AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ನಗರ ಪ್ರದಕ್ಷಿಣೆ ಫೋಟೊ ಸೆಷನ್ ಆಗಬಾರದು: ಎಚ್​ಡಿ ಕುಮಾರಸ್ವಾಮಿ ತಾಕೀತು

ಮೊದಲು ಡಕಾಯಿತರನ್ನು ನೋಡಲು ಚಂಬಲ್ ಕಣಿವೆಗೆ ಹೋಗಬೇಕಿತ್ತು. ಆದರೆ ಈಗ ಇಲ್ಲೇ ಡಕಾಯಿತರನ್ನು ನೋಡಬಹುದು ಎಂದು ವ್ಯಂಗ್ಯವಾಡಿದರು.

ಸಿಎಂ ನಗರ ಪ್ರದಕ್ಷಿಣೆ ಫೋಟೊ ಸೆಷನ್ ಆಗಬಾರದು: ಎಚ್​ಡಿ ಕುಮಾರಸ್ವಾಮಿ ತಾಕೀತು
ಮಳೆಯಿಂದ ಹಾನಿಗೊಳಗಾದ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲಿಸಿದರು
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:May 20, 2022 | 1:45 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಲ್ಕನೇ ದಿನ ನಗರ ಸಂಚಾರ ಮಾಡುತ್ತಿದ್ದಾರೆ.. ಅವರಿಗೆ ನಿಜವಾಗಿಯೂ ಸಮಸ್ಯೆಗಳ ಅರಿವಾಗಿದ್ದರೆ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬೇಕು. ಅದು ಬಿಟ್ಟು ಸಿಎಂ ನಗರ ಸಂಚಾರ ಎನ್ನುವುದು ಫೊಟೊ ಸೆಷನ್ ಆಗಬಾರದು ಎಂದು ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ ಹೇಳಿದರು. ಮಳೆಯಿಂದ ಹಾನಿಗೊಳಗಾದ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಜನರೊಂದಿಗೆ ಸಂವಾದ ನಡೆಸಿದ ನಂತರ ಮಾತನಾಡಿದ ಅವರು, ಸರ್ಕಾರದಲ್ಲಿ ಕೆಲವರಾದರೂ ಪ್ರಾಮಾಣಿಕ ಅಧಿಕಾರಿಗಳು ಇರುತ್ತಾರೆ. ಅಂಥವರಿಗೆ ಜವಾಬ್ದಾರಿ ಕೊಟ್ಟು ಸರ್ಕಾರ ಕೆಲಸ ಮಾಡಿಸಬೇಕು. ಎಲ್ಲದರಲ್ಲಿಯೂ ಹಣ ಹೊಡೆಯುವ ಡಕಾಯಿತರನ್ನು ದೂರ ತಳ್ಳಬೇಕು. ಮೊದಲು ಡಕಾಯಿತರನ್ನು ನೋಡಲು ಚಂಬಲ್ ಕಣಿವೆಗೆ ಹೋಗಬೇಕಿತ್ತು. ಆದರೆ ಈಗ ಇಲ್ಲೇ ಡಕಾಯಿತರನ್ನು ನೋಡಬಹುದು ಎಂದು ವ್ಯಂಗ್ಯವಾಡಿದರು.

ಕರ್ನಾಟಕದಲ್ಲಿ, ಬೆಂಗಳೂರಿನಲ್ಲಿ ಅಂಥ ಡಕಾಯಿತ ಅಧಿಕಾರಿಗಳಿದ್ದಾರೆ. ರಾಜಕಾಲುವೆ ಒತ್ತುವರಿಯಾಗಿದೆ ಎಂದು ಎಷ್ಟೋ ವರ್ಷಗಳಿಂದ ಹೇಳುತ್ತಿದ್ದಾರೆ. ರಾಜಕಾಲುವೆ ಸಮಸ್ಯೆ ಪರಿಹರಿಸಲು ಇಷ್ಟು ವರ್ಷಗಳು ಬೇಕಿತ್ತೇ? ಸಿಎಂ ಸಿಟಿ ರೌಂಡ್ಸ್ ಮಾಡುವ ಅವಶ್ಯಕತೆ ಏನೇನೂ ಇಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳನ್ನು ನೋಡಿ ಕ್ರಮ ಕೈಗೊಂಡರೆ ಸಾಕು. ಕಾಟಾಚಾರದ ಸಿಟಿ ರೌಂಡ್ಸ್ ಯಾಕೆ ಮಾಡಬೇಕು ಎಂದು ಪ್ರಶ್ನಿಸಿದರು.

ಮಳೆಯಿಂದ ನಷ್ಟ ಅನುಭವಿಸುವವರಿಗೆ ಸರ್ಕಾರ ಸಮರ್ಪಕ ಪರಿಹಾರ ಒದಗಿಸಬೇಕು. ತೋರಿಕೆಗೆಂದು ಅಷ್ಟೋ ಇಷ್ಟೋ ಕೊಟ್ಟು ಸುಮ್ಮನಾಗಬಾರದು. ಜನರು ಅನುಭವಿಸಿರುವ ನಷ್ಟದ ಪ್ರಮಾಣದ ಶೇ 75ರಷ್ಟು ಮೊತ್ತವನ್ನು ಪರಿಹಾರವಾಗಿ ನೀಡಬೇಕು. ಅಧಿಕಾರಿಗಳು ಎಲ್ಲದರಲ್ಲಿಯೂ ದುಡ್ಡು ಹೊಡೆಯಲು ನೋಡುತ್ತಾರೆ. ಮುಂದೆ ಹಾಗಾಗದಂತೆ ನೋಡಿಕೊಳ್ಳಬೇಕು. ಸಿಎಂ ನಗರ ಪ್ರದಕ್ಷಿಣೆಯು ಕೇವಲ ಫೋಟೊ ಸೆಷನ್ ಅಷ್ಟೇ ಆಗಬಾರದು. ಅದರಿಂದ ಯಾವುದೇ ಪ್ರಯೋಜನ ಆಗುತ್ತಿಲ್ಲ ಎಂದು ಹೇಳಿದರು.

ನಾನು ಮುಖ್ಯಮಂತ್ರಿಯಾಗಿದ್ದಾಗ ದಾಸರಹಳ್ಳಿ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡಿದ್ದೆ. ಇವರು ಅಧಿಕಾರಕ್ಕೆ ಬಂದ ನಂತರ ನಾವು ಕೊಟ್ಟ ಅನುದಾನ ತಡೆಹಿಡಿದರು ಎಂದು ಬಸಪ್ಪನಕಟ್ಟೆಯಲ್ಲಿ ಹೇಳಿದರು. ಇಷ್ಟು ವರ್ಷಗಳಾದರೂ ದಾಸರಹಳ್ಳಿ ಕ್ಷೇತ್ರ ಅಭಿವೃದ್ಧಿ ಆಗಿಲ್ಲ. ಬೆಂಗಳೂರಿನ 28 ಕ್ಷೇತ್ರಗಳಿಗೆ ಎಷ್ಟು ಹಣ ಬಿಡುಗಡೆ ಮಾಡಿದ್ದಾರೆ. 15 ವರ್ಷದಲ್ಲಿ ಎಷ್ಟು ಹಣ ಕೊಟ್ಟಿದ್ದಾರೆಂದು ಮಾಹಿತಿ ಪಡೆಯುವೆ ಎಂದರು.

ಮನೆಗಳಿಗೆ ನೀರು ನುಗ್ಗಿದರೆ ಸಣ್ಣ ಮಕ್ಕಳನ್ನಿಟ್ಟುಕೊಂಡವರು ಹೇಗೆ ಜೀವನ ಮಾಡಬೇಕು? ಬಿಜೆಪಿ ಶಾಸಕರು ಅಧಿಕಾರದಲ್ಲಿರುವ ಕ್ಷೇತ್ರಗಳಿಗೆ ಮಾತ್ರ ಮುಖ್ಯಮಂತ್ರಿ ಭೇಟಿ ನೀಡುತ್ತಿದ್ದಾರೆ. ಬೊಮ್ಮಾಯಿ ಅವರೇ ನೀವು ಇನ್ನೆಷ್ಟು ಮುಖ್ಯಮಂತ್ರಿಯಾಗಿ ಇರುತ್ತೀರೋ ಗೊತ್ತಿಲ್ಲ. ಆದರೆ ಜನರ ಜೀವನದ ಜೊತೆಗೆ ಚೆಲ್ಲಾಟ ಆಡಬೇಡಿ ಎಂದು ಹೇಳಿದರು.

ಬಾಣವಾರದ ಬಿಟಿಎಸ್ ಲೇಔಟ್​, ದಾಸರಹಳ್ಳಿ ಕ್ಷೇತ್ರದ ರುಕ್ಮಿಣಿನಗರದಲ್ಲಿಯೂ ಎಚ್​.ಡಿ.ಕುಮಾರಸ್ವಾಮಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿದರು. ಈ ವೇಳೆ ಶಾಸಕ ಮಂಜುನಾಥ್, ಮಾಜಿ ಎಂಎಲ್​ಸಿ ಶರವಣ ಜೊತೆಗಿದ್ದರು.

ತಾಜಾ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:45 pm, Fri, 20 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ