AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC: ಅವೈಜ್ಞಾನಿಕ ಆದೇಶ ಹೊರಡಿಸಿ ಆರು ವರ್ಷವಾದರೂ ತಪ್ಪು ತಿದ್ದಿಕೊಳ್ಳದ ಕೆಪಿಎಸ್​ಸಿ

ಈ ನೇಮಕಾತಿಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಪ್ರಭಾವಿಗಳು ಮತ್ತು ಅಧಿಕಾರಿಗಳಿಗೆ ಹತ್ತಿರದವರಿಗೆ ಹುದ್ದೆ ನೀಡುತ್ತಿರುವ ಆರೋಪ ಮಾಡಲಾಗಿದೆ.

KPSC: ಅವೈಜ್ಞಾನಿಕ ಆದೇಶ ಹೊರಡಿಸಿ ಆರು ವರ್ಷವಾದರೂ ತಪ್ಪು ತಿದ್ದಿಕೊಳ್ಳದ ಕೆಪಿಎಸ್​ಸಿ
ಕರ್ನಾಟಕ ಲೋಕಸೇವಾ ಆಯೋಗ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 26, 2022 | 11:05 AM

Share

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission – KPSC) 2016ರಲ್ಲಿ ಅವೈಜ್ಞಾನಿಕವಾಗಿ ಹೊರಡಿಸಿದ್ದ ತಪ್ಪು ಆದೇಶವನ್ನು ಆರು ವರ್ಷ ಕಳೆದರೂ ತಿದ್ದಿಕೊಳ್ಳುವ ಆಸಕ್ತಿ ತೋರುತ್ತಿಲ್ಲ. ಆರ್​ಟಿಒ ಬ್ರೇಕ್ ಇನ್​ಸ್ಪೆಕ್ಟರ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದ ಕೆಪಿಎಸ್​ಸಿ, ‘ಪೆಟ್ರೋಲ್ ವಾಹನದಲ್ಲಿ ಹೆವಿ ಲೈಸೆನ್ಸ್ ಇರಬೇಕು’ ಎಂದು ಸೂಚಿಸಿತ್ತು.

ಪೆಟ್ರೋಲ್ ವಾಹನಗಳ ವಿಭಾಗದಲ್ಲಿ ಬೃಹತ್ ವಾಹನಗಳು ಬರುವುದಿಲ್ಲ ಎನ್ನುವ ಕನಿಷ್ಠ ಜ್ಞಾನವಿಲ್ಲದೆ ಈ ಆದೇಶ ಹೊರಡಿಸಲಾಗಿತ್ತು. ಪೆಟ್ರೋಲ್ ವಾಹನದಲ್ಲಿ ಹೆವಿ ವೆಹಿಕಲ್ ಲೈಸೆಸ್ಸ್ ಇಲ್ಲ ಎನ್ನುವ ಕಾರಣಕ್ಕೆ ಹಲವು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಹಿಂದೇಟು ಹಾಕಿದ್ದರು.

ಇದೀಗ ಏಕಾಏಕಿಯಾಗಿ ಕೆಎಸ್ಆರ್​ಟಿಸಿಯಲ್ಲಿ ಡೀಸೆಲ್ ವೆಹಿಕಲ್​ನಲ್ಲಿ ತರಬೇತಿ ಮುಗಿಸಿರುವವರ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ಈ ನೇಮಕಾತಿಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಪ್ರಭಾವಿಗಳು ಮತ್ತು ಅಧಿಕಾರಿಗಳಿಗೆ ಹತ್ತಿರದವರಿಗೆ ಹುದ್ದೆ ನೀಡುತ್ತಿರುವ ಆರೋಪ ಮಾಡಲಾಗಿದೆ. ಹೀಗಾಗಿ ಆರ್​ಟಿಒ ಬ್ರೇಕ್ ಇನ್​ಸ್ಪೆಕ್ಟರ್ ಹುದ್ದೆಯ ಆಕಾಂಕ್ಷಿಗಳು ಕೆಪಿಎಸ್​ಸಿ ವಿರುದ್ಧ ತಿರುಗಿಬಿದ್ದಿದ್ದಾರೆ.

ನ್ಯಾಯಾಲಯ ಸಹ ಪೆಟ್ರೋಲ್ ವಾಹನಗಳಲ್ಲಿ ಭಾರಿ ವಾಹನ ಇರುವುದಿಲ್ಲ ಎಂದು ತೀರ್ಪು ಕೊಟ್ಟಿದೆ. ಆದರೂ ವಂಚಿತ ಅಭ್ಯರ್ಥಿಗಳಿಗೆ ಅವಕಾಶ ಕೊಟ್ಟಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ. ಕೆಪಿಎಸ್​ಸಿಯ ಈ ನಡೆಯ ಹಿಂದೆ ಹುಟ್ಟಿಕೊಂಡಿದೆ ನೂರೆಂಟು ಅನುಮಾನಗಳು ಹುಟ್ಟಿಕೊಂಡಿವೆ.

Published On - 11:05 am, Tue, 26 July 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್