AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC: ಅವೈಜ್ಞಾನಿಕ ಆದೇಶ ಹೊರಡಿಸಿ ಆರು ವರ್ಷವಾದರೂ ತಪ್ಪು ತಿದ್ದಿಕೊಳ್ಳದ ಕೆಪಿಎಸ್​ಸಿ

ಈ ನೇಮಕಾತಿಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಪ್ರಭಾವಿಗಳು ಮತ್ತು ಅಧಿಕಾರಿಗಳಿಗೆ ಹತ್ತಿರದವರಿಗೆ ಹುದ್ದೆ ನೀಡುತ್ತಿರುವ ಆರೋಪ ಮಾಡಲಾಗಿದೆ.

KPSC: ಅವೈಜ್ಞಾನಿಕ ಆದೇಶ ಹೊರಡಿಸಿ ಆರು ವರ್ಷವಾದರೂ ತಪ್ಪು ತಿದ್ದಿಕೊಳ್ಳದ ಕೆಪಿಎಸ್​ಸಿ
ಕರ್ನಾಟಕ ಲೋಕಸೇವಾ ಆಯೋಗ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 26, 2022 | 11:05 AM

Share

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission – KPSC) 2016ರಲ್ಲಿ ಅವೈಜ್ಞಾನಿಕವಾಗಿ ಹೊರಡಿಸಿದ್ದ ತಪ್ಪು ಆದೇಶವನ್ನು ಆರು ವರ್ಷ ಕಳೆದರೂ ತಿದ್ದಿಕೊಳ್ಳುವ ಆಸಕ್ತಿ ತೋರುತ್ತಿಲ್ಲ. ಆರ್​ಟಿಒ ಬ್ರೇಕ್ ಇನ್​ಸ್ಪೆಕ್ಟರ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದ ಕೆಪಿಎಸ್​ಸಿ, ‘ಪೆಟ್ರೋಲ್ ವಾಹನದಲ್ಲಿ ಹೆವಿ ಲೈಸೆನ್ಸ್ ಇರಬೇಕು’ ಎಂದು ಸೂಚಿಸಿತ್ತು.

ಪೆಟ್ರೋಲ್ ವಾಹನಗಳ ವಿಭಾಗದಲ್ಲಿ ಬೃಹತ್ ವಾಹನಗಳು ಬರುವುದಿಲ್ಲ ಎನ್ನುವ ಕನಿಷ್ಠ ಜ್ಞಾನವಿಲ್ಲದೆ ಈ ಆದೇಶ ಹೊರಡಿಸಲಾಗಿತ್ತು. ಪೆಟ್ರೋಲ್ ವಾಹನದಲ್ಲಿ ಹೆವಿ ವೆಹಿಕಲ್ ಲೈಸೆಸ್ಸ್ ಇಲ್ಲ ಎನ್ನುವ ಕಾರಣಕ್ಕೆ ಹಲವು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಹಿಂದೇಟು ಹಾಕಿದ್ದರು.

ಇದೀಗ ಏಕಾಏಕಿಯಾಗಿ ಕೆಎಸ್ಆರ್​ಟಿಸಿಯಲ್ಲಿ ಡೀಸೆಲ್ ವೆಹಿಕಲ್​ನಲ್ಲಿ ತರಬೇತಿ ಮುಗಿಸಿರುವವರ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ಈ ನೇಮಕಾತಿಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಪ್ರಭಾವಿಗಳು ಮತ್ತು ಅಧಿಕಾರಿಗಳಿಗೆ ಹತ್ತಿರದವರಿಗೆ ಹುದ್ದೆ ನೀಡುತ್ತಿರುವ ಆರೋಪ ಮಾಡಲಾಗಿದೆ. ಹೀಗಾಗಿ ಆರ್​ಟಿಒ ಬ್ರೇಕ್ ಇನ್​ಸ್ಪೆಕ್ಟರ್ ಹುದ್ದೆಯ ಆಕಾಂಕ್ಷಿಗಳು ಕೆಪಿಎಸ್​ಸಿ ವಿರುದ್ಧ ತಿರುಗಿಬಿದ್ದಿದ್ದಾರೆ.

ನ್ಯಾಯಾಲಯ ಸಹ ಪೆಟ್ರೋಲ್ ವಾಹನಗಳಲ್ಲಿ ಭಾರಿ ವಾಹನ ಇರುವುದಿಲ್ಲ ಎಂದು ತೀರ್ಪು ಕೊಟ್ಟಿದೆ. ಆದರೂ ವಂಚಿತ ಅಭ್ಯರ್ಥಿಗಳಿಗೆ ಅವಕಾಶ ಕೊಟ್ಟಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ. ಕೆಪಿಎಸ್​ಸಿಯ ಈ ನಡೆಯ ಹಿಂದೆ ಹುಟ್ಟಿಕೊಂಡಿದೆ ನೂರೆಂಟು ಅನುಮಾನಗಳು ಹುಟ್ಟಿಕೊಂಡಿವೆ.

Published On - 11:05 am, Tue, 26 July 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ