AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC: ಅವೈಜ್ಞಾನಿಕ ಆದೇಶ ಹೊರಡಿಸಿ ಆರು ವರ್ಷವಾದರೂ ತಪ್ಪು ತಿದ್ದಿಕೊಳ್ಳದ ಕೆಪಿಎಸ್​ಸಿ

ಈ ನೇಮಕಾತಿಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಪ್ರಭಾವಿಗಳು ಮತ್ತು ಅಧಿಕಾರಿಗಳಿಗೆ ಹತ್ತಿರದವರಿಗೆ ಹುದ್ದೆ ನೀಡುತ್ತಿರುವ ಆರೋಪ ಮಾಡಲಾಗಿದೆ.

KPSC: ಅವೈಜ್ಞಾನಿಕ ಆದೇಶ ಹೊರಡಿಸಿ ಆರು ವರ್ಷವಾದರೂ ತಪ್ಪು ತಿದ್ದಿಕೊಳ್ಳದ ಕೆಪಿಎಸ್​ಸಿ
ಕರ್ನಾಟಕ ಲೋಕಸೇವಾ ಆಯೋಗ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jul 26, 2022 | 11:05 AM

Share

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission – KPSC) 2016ರಲ್ಲಿ ಅವೈಜ್ಞಾನಿಕವಾಗಿ ಹೊರಡಿಸಿದ್ದ ತಪ್ಪು ಆದೇಶವನ್ನು ಆರು ವರ್ಷ ಕಳೆದರೂ ತಿದ್ದಿಕೊಳ್ಳುವ ಆಸಕ್ತಿ ತೋರುತ್ತಿಲ್ಲ. ಆರ್​ಟಿಒ ಬ್ರೇಕ್ ಇನ್​ಸ್ಪೆಕ್ಟರ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದ ಕೆಪಿಎಸ್​ಸಿ, ‘ಪೆಟ್ರೋಲ್ ವಾಹನದಲ್ಲಿ ಹೆವಿ ಲೈಸೆನ್ಸ್ ಇರಬೇಕು’ ಎಂದು ಸೂಚಿಸಿತ್ತು.

ಪೆಟ್ರೋಲ್ ವಾಹನಗಳ ವಿಭಾಗದಲ್ಲಿ ಬೃಹತ್ ವಾಹನಗಳು ಬರುವುದಿಲ್ಲ ಎನ್ನುವ ಕನಿಷ್ಠ ಜ್ಞಾನವಿಲ್ಲದೆ ಈ ಆದೇಶ ಹೊರಡಿಸಲಾಗಿತ್ತು. ಪೆಟ್ರೋಲ್ ವಾಹನದಲ್ಲಿ ಹೆವಿ ವೆಹಿಕಲ್ ಲೈಸೆಸ್ಸ್ ಇಲ್ಲ ಎನ್ನುವ ಕಾರಣಕ್ಕೆ ಹಲವು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಹಿಂದೇಟು ಹಾಕಿದ್ದರು.

ಇದೀಗ ಏಕಾಏಕಿಯಾಗಿ ಕೆಎಸ್ಆರ್​ಟಿಸಿಯಲ್ಲಿ ಡೀಸೆಲ್ ವೆಹಿಕಲ್​ನಲ್ಲಿ ತರಬೇತಿ ಮುಗಿಸಿರುವವರ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ಈ ನೇಮಕಾತಿಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಪ್ರಭಾವಿಗಳು ಮತ್ತು ಅಧಿಕಾರಿಗಳಿಗೆ ಹತ್ತಿರದವರಿಗೆ ಹುದ್ದೆ ನೀಡುತ್ತಿರುವ ಆರೋಪ ಮಾಡಲಾಗಿದೆ. ಹೀಗಾಗಿ ಆರ್​ಟಿಒ ಬ್ರೇಕ್ ಇನ್​ಸ್ಪೆಕ್ಟರ್ ಹುದ್ದೆಯ ಆಕಾಂಕ್ಷಿಗಳು ಕೆಪಿಎಸ್​ಸಿ ವಿರುದ್ಧ ತಿರುಗಿಬಿದ್ದಿದ್ದಾರೆ.

ನ್ಯಾಯಾಲಯ ಸಹ ಪೆಟ್ರೋಲ್ ವಾಹನಗಳಲ್ಲಿ ಭಾರಿ ವಾಹನ ಇರುವುದಿಲ್ಲ ಎಂದು ತೀರ್ಪು ಕೊಟ್ಟಿದೆ. ಆದರೂ ವಂಚಿತ ಅಭ್ಯರ್ಥಿಗಳಿಗೆ ಅವಕಾಶ ಕೊಟ್ಟಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ. ಕೆಪಿಎಸ್​ಸಿಯ ಈ ನಡೆಯ ಹಿಂದೆ ಹುಟ್ಟಿಕೊಂಡಿದೆ ನೂರೆಂಟು ಅನುಮಾನಗಳು ಹುಟ್ಟಿಕೊಂಡಿವೆ.

Published On - 11:05 am, Tue, 26 July 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!