AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ಫೆ.10 ರಿಂದ 24ರವರೆಗೆ ವಿಧಾನಮಂಡಲ ಜಂಟಿ ಮತ್ತು ಬಜೆಟ್​ ಅಧಿವೇಶನ

ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಫೆ. 10ರಿಂದ 24ರವರೆಗೆ ನಡೆಯಲಿದೆ. ಅಂದು ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಸಭಾಂಗಣದಲ್ಲಿ ಜಂಟಿ ಅಧಿವೇಶನ ಪ್ರಾರಂಭವಾಗಲಿದೆ.

Karnataka Budget 2023: ಫೆ.10 ರಿಂದ 24ರವರೆಗೆ ವಿಧಾನಮಂಡಲ ಜಂಟಿ ಮತ್ತು ಬಜೆಟ್​ ಅಧಿವೇಶನ
ಪ್ರಾತಿನಿಧಿಕ ಚಿತ್ರImage Credit source: eesanje.com
TV9 Web
| Edited By: |

Updated on:Feb 10, 2023 | 8:50 AM

Share

ಬೆಂಗಳೂರು: ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ (legislature) ಫೆ. 10ರಿಂದ 24ರವರೆಗೆ ನಡೆಯಲಿದೆ. ಅಂದು ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಸಭಾಂಗಣದಲ್ಲಿ ಜಂಟಿ ಅಧಿವೇಶನ ಪ್ರಾರಂಭವಾಗಲಿದ್ದು, ರಾಜ್ಯಪಾಲ ಥಾವರ್​ ಚಂದ ಗೆಹ್ಲೋಟ್​ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ವರ್ಷದ ಮೊದಲ ಅಧಿವೇಶನ ಇದಾಗಿದೆ. ರಾಜ್ಯಪಾಲ ಥಾವರ್​ ಚಂದ ಗೆಹ್ಲೋಟ್ ಅವರು ಜಂಟಿ ಅಂಧಿವೇಶನದಲ್ಲಿ ರಾಜ್ಯ ಸರ್ಕಾರದ ಸಾಧನೆಗಳನ್ನು ಪ್ರಸ್ತಾಪಿಸಲಿದ್ದಾರೆ. ಜೊತೆಗೆ ಈ ವರ್ಷದ ಸರ್ಕಾರದ ಮುನ್ನೋಟದ ಬಗ್ಗೆ ಭಾಷಣದಲ್ಲಿ ಪ್ರಸ್ತಾಪ ಮಾಡುವುದು ರೂಢಿಯಲ್ಲಿದೆ.

ಸಿಎಂ ಬಸವರಾಜ ಬೊಮ್ಮಾಯಿ‌ ಬಜೆಟ್ ಮಂಡನೆ

ಫೆ. 17 ರಂದು ಸಿಎಂ ಬಸವರಾಜ ಬೊಮ್ಮಾಯಿ‌ ಬಜೆಟ್ ಮಂಡನೆ ಮಾಡಲಿದ್ದಾರೆ. ಚುನಾವಣಾ ವರ್ಷವಾಗಿರುವುರಿಂದ ಸಿಎಂ ಬೊಮ್ಮಾಯಿ ಜನಪ್ರಿಯ ಕಾರ್ಯಕ್ರಮ ಮತ್ತು ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಫೆ.10ರಂದು ಅಧಿವೇಶನ ಪ್ರಾರಂಭವಾಗಿ ಫೆಬ್ರವರಿ ಅಂತ್ಯದವರೆಗೂ ಅಧಿವೇಶನ ನಡೆಯಲಿದೆ. ಬಜೆಟ್ ಮಂಡನೆ ಬಳಿಕ ಉಭಯ ಸದನಗಳಲ್ಲಿ ಬಜೆಟ್ ಮೇಲೆ ಸುದೀರ್ಘ ಚರ್ಚೆ ನಡೆಯಲಿದೆ. ಬಳಿಕ ಸರ್ಕಾರ ಶಾಸಕರು ಮಾಡಿದ ಚರ್ಚೆಗೆ ಉತ್ತರ ನೀಡಲಿದ್ದಾರೆ. ಆ ನಂತರ ಉಭಯ ಸದನಗಳಲ್ಲಿ ಮುಂಗಡ ಪತ್ರಕ್ಕೆ ಅನುಮೋದನೆ ಪಡೆಯುವುದು ವಾಡಿಕೆ.

ಇದನ್ನೂ ಓದಿ: Budget 2023 ಮಧ್ಯಮ ವರ್ಗಕ್ಕೆ ಬಜೆಟ್​​​ನಲ್ಲಿ ಏನೇನಿರುತ್ತದೆ?; ನಿರ್ಮಲಾ ಸೀತಾರಾಮನ್ ಹೇಳಿದ್ದಿಷ್ಟು

ಚುನಾವಣಾ ವರ್ಷದಲ್ಲಿ ಪೂರ್ಣ ಪ್ರಮಾಣದ ಆಯವ್ಯಯ ಮಂಡಿಸದೇ ಜೂನ್ ಅಂತ್ಯದವರೆಗೆ ಲೇಖಾನುದಾನ ಪಡೆಯುವ ಸಂಪ್ರದಾಯವಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:19 pm, Wed, 25 January 23

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?