AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ಫೆ.10 ರಿಂದ 24ರವರೆಗೆ ವಿಧಾನಮಂಡಲ ಜಂಟಿ ಮತ್ತು ಬಜೆಟ್​ ಅಧಿವೇಶನ

ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಫೆ. 10ರಿಂದ 24ರವರೆಗೆ ನಡೆಯಲಿದೆ. ಅಂದು ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಸಭಾಂಗಣದಲ್ಲಿ ಜಂಟಿ ಅಧಿವೇಶನ ಪ್ರಾರಂಭವಾಗಲಿದೆ.

Karnataka Budget 2023: ಫೆ.10 ರಿಂದ 24ರವರೆಗೆ ವಿಧಾನಮಂಡಲ ಜಂಟಿ ಮತ್ತು ಬಜೆಟ್​ ಅಧಿವೇಶನ
ಪ್ರಾತಿನಿಧಿಕ ಚಿತ್ರImage Credit source: eesanje.com
TV9 Web
| Edited By: |

Updated on:Feb 10, 2023 | 8:50 AM

Share

ಬೆಂಗಳೂರು: ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ (legislature) ಫೆ. 10ರಿಂದ 24ರವರೆಗೆ ನಡೆಯಲಿದೆ. ಅಂದು ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಸಭಾಂಗಣದಲ್ಲಿ ಜಂಟಿ ಅಧಿವೇಶನ ಪ್ರಾರಂಭವಾಗಲಿದ್ದು, ರಾಜ್ಯಪಾಲ ಥಾವರ್​ ಚಂದ ಗೆಹ್ಲೋಟ್​ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ವರ್ಷದ ಮೊದಲ ಅಧಿವೇಶನ ಇದಾಗಿದೆ. ರಾಜ್ಯಪಾಲ ಥಾವರ್​ ಚಂದ ಗೆಹ್ಲೋಟ್ ಅವರು ಜಂಟಿ ಅಂಧಿವೇಶನದಲ್ಲಿ ರಾಜ್ಯ ಸರ್ಕಾರದ ಸಾಧನೆಗಳನ್ನು ಪ್ರಸ್ತಾಪಿಸಲಿದ್ದಾರೆ. ಜೊತೆಗೆ ಈ ವರ್ಷದ ಸರ್ಕಾರದ ಮುನ್ನೋಟದ ಬಗ್ಗೆ ಭಾಷಣದಲ್ಲಿ ಪ್ರಸ್ತಾಪ ಮಾಡುವುದು ರೂಢಿಯಲ್ಲಿದೆ.

ಸಿಎಂ ಬಸವರಾಜ ಬೊಮ್ಮಾಯಿ‌ ಬಜೆಟ್ ಮಂಡನೆ

ಫೆ. 17 ರಂದು ಸಿಎಂ ಬಸವರಾಜ ಬೊಮ್ಮಾಯಿ‌ ಬಜೆಟ್ ಮಂಡನೆ ಮಾಡಲಿದ್ದಾರೆ. ಚುನಾವಣಾ ವರ್ಷವಾಗಿರುವುರಿಂದ ಸಿಎಂ ಬೊಮ್ಮಾಯಿ ಜನಪ್ರಿಯ ಕಾರ್ಯಕ್ರಮ ಮತ್ತು ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಫೆ.10ರಂದು ಅಧಿವೇಶನ ಪ್ರಾರಂಭವಾಗಿ ಫೆಬ್ರವರಿ ಅಂತ್ಯದವರೆಗೂ ಅಧಿವೇಶನ ನಡೆಯಲಿದೆ. ಬಜೆಟ್ ಮಂಡನೆ ಬಳಿಕ ಉಭಯ ಸದನಗಳಲ್ಲಿ ಬಜೆಟ್ ಮೇಲೆ ಸುದೀರ್ಘ ಚರ್ಚೆ ನಡೆಯಲಿದೆ. ಬಳಿಕ ಸರ್ಕಾರ ಶಾಸಕರು ಮಾಡಿದ ಚರ್ಚೆಗೆ ಉತ್ತರ ನೀಡಲಿದ್ದಾರೆ. ಆ ನಂತರ ಉಭಯ ಸದನಗಳಲ್ಲಿ ಮುಂಗಡ ಪತ್ರಕ್ಕೆ ಅನುಮೋದನೆ ಪಡೆಯುವುದು ವಾಡಿಕೆ.

ಇದನ್ನೂ ಓದಿ: Budget 2023 ಮಧ್ಯಮ ವರ್ಗಕ್ಕೆ ಬಜೆಟ್​​​ನಲ್ಲಿ ಏನೇನಿರುತ್ತದೆ?; ನಿರ್ಮಲಾ ಸೀತಾರಾಮನ್ ಹೇಳಿದ್ದಿಷ್ಟು

ಚುನಾವಣಾ ವರ್ಷದಲ್ಲಿ ಪೂರ್ಣ ಪ್ರಮಾಣದ ಆಯವ್ಯಯ ಮಂಡಿಸದೇ ಜೂನ್ ಅಂತ್ಯದವರೆಗೆ ಲೇಖಾನುದಾನ ಪಡೆಯುವ ಸಂಪ್ರದಾಯವಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:19 pm, Wed, 25 January 23

VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು