AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಪರಿಹಾರ ಧನದ ಚೆಕ್ ವಿತರಿಸಿದ ಶಾಸಕ ಆರ್ ಮಂಜುನಾಥ್

ಕೊವಿಡ್19 ಎರಡನೇ ಅಲೆಯ ಸಂದರ್ಭದಲ್ಲಿ ಸೋಂಕಿತರಿಗೆ ಆಸ್ಪತ್ರೆ, ಐಸಿಯು, ವೆಂಟಿಲೇಟರ್, ಆಕ್ಸಿಜನ್, ರೆಮ್ಡಿಸಿವಿರ್ ಇಂಜೆಕ್ಷನ್‌ಗಳ ಕೊರತೆಯ ಸಂದರ್ಭದಲ್ಲೂ, ಪೂರೈಕೆಗಾಗಿ ಸರ್ಕಾರಕ್ಕೆ ಒತ್ತಡ ಹಾಕಿದ್ದೆ, ಅದರಂತೆ ಸರ್ಕಾರ ಕೂಡ ಮನವಿಗೆ ಸ್ಪಂದಿಸಿತ್ತು ಎಂದು ಹೇಳಿದ್ದಾರೆ.

ಕೊರೊನಾದಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಪರಿಹಾರ ಧನದ ಚೆಕ್ ವಿತರಿಸಿದ ಶಾಸಕ ಆರ್ ಮಂಜುನಾಥ್
ಪರಿಹಾರ ಧನದ ಚೆಕ್ ವಿತರಿಸಿದ ಶಾಸಕ ಆರ್ ಮಂಜುನಾಥ್
Follow us
TV9 Web
| Updated By: ganapathi bhat

Updated on:Dec 27, 2021 | 8:32 PM

ನೆಲಮಂಗಲ: ಪ್ರತಿಯೊಬ್ಬರ ಜೀವವೂ ಅಮೂಲ್ಯವಾಗಿರುವುದರಿಂದ, ಕ್ಷೇತ್ರದ ಜನತೆ ಕೊವಿಡ್19 ಲಸಿಕೆಯನ್ನು ಪಡೆದು, ಅಗತ್ಯ ಮುನ್ನೆಚ್ಚರಿಕಾ ನಿಯಮಗಳನ್ನು ಅನುಸರಿಸುವ ಮೂಲಕ ಸುರಕ್ಷಿತವಾಗಿ ಇರಬೇಕು ಎಂದು ಬೆಂಗಳೂರಿನ ಏಕೈಕ ಜೆಡಿಎಸ್ ಶಾಸಕ ಆಗಿರುವ ಆರ್. ಮಂಜುನಾಥ್ ತಿಳಿಸಿದರು. ದಾಸರಹಳ್ಳಿ ಕ್ಷೇತ್ರದಲ್ಲಿ ನಡೆದ ಕೊವಿಡ್19 ಸೋಂಕಿನಿಂದ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಪರಿಹಾರ ಧನದ ಚೆಕ್‌ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಆರ್.ಮಂಜುನಾಥ್ ಮಾತನಾಡಿದರು.

ಕೊವಿಡ್19 ಸೋಂಕು ಅತಿ ಕಡಿಮೆ ಅವಧಿಯಲ್ಲಿ ವೇಗವಾಗಿ ಹರಡುವ ಮೂಲಕ, ಜನತೆಗೆ ಆತಂಕ ಸೃಷ್ಟಿಸಿದ್ದು, ಕ್ಷೇತ್ರದ ಜನತೆ ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸುವ ಮೂಲಕ ಧೈರ್ಯದಿಂದ ಇರಬೇಕು ಎಂದು ಹೇಳಿದರು. ಕೊವಿಡ್ ಸೋಂಕಿನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ ರಾಜ್ಯ ಸರ್ಕಾರವು ನೀಡುತ್ತಿರುವ 1 ಲಕ್ಷ ರೂಪಾಯಿಗಳ ಪರಿಹಾರವನ್ನು, ಎಪಿಎಲ್ ಕುಟುಂಬದವರಿಗೂ ನೀಡಲು ಸರ್ಕಾರಕ್ಕೆ ಮನವಿ ಮಾಡಿ, ಪೂರಕವಾಗಿ ಸ್ಪಂದಿಸುವುದಾಗಿ ತಿಳಿಸಿದರಲ್ಲದೆ, ಆಧಾರ್ ಸಂಖ್ಯೆ, ವಿಳಾಸ, ಮೊಬೈಲ್ ಸಂಖ್ಯೆ ತಪ್ಪಾಗಿ ನೀಡಿರುವ ಮೃತ ಕುಟುಂಬದ ವಾರಸುದಾರರು ಸರಿಯಾದ ಮಾಹಿತಿ ನೀಡಿ, ಪರಿಹಾರ ಪಡೆಯುವಂತೆ ತಿಳಿಸಿದರು.

ದೇಶದಲ್ಲಿ 120 ಕೋಟಿ ಜನತೆಗೆ ಈಗಾಗಲೇ ಲಸಿಕಾಕರಣವಾಗಿದ್ದು, ಕರ್ನಾಟಕ ರಾಜ್ಯದಲ್ಲಿ 5 ಕೋಟಿ ಜನರಿಗೆ ಲಸಿಕೆ ನೀಡುವ ಮೂಲಕ ಶೇ.94ರಷ್ಟು ಲಸಿಕಾಕರಣ ಯಶಸ್ವಿಗೊಳಿಸಲಾಗಿದೆ ಎಂದು ತಿಳಿಸಿದರು. ಕೊವಿಡ್19 ಎರಡನೇ ಅಲೆಯ ಸಂದರ್ಭದಲ್ಲಿ ಸೋಂಕಿತರಿಗೆ ಆಸ್ಪತ್ರೆ, ಐಸಿಯು, ವೆಂಟಿಲೇಟರ್, ಆಕ್ಸಿಜನ್, ರೆಮ್ಡಿಸಿವಿರ್ ಇಂಜೆಕ್ಷನ್‌ಗಳ ಕೊರತೆಯ ಸಂದರ್ಭದಲ್ಲೂ, ಪೂರೈಕೆಗಾಗಿ ಸರ್ಕಾರಕ್ಕೆ ಒತ್ತಡ ಹಾಕಿದ್ದೆ, ಅದರಂತೆ ಸರ್ಕಾರ ಕೂಡ ಮನವಿಗೆ ಸ್ಪಂದಿಸಿತ್ತು ಎಂದು ಹೇಳಿದ್ದಾರೆ.

ಕೊವಿಡ್19 ಸೋಂಕಿನಿಂದ ಮೃತರಾದ ಕುಟುಂಬದ ವಾರಸುದಾರರಿಗೆ ಮಾನವೀಯ ದೃಷ್ಟಿಯಿಂದ ಈ ಪರಿಹಾರ ನೀಡಲಾಗುತ್ತಿದೆ ಎಂದರಲ್ಲದೆ, ಕೇಂದ್ರ ಸರ್ಕಾರದ ಮಾದರಿಯಲ್ಲಿಯೇ ರಾಜ್ಯ ಸರ್ಕಾರವು ಬಿಪಿಎಲ್ ಕುಟುಂಬದವರಿಗೆ ನೀಡುತ್ತಿರುವ ಪರಿಹಾರದಂತೆಯೇ, ಮೃತ ವ್ಯಕ್ತಿಯ ಎಪಿಎಲ್ ಕುಟುಂಬದ ವಾರಸುದಾರರಿಗೂ ಪರಿಹಾರ ನೀಡಲು ಸರ್ಕಾರಕ್ಕೆ ಮನವಿ ಮಾಡಿದರು.

ದಾಸರಹಳ್ಳಿ ವಲಯ ಜಂಟಿ ಅಯುಕ್ತರು ನರಸಿಂಹಮೂರ್ತಿ ಮಾತನಾಡಿ ಯಾವುದೇ ಮುನ್ಸೂಚನೆ ಇಲ್ಲದೆ, ದಿಢೀರ್ ಎಂದು ದೇಹವನ್ನು ಪ್ರವೇಶಿಸುವ ಕೊವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದ್ದು, ಮೃತ ವ್ಯಕ್ತಿಯ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದರಲ್ಲದೆ, ಕೋವಿಡ್‌ನ ರೂಪಾಂತರಿ ತಳಿ ಒಮಿಕ್ರಾನ್ ಕುರಿತು ಮುನ್ನೆಚ್ಚರಿಕೆ ವಹಿಸಿ ಎಂದು ತಿಳಿಸಿದರು. ಕೊರೊನಾ ವಾರಿಯರ್ಸ್‌ಗಳ ಸೇವೆಯನ್ನು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಕೊವಿಡ್19ರ ಸೋಂಕಿನಿಂದ ಮೃತರಾದ ದಾಸರಹಳ್ಳಿ ಕ್ಷೇತ್ರದ284ಜನ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಪ್ರಾಥಮಿಕವಾಗಿ ಪರಿಹಾರಧನದ ಚೆಕ್‌ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಆರ್. ಮಂಜುನಾಥ್, ಬಿಬಿಎಂಪಿ ಜಂಟಿ ಅಯುಕ್ತರು ನರಸಿಂಹಮೂರ್ತಿ,ಬಿಬಿಎಂಪಿ ಕೆಲ ಅಧೀಕಾರಿಗಳು, ಸೇರಿದಂತೆ ಕೋವಿಡ್-19‌ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದ ವಾರಸುದಾರರು ಉಪಸ್ಥಿತರಿದ್ದರು.

ಇದನ್ನೂ ಓದಿ: Bengaluru: ಸಮಗ್ರ ಅಭಿವೃದ್ಧಿಗೆ ರೋಡ್ ಮ್ಯಾಪ್ ಮಾಡಿ ಹಣ ಬಿಡುಗಡೆ ಮಾಡಲಾಗುವುದು: ಬಸವರಾಜ ಬೊಮ್ಮಾಯಿ

ಇದನ್ನೂ ಓದಿ: ಕೊವಿಡ್​ನಿಂದ ಮೃತರಾದವರ ಕುಟುಂಬಗಳಿಗೆ ಒಂದೂವರೆ ಲಕ್ಷ ಪರಿಹಾರ: ಕಂದಾಯ ಸಚಿವ ಆರ್ ಅಶೋಕ್

Published On - 8:31 pm, Mon, 27 December 21

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!