AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಧಿ ಮೀರಿ ಜೆಟ್ ಲ್ಯಾಗ್ ಪಬ್ ಓಪನ್​: ಸುಭ್ರಮಣ್ಯ ನಗರ ಠಾಣೆ ಪೊಲೀಸರಿಗೆ ನೋಟಿಸ್

ಅವಧಿ ಮೀರಿ ಪಬ್​ ತೆರೆದಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಸುಬ್ರಹ್ಮಣ್ಯ ನಗರ ಠಾಣೆ ಪೊಲೀಸರ​​ ವಿರುದ್ಧ ತನಿಖೆ ನಡೆಸುವಂತೆ ಉತ್ತರ ವಿಭಾಗ ಡಿಸಿಪಿ ಸೈದುಲು ಅಡಾವತ್ ಅವರು ಮಲ್ಲೇಶ್ವರಂ ಠಾಣೆಯ ಎಸಿಪಿಗೆ ಆದೇಶಿಸಿದ್ದಾರೆ. ಸುಬ್ರಹ್ಮಣ್ಯ ನಗರ ಪೊಲೀಸ್​ ಠಾಣಾಧಿಕಾರಿ, ಸಬ್ ಇನ್ಸ್​ಪೆಕ್ಟರ್, ನಾಲ್ವರು ಕಾನ್ಸ್​ಟೇಬಲ್​ಗಳಿಗೆ ನೋಟಿಸ್ ನೀಡಲಾಗಿದೆ.

ಅವಧಿ ಮೀರಿ ಜೆಟ್ ಲ್ಯಾಗ್ ಪಬ್ ಓಪನ್​: ಸುಭ್ರಮಣ್ಯ ನಗರ ಠಾಣೆ ಪೊಲೀಸರಿಗೆ ನೋಟಿಸ್
ಸುಬ್ರಹ್ಮಣ್ಯ ನಗರ ಪೊಲೀಸ್​ ಠಾಣೆ
ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on: Jan 08, 2024 | 12:49 PM

Share

ಬೆಂಗಳೂರು, ಜನವರಿ 08: ಅವಧಿ ಮೀರಿ ಪಬ್ (PUB)​ ತೆರೆದಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಸುಬ್ರಹ್ಮಣ್ಯ ನಗರ ಠಾಣೆ ಪೊಲೀಸರ​​ (Police) ವಿರುದ್ಧ ತನಿಖೆ ನಡೆಸುವಂತೆ ಉತ್ತರ ವಿಭಾಗ ಡಿಸಿಪಿ ಸೈದುಲು ಅಡಾವತ್ ಅವರು ಮಲ್ಲೇಶ್ವರಂ ಠಾಣೆಯ (Malleshwaram Police Station) ಎಸಿಪಿಗೆ ಆದೇಶಿಸಿದ್ದಾರೆ. ಅದರಂತೆ ಮಲ್ಲೇಶ್ವರಂ ಠಾಣೆಯ ಎಸಿಪಿ ಸುಬ್ರಹ್ಮಣ್ಯ ನಗರ ಠಾಣೆಯ ಆರು ಜನ ಪೊಲೀಸರಿಗೆ ನೋಟಿಸ್​ ನೀಡಿದ್ದಾರೆ. ಠಾಣಾಧಿಕಾರಿ, ಸಬ್ ಇನ್ಸ್​ಪೆಕ್ಟರ್, ನಾಲ್ವರು ಕಾನ್ಸ್​ಟೇಬಲ್​ಗಳಿಗೆ ನೋಟಿಸ್ ನೀಡಲಾಗಿದೆ.

ಜನವರಿ 3 ರಂದು ಮಧ್ಯರಾತ್ರಿ ಕಳೆದು ಮರುದಿನ ಬೆಳಗಿನ ಜಾವದವರೆಗೆ ಪಾರ್ಟಿ ಯಾವ ರೀತಿ ನಡೆದಿತ್ತು. ಯಾರೆಲ್ಲಾ ಬಂದಿದ್ದರು, ಅವಧಿ ಮೀರಿ ಪಬ್​ ತೆರೆಯಲು ಅವಕಾಶ ನೀಡಿದ್ದೇಕೆ. ಘಟನೆ ಬಳೆಕಿಗೆ ಬಂದರೂ ಕ್ರಮ ಏಕೆ ಕೈಗೊಂಡಿಲ್ಲ ಎಂದು ವಿವರಣೆ ಕೇಳಿ ನೋಟಿಸ್​ ಜಾರಿ ಮಾಡಿದ್ದಾರೆ.

ಏನಿದು ಘಟನೆ

ಕಾಟೇರ ಸಿನಿಮಾ ರಿಲೀಸ್ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇದರ ಸಕ್ಸಸ್ ಸೆಲೆಬ್ರೇಷನ್ ಬಳಿಕ ದರ್ಶನ್, ಅಭಿಷೇಕ್ ಅಂಬರೀಷ್, ಧನಂಜಯ್ ಸೇರಿ ಅನೇಕರು ಬೆಂಗಳೂರಿನ ಒರಾಯನ್‌ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್​​ನಲ್ಲಿ ಪಾರ್ಟಿ ಮಾಡಿದ್ದರು. ಜನವರಿ 3 ರಂದು ಮಧ್ಯರಾತ್ರಿ ಕಳೆದು ಮರುದಿನ ಬೆಳಗಿನ ಜಾವ 3:15ರ ವರೆಗೆ ಪಾರ್ಟಿ ಮಾಡಿದ್ದರು.

ಇದನ್ನೂ ಓದಿ: ಸಿನಿಮಾ ಸಕ್ಸಸ್​​ ಖುಷಿಯಲ್ಲಿ ಮುಂಜಾನೆವರೆಗೂ ಸ್ಟಾರ್ ಹೀರೋ ಪಾರ್ಟಿ; ಪಬ್ ವಿರುದ್ಧ ಎಫ್​ಐಆರ್  

ನಿಯಮದ ಪ್ರಕಾರ ತಡರಾತ್ರಿ 1 ಗಂಟೆವರೆಗೆ ಮಾತ್ರ ಪಬ್ ಓಪನ್ ಇಡಲು ಅವಕಾಶ ಇದೆ. ಆದರೆ, ನಿಯಮವನ್ನು ಇಲ್ಲಿ ಮೀರಲಾಗಿದೆ. ಹೀಗಾಗಿ ಪಬ್ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪಾರ್ಟಿಯಲ್ಲಿ ಭಾಗಿಯಾಗಿದ್ದ ನಟ ದರ್ಶನ್, ಅಭಿಷೇಕ್, ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಅವರಿಗೆ ಸುಭ್ರಮಣ್ಯ ನಗರ ಠಾಣೆ ಪೊಲೀಸರು ಜಾರಿ ಮಾಡಿದ್ದಾರೆ. ನಟರಾದ ಡಾಲಿ ಧನಂಜಯ್, ಚಿಕ್ಕಣ್ಣ, ನಿನಾಸಂ ಸತೀಶ್ ಹಾಗೂ ನಿರ್ದೇಶಕ ತರುಣ್ ಸುಧೀರ್ ಅವರಿಗೂ ನೋಟಿಸ್​ ನೀಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ