AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ಯಾಗರಾಜನಗರದ ಹಿಂದೂ ದೇವಸ್ಥಾನದ ಗೋಪುರದ ಮೇಲಿನ ಯೇಸು ವಿಗ್ರಹ ತೆರವು, ಕಾರಣವೇನು?

ಬೆಂಗಳೂರಿನ ತ್ಯಾಗರಾಜನಗರದ ದೇವಸ್ಥಾನದ ಗೋಪುರದಲ್ಲಿದ್ದ ಯೇಸು ವಿಗ್ರಹ ತೆರವುಗೊಳಿಸಲಾಗಿದೆ. ಆ ಜಾಗಕ್ಕೆ ಆದ್ಯಂತ ಪ್ರಭು ವಿಗ್ರಹ ಸ್ಥಾಪನೆ ಮಾಡಲಾಗಿದೆ.

ತ್ಯಾಗರಾಜನಗರದ ಹಿಂದೂ ದೇವಸ್ಥಾನದ ಗೋಪುರದ ಮೇಲಿನ ಯೇಸು ವಿಗ್ರಹ ತೆರವು, ಕಾರಣವೇನು?
ಹಿಂದೂ ದೇವಸ್ಥಾನದ ಗೋಪುರದ ಮೇಲಿನ ಯೇಸು ವಿಗ್ರಹ
ಆಯೇಷಾ ಬಾನು
|

Updated on:Mar 06, 2023 | 9:35 AM

Share

ಬೆಂಗಳೂರು: ಸಾಕಷ್ಟು ವಿರೋಧ ವ್ಯಕ್ತವಾದ ಬಳಿಕ ತ್ಯಾಗರಾಜನಗರದ ಹಿಂದೂ ದೇವಸ್ಥಾನದ ಗೋಪುರದ ಮೇಲಿದ್ದ ಕ್ರೈಸ್ತ ಪ್ರತಿಮೆ ತೆಗೆದು ಆ ಜಾಗಕ್ಕೆ ಆದ್ಯಂತ ಪ್ರಭು ವಿಗ್ರಹ ಸ್ಥಾಪನೆ ಮಾಡಲಾಗಿದೆ. ಆಡಳಿತ ಮಂಡಳಿ ಬೆಂಗಳೂರಿನ ತ್ಯಾಗರಾಜನಗರದ ದೇವಸ್ಥಾನದ ಗೋಪುರದಲ್ಲಿದ್ದ ಯೇಸು ವಿಗ್ರಹ ತೆರವುಗೊಳಿಸಿದೆ.

1968 ರಿಂದ ಗೋಪುರದಲ್ಲಿ ಯೇಸು ಕ್ರಿಸ್ತನ ವಿಗ್ರಹವಿತ್ತು. ಗಣೇಶನ ದೇವಸ್ಥಾನದ ಗೋಪುರದಲ್ಲಿ ಯೇಸುವಿನ ವಿಗ್ರಹ ಯಾಕೆ ಇರಬೇಕು? ಯೇಸು ವಿಗ್ರಹವನ್ನ ತೆರವುಗೊಳಿಸುವಂತೆ ನಾಲ್ಕು ವರ್ಷದಿಂದ ಹಿಂದೂ ಪರ ಸಂಘಟನೆಗಳು ಮನವಿ ಮಾಡಿದ್ದರು. ಈ ಹಿನ್ನಲೆ ಮಾರ್ಚ್ 2 ರಂದು ಯೇಸು ಕ್ರಿಸ್ತನ ವಿಗ್ರಹ ತೆರವುಗೊಳಿಸಿ, ಯೇಸು ಕ್ರಿಸ್ತ ಇದ್ದ ಜಾಗದಲ್ಲಿ ಆದ್ಯಂತ ಪ್ರಭು ವಿಗ್ರಹ ಸ್ಥಾಪನೆ ಮಾಡುವುದಾಗಿ ಗಣೇಶ ಮಂದಿರಂ ದೇವಸ್ಥಾನ ಟ್ರಸ್ಟಿ ಸುಮುಖ್ ರಾಜ್ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಆರ್ಕಿಡ್ ಇಂಟರ್ ನ್ಯಾಶನಲ್ ಶಾಲೆಯಿಂದ ದೋಖಾ; ಸಿಬಿಎಸ್​ಇ ಪಠ್ಯಕ್ರಮ ಎಂದು ಟೊಳ್ಳು ಭರವಸೆ ನೀಡಿ ಲಕ್ಷ ಲಕ್ಷ ಪೀಕಿದ ಶಾಲೆ

1968 ರಲ್ಲಿ ನಮ್ಮ ತಾತ ಈ ಗೋಪುರವನ್ನ ಸ್ಥಾಪಿಸಿದ್ರು. ಸರ್ವಧರ್ಮ ಸಹಿಷ್ಣುತೆ ಸಾರುವ ದೃಷ್ಟಿಯಿಂದ ಈ ಗೋಪುರವನ್ನ ನಿರ್ಮಿಸಿದ್ರು. ಈ ಗೋಪುರದಲ್ಲಿ ಯೇಸು ಕ್ರಿಸ್ತ ಮಾತ್ರ ಅಲ್ಲ. ಸಾಯಿಬಾಬಾ, ಬಸವಣ್ಣ, ವಿವೇಕಾನಂದ ಸೇರಿದಂತೆ ಒಂದಷ್ಟು ವಚನಾಕಾರರ ವಿಗ್ರಹ ಕೂಡ ಹಾಕಲಾಗಿತ್ತು. ಇಷ್ಟು ವರ್ಷಗಳ ಕಾಲ ಯಾರು ಇದರ ಬಗ್ಗೆ ವಿರೋಧ ವ್ಯಕ್ತಪಡಿಸಿರಲಿಲ್ಲ. ಈಗ ಒಂದಷ್ಟು ತಿಂಗಳಿನಿಂದ ಹಿಂದೂ ಪರ ಸಂಘಟನೆಗಳು ಯೇಸು ವಿಗ್ರಹ ಗೋಪುರದಲ್ಲಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ರು. ದೇವಸ್ಥಾನಕ್ಕೆ ಬಂದು ಗಲಾಟೆ ಸಹ ಮಾಡಿದ್ರು. ನಂತ್ರ ರಾತ್ರೋರಾತ್ರಿ ಬಂದು ಯೇಸುವಿನ ವಿಗ್ರಹವನ್ನ ಭಿನ್ನಗೊಳಿಸಿದ್ರು. ಈ ಹಿನ್ನಲೆ ಭಿನ್ನವಾಗಿರುವ ವಿಗ್ರಹ ಗೋಪುರದಲ್ಲಿ ಇರಬಾರದೆಂದು ಯೇಸುವಿನ ವಿಗ್ರಹ ತೆರವುಗೊಳಿಸಿ ಆದ್ಯಂತ ಪ್ರಭು ವಿಗ್ರಹ ಪ್ರತಿಷ್ಠಾಪಿಸಿದ್ದೇವೆ ಎಂದು ಸುಮುಖ್ ರಾಜ್ ತಿಳಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:35 am, Mon, 6 March 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?