AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರಮಂಗಲದಲ್ಲಿ ಐಷಾರಾಮಿ ಕಾರು ಅಪಘಾತ, ಎಸಿಪಿಯಿಂದ ತನಿಖೆ: ಸಂಚಾರಿ ಆಯುಕ್ತ ರವಿಕಾಂತೇಗೌಡ ಹೇಳಿದ್ದೇನು?

ಅಪಘಾತಕ್ಕೆ ಅತಿ ವೇಗವೇ ಕಾರಣ. ನಿರ್ಲಕ್ಷ್ಯ, ವೇಗದ ಚಾಲನೆಯಿಂದ ಅಪಘಾತ ಸಂಭವಿಸಿದೆ. ಫುಟ್‌ಪಾತ್‌ ಹತ್ತಿ 2 ಬೊಲ್ಲಾರ್ಡ್ಸ್‌ಗೆ ಕಾರು ಡಿಕ್ಕಿಯಾಗಿದೆ. ಬಳಿಕ ಪಕ್ಕದ ಕಟ್ಟಡದ ಗೋಡೆಗೂ ಗುದ್ದಿದೆ ಎಂದು ಸಂಚಾರ ವಿಭಾಗದ ಜಂಟಿ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ.

ಕೋರಮಂಗಲದಲ್ಲಿ ಐಷಾರಾಮಿ ಕಾರು ಅಪಘಾತ, ಎಸಿಪಿಯಿಂದ ತನಿಖೆ: ಸಂಚಾರಿ ಆಯುಕ್ತ ರವಿಕಾಂತೇಗೌಡ ಹೇಳಿದ್ದೇನು?
ಬೆಂಗಳೂರು ಕಾರು ಅಪಘಾತ
Follow us
TV9 Web
| Updated By: Skanda

Updated on:Aug 31, 2021 | 7:03 AM

ಬೆಂಗಳೂರು: ಬೆಂಗಳೂರಿನ ಕೋರಮಂಗಲದಲ್ಲಿ ತಡರಾತ್ರಿ ನಡೆದ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಾರ ವಿಭಾಗದ ಜಂಟಿ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಟಿವಿ9ಗೆ ಹೇಳಿಕೆ ನೀಡಿದ್ದಾರೆ. ತಡರಾತ್ರಿ 1.45ರಿಂದ 2 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ 7 ಜನರೂ ಮೃತಪಟ್ಟಿದ್ದಾರೆ. 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆಗೆ ದಾಖಲಿಸಿದ ವೇಳೆ ಮೃತಪಟ್ಟಿದ್ದಾರೆ. ಅಪಘಾತಕ್ಕೆ ಅತಿ ವೇಗವೇ ಕಾರಣ. ನಿರ್ಲಕ್ಷ್ಯ, ವೇಗದ ಚಾಲನೆಯಿಂದ ಅಪಘಾತ ಸಂಭವಿಸಿದೆ. ಫುಟ್‌ಪಾತ್‌ ಹತ್ತಿ 2 ಬೊಲ್ಲಾರ್ಡ್ಸ್‌ಗೆ ಕಾರು ಡಿಕ್ಕಿಯಾಗಿದೆ. ಬಳಿಕ ಪಕ್ಕದ ಕಟ್ಟಡದ ಗೋಡೆಗೂ ಗುದ್ದಿದೆ ಎಂದು ಮಾಹಿತಿ ನೀಡಿದ್ದಾರೆ.

ಕಾರಿನಲ್ಲಿದ್ದವರು ಎಲ್ಲಿಂದ ಬರುತ್ತಿದ್ದರು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಮದ್ಯ ಸೇವಿಸಿದ್ದರಾ ಎಂಬ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ. ಎಲ್ಲಾ ಬೀದಿಗಳಲ್ಲಿ ನಿರ್ಜನವಾಗಿದ್ದಾಗ ಚಾಲಕ ವೇಗವಾಗಿ ಓಡಿಸಿದ್ದಾನೆ. ಎಲ್ಲಿಗೆ ಹೋಗ್ತಿದ್ರು, ಎಲ್ಲಿಂದ ಬರ್ತಾ ಇದ್ರು ಎಂಬ ಬಗ್ಗೆ ತನಿಖೆಯಾಗುತ್ತಿದೆ ಎಂದಿದ್ದಾರೆ.

ಕಾರಿನ ಮುಂದಿನ ಸೀಟ್‌ನಲ್ಲಿ ಮೂವರು ಕುಳಿತಿದ್ದರು ಹಾಗೂ ಹಿಂಬದಿ ಸೀಟ್‌ನಲ್ಲಿ ನಾಲ್ವರು ಕುಳಿತಿದ್ದರು. ಕಾರಿನಲ್ಲಿದ್ದ 7 ಜನರಲ್ಲಿ ಯಾರೂ ಸೀಟ್ ಬೆಲ್ಟ್ ಹಾಕಿರಲಿಲ್ಲ. ಇದರಿಂದ ಕಾರಿನಲ್ಲಿದ್ದ ಏರ್‌ಬ್ಯಾಗ್ ಸಹ ಓಪನ್ ಆಗಿಲ್ಲ ಎಂದು ಬೆಂಗಳೂರಿನಲ್ಲಿ ಡಾ.ಬಿ.ಆರ್.ರವಿಕಾಂತೇಗೌಡ ಹೇಳಿದ್ದಾರೆ. ಮೃತರೆಲ್ಲರೂ 25ರಿಂದ 30 ವರ್ಷ ವಯಸ್ಸಿನವರು. ಓರ್ವ ದಂಪತಿ ಸಹ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ. ಬೆಂಗಳೂರಲ್ಲಿ ಕೆಲಸ ಮಾಡಿಕೊಂಡು ಕೆಲವರು ಪಿಜಿಯಲ್ಲಿದ್ದರು. ಮೃತರೆಲ್ಲರೂ ಸ್ನೇಹಿತರು, 20 ರಿಂದ 30 ವರ್ಷದವರು. ಹೊಸೂರು ಮೂಲದ ಕರುಣಾಸಾಗರ್, ಪತ್ನಿ ಬಿಂದು(28), ಕೇರಳ ಮೂಲದ ಅಕ್ಷಯ್ ಗೋಯಲ್, ಇಶಿತಾ(21), ಧನುಷಾ(21), ಹುಬ್ಬಳ್ಳಿಯ ರೋಹಿತ್, ಹರಿಯಾಣ ಮೂಲದ ಉತ್ಸವ್ ಮೃತ ದುರ್ದೈವಿಗಳಾಗಿದ್ದು ಮೃತರಲ್ಲಿ ಕೆಲವರು ಕೋರಮಂಗಲದ ಪಿಜಿಯಲ್ಲಿ ವಾಸವಿದ್ದರು ಎಂದು ತಿಳಿದುಬಂದಿದೆ. ಆಡುಗೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಡರಾತ್ರಿ ರಾತ್ರಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕೋರಮಂಗಲದ ಮಂಗಳ ಕಲ್ಯಾಣಮಂಟಪದ ಬಳಿ ಫುಟ್​ಪಾತ್​ ಮೇಲಿನ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಐಷಾರಾಮಿ ಆಡಿ ಕ್ಯೂ ಕಾರು ಭೀಕರ ಅಪಘಾತ; ಕಾರಿನಲ್ಲಿದ್ದ 7 ಮಂದಿ ದುರ್ಮರಣ

(Joint ICP Traffic Dr BR Ravikanthe Gowda IPS reaction over Bengaluru Car Accident)

Published On - 6:51 am, Tue, 31 August 21

ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು