಂಗ್ರೆಸ್ ಶಾಸಕ ಮತ್ತು ತಮ್ಮ ಮಾಜಿ ಸಹವರ್ತಿ ಬಿ.ಝಡ್.ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಲು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ‘ಅವರ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಒಬ್ಬೊಬ್ಬರಿಗೆ ಒಂದೊಂದು ಭಾವನೆ ಇರುತ್ತದೆ. ಅದನ್ನು ಅವರು ವ್ಯಕ್ತಪಡಿಸಿರುತ್ತಾರೆ’ ಎಂದರು. ಮತೀಯ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾನು ರಾಜ್ಯದ ಎಲ್ಲ ಸಂಘಟನೆಗಳಿಗೆ ಕಿವಿಮಾತು ಹೇಳುತ್ತೇನೆ ದಯವಿಟ್ಟು ರಾಜ್ಯದ ಶಾಂತಿ ಹಾಳು ಮಾಡಬೇಡಿ. ಇದು ಶಾಂತಿಯುತ ರಾಜ್ಯ ಎಂದು ಹೇಳಿದರು. ಮಕ್ಕಳನ್ನು ಶಾಲೆಗೆ ಕಳಿಸುವ ಪೋಷಕರಿಗೆ ತಿಳಿವಳಿಕೆ ಹೇಳಬೇಕು. ಸಂಘಟನೆಗಳ ನಾಯಕರು ಹೇಳಿಕೊಡುವ ಮಾತುಗಳಿಂದ ಪ್ರೇರೇಪಿತರಾಗಿ ಸಮಾಜದ ಶಾಂತಿಯನ್ನು ಹಾಳು ಮಾಡಬೇಡಿ. ಇಂಥ ಸಂಘರ್ಷದ ವಾತಾವರಣ ನಿರ್ಮಾಣ ಮಾಡಿದ್ದೇ ತಪ್ಪು. ಉಡುಪಿಯಲ್ಲಿ ಆದ ಘಟನೆಯನ್ನು ಈ ಮಟ್ಟಕ್ಕೆ ಬೆಳೆಯುತ್ತಿರಲಿಲ್ಲ ಎಂದರು.

ಜೆಪಿ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಅಧಿವೇಶನದಲ್ಲಿ ಚರ್ಚೆ ಮಾಡಲು ಹಲವು ವಿಚಾರಗಳಿವೆ. ಇತ್ತೀಚೆಗೆ ಸದನ ನಡೆಯುತ್ತಿರುವ ರೀತಿ ನನಗೆ ಇಷ್ಟವಾಗುತ್ತಿಲ್ಲ. ಹೀಗಾಗಿಯೇ ನಾನು ಕಲಾಪದಲ್ಲಿ ಭಾಗಿಯಾಗುತ್ತಿಲ್ಲ. ಈ ಬಾರಿಯ ಜಂಟಿ ಅಧಿವೇಶನದಲ್ಲಿ ದಾಖಲೆ ಸಮೇತ ಮಾತನಾಡಲು ಸಿದ್ಧತೆ ಮಾಡಿಕೊಂಡಿದ್ದೇನೆ. ಸಿದ್ದರಾಮಯ್ಯ ಅಧಿಕಾರದ ಅವಧಿಯಲ್ಲಿ ನಡೆದ ಲೂಟಿ ಬಗ್ಗೆ ಉದಾಹರಣೆ ಸಮೇತ ವಿವರಿಸುತ್ತೇನೆ ಎಂದರು. ಗೋವಾದಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ರಾಹುಲ್ ಗಾಂಧಿಯವರೇ ಪ್ರಕಟಿಸಿದ್ದಾರೆ. ಕರ್ನಾಟಕದಲ್ಲಿ ಮಹದಾಯಿ ನೀರನ್ನು ನಮ್ಮ ಹಕ್ಕು ಎನ್ನುವ ಅವರು, ಗೋವಾದಲ್ಲಿ ಮತ್ತೆ ಮಹದಾಯಿ ಬಗ್ಗೆ ಮಾತಾಡುತ್ತಾರೆ. ದ್ವಂದ್ವ ನೀತಿಯನ್ನು ಕಾಂಗ್ರೆಸ್ ತಾಳಿದೆ ಎಂದು ಎಚ್ಚರಿಸಿದರು.

ಇಲ್ಲಿ ಪಾದಯಾತ್ರೆ ಮಾಡ್ತಾರೆ, ಅಲ್ಲಿ ನೀರು ಕೊಡಲ್ಲ ಅಂತ ಪ್ರಣಾಳಿಕೆ ಬಿಡುಗಡೆ ಮಾಡ್ತಾರೆ. ಇಲ್ಲಿ ಮೇಕೆದಾಟು, ಮಹಾದಾಯಿ ಎನ್ನಲು ಕಾಂಗ್ರೆಸ್​ನವರಿಗೆ ಏನು ಹಕ್ಕಿದೆ. ಕಾಂಗ್ರೆಸ್ ಪಕ್ಷವು ಒಂದೊಂದು ರಾಜ್ಯಗಳಲ್ಲಿ ಒಂದೊಂದು ನೀತಿ ಅನುಸರಿಸುತ್ತಿದೆ ಎಂದರು. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ ಕುರಿತು ಪ್ರಸ್ತಾಪಿಸಿದ ಅವರು, ಇದು ಕೊವಿಡ್​ನಿಂದ ಕೊವಿಡ್​ಗಾಗಿ ಮಾಡಿದ ಭಾಷಣ. ಸರ್ಕಾರದ ಸಾಧನೆ, ಸರ್ಕಾರದ ಮುನ್ನೋಟದ ಬಗ್ಗೆ ಭಾಷಣದಲ್ಲಿ ಏನೂ ಪ್ರಸ್ತಾಪವೇ ಇಲ್ಲ. ರಾಜ್ಯದ ಅಭಿವೃದ್ಧಿಗೆ ಪೂರಕವಾದ ವಿಷಯಗಳನ್ನಾಗಲಿ, ಬಜೆಟ್ ಕುರಿತಾಗಲಿ ಪ್ರಸ್ತಾಪಿಸಿಲ್ಲ. ಬಜೆಟ್​ ಬಗ್ಗೆ ಆಶಾಭಾವನೆ ಇಟ್ಟುಕೊಬೇಡಿ ಎನ್ನುವಂತಿದೆ. ಇದು ಕೊವಿಡ್ ಕಿರುಹೊತ್ತಿಗೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಜೆಡಿಎಸ್​ಗೆ ಹಣಕಾಸಿನ ಸಮಸ್ಯೆ: ದೇವೇಗೌಡ

ಜೆಡಿಎಸ್ ಪಕ್ಷದಲ್ಲಿ ಹಣಕಾಸಿನ ಸಮಸ್ಯೆಯಿದೆ. ಜೆಡಿಎಸ್ ಉಳಿಯುವುದು ಕಷ್ಟವೆಂದು ಹಲವರು ಮಾತನಾಡುತ್ತಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಆರ್ಥಿಕವಾಗಿ ಬಲಾಢ್ಯವಾಗಿವೆ. ಆದರೆ ಜೆಡಿಎಸ್​ನಲ್ಲಿ ಹಣಕಾಸು ಪರಿಸ್ಥಿತಿ ಕಷ್ಟ ಎಮದುಕೊಂಡಿರುವ ಶಾಸಕರಿದ್ದಾರೆ. ಅಂಥವರ ಬಗ್ಗೆ ನಾನು ಲಘುವಾಗಿ ಮಾತನಾಡುವುದಿಲ್ಲ. 2023ರ ಮಾರ್ಚ್ ಅಥವಾ ಏಪ್ರಿಲ್​ ತಿಂಗಳಲ್ಲಿ ಚುನಾವಣಾ ಆಯೋಗವು ಚುನಾವಣೆ ಘೋಷಣೆ ಹೊರಡಿಸಬಹುದು. ಎಚ್.ಡಿ.ಕುಮಾರಸ್ವಾಮಿ ಒಬ್ಬರೇ 123 ಸ್ಥಾನ ತರಲು ಸಾಧ್ಯವಿಲ್ಲ. ಎಚ್​ಡಿಕೆ ಒಬ್ಬರೇ ಒದ್ದಾಡುತ್ತಿದ್ದಾರೆ, ಎಲ್ಲರೂ ಒಗ್ಗೂಡಬೇಕಿದೆ. ಒಗ್ಗಟ್ಟಾಗಿ ಕೆಲಸ ಮಾಡಬೇಕು. ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಶ್ರಮಿಸಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.

ಚುನಾವಣೆಗೆ ಕೇವಲ 13 ತಿಂಗಳು ಬಾಕಿಯಿದೆ. 2023ರ ಮೇ ಎರಡನೇ ವಾರದಲ್ಲಿ ಚುನಾವಣೆ ಮುಗಿಯಬಹುದು. ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಒಮ್ಮೆ, ಕಾಂಗ್ರೆಸ್ ಜೊತೆ ಮತ್ತೊಮ್ಮೆ ಸೇರಿ ಸರ್ಕಾರ ಮಾಡಿದ್ದರು. ಎರಡೂ ಅವಧಿಯಲ್ಲಿ ಕುಮಾರಸ್ವಾಮಿ ಸರ್ಕಾರ ನಡೆಸಿದ ರೀತಿಯನ್ನು ಜನರು ಗುರುತಿಸಿದ್ದಾರೆ. ಸಾಲಮನ್ನಾ, ಮೀಟರ್ ಬಡ್ಡಿ ನಿರ್ಬಂಧ ಸೇರಿದಂತೆ ಹಲವು ಕೆಲಸಗಳನ್ನು ಎಚ್​ಡಿಕೆ ಮಾಡಿದ್ದಾರೆ ಎಂದು ದೇವೇಗೌಡ ನೆನಪಿಸಿಕೊಂಡರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತಲಾ ಎರಡು ದಿನ ಮುಖಂಡರ ಸಭೆ ನಡೆಸುತ್ತೇವೆ. ನಾನು ಸಂಸತ್ ಕಲಾಪಕ್ಕೆ ಗೈರಾಗುವುದಿಲ್ಲ, ಬಜೆಟ್​ ಮೇಲೆ ಮಾತನಾಡಿದ್ದೇನೆ. ಮಾರ್ಚ್ 14ರವರೆಗೆ ಸಂಸತ್​ ಕಲಾಪ ಮುಂದೂಡಲಾಗಿದೆ. ತಿಂಗಳಲ್ಲಿ 2 ದಿನ ಜಿಲ್ಲೆಗಳಿಗೆ ಭೇಟಿ ನೀಡಿ ಪಕ್ಷ ಸಂಘಟಿಸುವೆ. ಹಲವು ಜಿಲ್ಲೆಗಳಲ್ಲಿ ನಮ್ಮ ಸಂಘಟನೆ ಪ್ರಬಲವಾಗಿದೆ. ಆದರೆ ಕೆಲವೆಡೆ ಹಿಂದೆ ಬಿದ್ದಿದೆ ಎಂದು ವಿವರಿಸಿದರು.

ಇದನ್ನೂ ಓದಿ: ನನ್ನ ಗುರಿ ಮುಂದಿನ ಎಲೆಕ್ಷನ್​ನಲ್ಲಿ 123 ಸ್ಥಾನ ಗೆಲ್ಲುವುದು; ಪ್ರಾದೇಶಿಕ ಪಕ್ಷದ ಸರ್ಕಾರ ತರಲು ಈಗಾಗಲೇ ತಯಾರಿ: ಹೆಚ್​ಡಿ ಕುಮಾರಸ್ವಾಮಿ

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಅಂದ್ರೆ ಸಂಸದರಿಗೆ ಹೆದರಿಕೆ: ಆಕ್ಷೇಪಾರ್ಹ ಪದ ಬಳಸಿ ಟೀಕಿಸಿದ ಜೆಡಿಎಸ್ ಶಾಸಕ

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ