ಕೋರಮಂಗಲದಲ್ಲಿ ಐಷಾರಾಮಿ ಕಾರು ಅಪಘಾತ, ಎಸಿಪಿಯಿಂದ ತನಿಖೆ: ಸಂಚಾರಿ ಆಯುಕ್ತ ರವಿಕಾಂತೇಗೌಡ ಹೇಳಿದ್ದೇನು?

| Updated By: Skanda

Updated on: Aug 31, 2021 | 7:03 AM

ಅಪಘಾತಕ್ಕೆ ಅತಿ ವೇಗವೇ ಕಾರಣ. ನಿರ್ಲಕ್ಷ್ಯ, ವೇಗದ ಚಾಲನೆಯಿಂದ ಅಪಘಾತ ಸಂಭವಿಸಿದೆ. ಫುಟ್‌ಪಾತ್‌ ಹತ್ತಿ 2 ಬೊಲ್ಲಾರ್ಡ್ಸ್‌ಗೆ ಕಾರು ಡಿಕ್ಕಿಯಾಗಿದೆ. ಬಳಿಕ ಪಕ್ಕದ ಕಟ್ಟಡದ ಗೋಡೆಗೂ ಗುದ್ದಿದೆ ಎಂದು ಸಂಚಾರ ವಿಭಾಗದ ಜಂಟಿ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ.

ಕೋರಮಂಗಲದಲ್ಲಿ ಐಷಾರಾಮಿ ಕಾರು ಅಪಘಾತ, ಎಸಿಪಿಯಿಂದ ತನಿಖೆ: ಸಂಚಾರಿ ಆಯುಕ್ತ ರವಿಕಾಂತೇಗೌಡ ಹೇಳಿದ್ದೇನು?
ಬೆಂಗಳೂರು ಕಾರು ಅಪಘಾತ
Follow us on

ಬೆಂಗಳೂರು: ಬೆಂಗಳೂರಿನ ಕೋರಮಂಗಲದಲ್ಲಿ ತಡರಾತ್ರಿ ನಡೆದ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಾರ ವಿಭಾಗದ ಜಂಟಿ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಟಿವಿ9ಗೆ ಹೇಳಿಕೆ ನೀಡಿದ್ದಾರೆ. ತಡರಾತ್ರಿ 1.45ರಿಂದ 2 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ 7 ಜನರೂ ಮೃತಪಟ್ಟಿದ್ದಾರೆ. 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆಗೆ ದಾಖಲಿಸಿದ ವೇಳೆ ಮೃತಪಟ್ಟಿದ್ದಾರೆ. ಅಪಘಾತಕ್ಕೆ ಅತಿ ವೇಗವೇ ಕಾರಣ. ನಿರ್ಲಕ್ಷ್ಯ, ವೇಗದ ಚಾಲನೆಯಿಂದ ಅಪಘಾತ ಸಂಭವಿಸಿದೆ. ಫುಟ್‌ಪಾತ್‌ ಹತ್ತಿ 2 ಬೊಲ್ಲಾರ್ಡ್ಸ್‌ಗೆ ಕಾರು ಡಿಕ್ಕಿಯಾಗಿದೆ. ಬಳಿಕ ಪಕ್ಕದ ಕಟ್ಟಡದ ಗೋಡೆಗೂ ಗುದ್ದಿದೆ ಎಂದು ಮಾಹಿತಿ ನೀಡಿದ್ದಾರೆ.

ಕಾರಿನಲ್ಲಿದ್ದವರು ಎಲ್ಲಿಂದ ಬರುತ್ತಿದ್ದರು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಮದ್ಯ ಸೇವಿಸಿದ್ದರಾ ಎಂಬ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ. ಎಲ್ಲಾ ಬೀದಿಗಳಲ್ಲಿ ನಿರ್ಜನವಾಗಿದ್ದಾಗ ಚಾಲಕ ವೇಗವಾಗಿ ಓಡಿಸಿದ್ದಾನೆ. ಎಲ್ಲಿಗೆ ಹೋಗ್ತಿದ್ರು, ಎಲ್ಲಿಂದ ಬರ್ತಾ ಇದ್ರು ಎಂಬ ಬಗ್ಗೆ ತನಿಖೆಯಾಗುತ್ತಿದೆ ಎಂದಿದ್ದಾರೆ.

ಕಾರಿನ ಮುಂದಿನ ಸೀಟ್‌ನಲ್ಲಿ ಮೂವರು ಕುಳಿತಿದ್ದರು ಹಾಗೂ ಹಿಂಬದಿ ಸೀಟ್‌ನಲ್ಲಿ ನಾಲ್ವರು ಕುಳಿತಿದ್ದರು. ಕಾರಿನಲ್ಲಿದ್ದ 7 ಜನರಲ್ಲಿ ಯಾರೂ ಸೀಟ್ ಬೆಲ್ಟ್ ಹಾಕಿರಲಿಲ್ಲ. ಇದರಿಂದ ಕಾರಿನಲ್ಲಿದ್ದ ಏರ್‌ಬ್ಯಾಗ್ ಸಹ ಓಪನ್ ಆಗಿಲ್ಲ ಎಂದು ಬೆಂಗಳೂರಿನಲ್ಲಿ ಡಾ.ಬಿ.ಆರ್.ರವಿಕಾಂತೇಗೌಡ ಹೇಳಿದ್ದಾರೆ. ಮೃತರೆಲ್ಲರೂ 25ರಿಂದ 30 ವರ್ಷ ವಯಸ್ಸಿನವರು. ಓರ್ವ ದಂಪತಿ ಸಹ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ. ಬೆಂಗಳೂರಲ್ಲಿ ಕೆಲಸ ಮಾಡಿಕೊಂಡು ಕೆಲವರು ಪಿಜಿಯಲ್ಲಿದ್ದರು. ಮೃತರೆಲ್ಲರೂ ಸ್ನೇಹಿತರು, 20 ರಿಂದ 30 ವರ್ಷದವರು. ಹೊಸೂರು ಮೂಲದ ಕರುಣಾಸಾಗರ್, ಪತ್ನಿ ಬಿಂದು(28), ಕೇರಳ ಮೂಲದ ಅಕ್ಷಯ್ ಗೋಯಲ್, ಇಶಿತಾ(21), ಧನುಷಾ(21), ಹುಬ್ಬಳ್ಳಿಯ ರೋಹಿತ್, ಹರಿಯಾಣ ಮೂಲದ ಉತ್ಸವ್ ಮೃತ ದುರ್ದೈವಿಗಳಾಗಿದ್ದು ಮೃತರಲ್ಲಿ ಕೆಲವರು ಕೋರಮಂಗಲದ ಪಿಜಿಯಲ್ಲಿ ವಾಸವಿದ್ದರು ಎಂದು ತಿಳಿದುಬಂದಿದೆ. ಆಡುಗೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಡರಾತ್ರಿ ರಾತ್ರಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕೋರಮಂಗಲದ ಮಂಗಳ ಕಲ್ಯಾಣಮಂಟಪದ ಬಳಿ ಫುಟ್​ಪಾತ್​ ಮೇಲಿನ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ:
ಬೆಂಗಳೂರಿನಲ್ಲಿ ಐಷಾರಾಮಿ ಆಡಿ ಕ್ಯೂ ಕಾರು ಭೀಕರ ಅಪಘಾತ; ಕಾರಿನಲ್ಲಿದ್ದ 7 ಮಂದಿ ದುರ್ಮರಣ

(Joint ICP Traffic Dr BR Ravikanthe Gowda IPS reaction over Bengaluru Car Accident)

Published On - 6:51 am, Tue, 31 August 21